<p><strong>ಜೈಪುರ:</strong> ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ನಾಯಕರು ತಮ್ಮ ಕುಟುಂಬದ ಕುಡಿಗಳಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸಿದ್ದಾರೆ.</p>.<p>70–80 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ರಾಜಕಾರಣಿಗಳು ತಮ್ಮ ಮಕ್ಕಳು, ಮೊಮ್ಮಕ್ಕಳು ಮತ್ತು ಕುಟುಂಬ ಸದಸ್ಯರಿಗಾಗಿ ಟಿಕೆಟ್ ತ್ಯಾಗ ಮಾಡಲು ಮುಂದಾಗಿದ್ದಾರೆ.</p>.<p>ಬಿಜೆಪಿ ಶಾಸಕರಾದ ನಂದಲಾಲ್ ಮೀನಾ, ದೇವಿಸಿಂಗ್ ಭಟ್ಟಿ , ಕಿಸ್ನಾ ರಾಮ್ ನಾಯಿ ಮತ್ತು ಗೋಪಾಲ್ ಜೋಶಿ ತಮ್ಮ ಬದಲು ಮೊಮ್ಮಕ್ಕಳಿಗೆ ಟಿಕೆಟ್ ನೀಡುವಂತೆ ಕೇಳಿದ್ದಾರೆ. ಅವರಿಗೆ ಟಿಕೆಟ್ ದೊರೆಯುವುದು ಖಚಿತವಾಗಿದೆ.</p>.<p>ಮಾಜಿ ಉಪ ರಾಷ್ಟ್ರಪತಿ ದಿವಂಗತ ಭೈರೋನ್ ಸಿಂಗ್ ಶೇಖಾವತ್ ಅವರ ಮೊಮ್ಮಗ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಭಿಮನ್ಯು ರಜ್ವಿಗೆ ಟಿಕೆಟ್ ನೀಡುವಂತೆ ಶೇಖಾವತ್ ಕುಟುಂಬವು ವರಿಷ್ಠರ ಮೇಲೆ ಒತ್ತಡ ಹೇರುತ್ತಿದೆ.</p>.<p>ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ನಂದಲಾಲ್ ಮೀನಾ, ಗಜೇಂದ್ರ ಸಿಂಗ್ ಖಿಮ್ಸರ್ ಮತ್ತು ಜಸ್ವಂತ್ ಸಿಂಗ್ ಕೂಡ ತಮ್ಮ ವಾರಸುದಾರರಿಗಾಗಿ ಟಿಕೆಟ್ ತ್ಯಾಗಕ್ಕೆ ಸಿದ್ಧರಾಗಿದ್ದಾರೆ.</p>.<p>ಅಷ್ಟೇ ಏಕೆ, ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಮೀನಾ ಅವರಿಗೂ ಕುಟುಂಬ ರಾಜಕಾರಣದ ವ್ಯಾಮೋಹ ಕಾಡುತ್ತಿದೆ. ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಅವರು ಲಾಬಿ ಮಾಡುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಗೆಲ್ಲುವ ಮತ್ತು ಅರ್ಹ ಅಭ್ಯರ್ಥಿಗಳಿಗೆ ಮಾತ್ರ ಪಕ್ಷದ ಟಿಕೆಟ್ ನೀಡುವುದಾಗಿ ಬಿಜೆಪಿಯ ಚುನಾವಣಾ ಉಸ್ತುವಾರಿ ಹೊತ್ತಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸ್ಪಷ್ಟವಾಗಿ ಹೇಳಿದ್ದಾರೆ.</p>.<p><strong>ಕಾಂಗ್ರೆಸ್ ಕೂಡ ಹೊರತಲ್ಲ</strong></p>.<p>ಕುಟುಂಬ ರಾಜಕಾರಣದ ವ್ಯಾಮೋಹ ಬಿಜೆಪಿಗೆ ಸೀಮಿತವಾಗಿಲ್ಲ. ಇದಕ್ಕೆ ಕಾಂಗ್ರೆಸ್ ಕೂಡ ಹೊರತಾಗಿಲ್ಲ.</p>.<p>ಮಮತಾ ಶರ್ಮಾ, ಭಂವರ್ ಲಾಲ್ ಮೇಘ್ವಾಲ್, ಅಲ್ಲಾವುದ್ದೀನ್ ಝಾಡ್ ಅವರಂತಹ ಹಿರಿಯ ನಾಯಕರು ಮಕ್ಕಳು, ಮೊಮ್ಮಕ್ಕಳಿಗಾಗಿ ತಮ್ಮ ರಾಜಕೀಯ ಆಸೆ, ಆಕಾಂಕ್ಷೆಗಳನ್ನು ತ್ಯಾಗ ಮಾಡಲು ಮುಂದಾಗಿದ್ದಾರೆ.</p>.<p>ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಪುತ್ರ ವೈಭವ್ಗೆ ಹ್ಲೋಟ್ಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದಾರೆ.</p>.<p>ಭಂವಾರಿ ದೇವಿ ಲೈಂಗಿಕ ಹಗರಣದ ಆರೋಪಿ ಮತ್ತು ಮಾಜಿ ಸಚಿವ ಮಹಿಪಾಲ್ ಮದೆರ್ನಾ ಅವರ ಪುತ್ರಿ ದಿವ್ಯಾ ಮದೆರ್ನಾ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.</p>.<p>ರಾಜಸ್ಥಾನ ಚುನಾವಣೆಯಲ್ಲಿ ನಿರ್ಣಾಯಕ ಜಾಟ್ ಸಮುದಾಯಕ್ಕೆ ದಿವ್ಯಾ ಸೇರಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡ ರಾಜಸ್ಥಾನದಲ್ಲಿ ಜಾಟ್ ಸಮುದಾಯವನ್ನು ಓಲೈಸುವ ಅನಿವಾರ್ಯತೆ ಎದುರಿಸುತ್ತಿದೆ.</p>.<p>ಮಕ್ಕಳು, ಮೊಮ್ಮಕ್ಕಳು ಮತ್ತು ಬಂಧುಗಳಿಗೆ ಟಿಕೆಟ್ ಕೇಳುತ್ತಿರುವ ಪ್ರಬಲ ಕೋಮು, ಸಮುದಾಯಗಳ ನಾಯಕರು ಪಕ್ಷದ ವರಿಷ್ಠರ ಮುಂದೆ ತಮ್ಮ ಜಾತಿಯ ಲೆಕ್ಕಾಚಾರ ಬಿಚ್ಚಿಡುತ್ತಿದ್ದಾರೆ. ವರಿಷ್ಠರ ಮನವರಿಕೆಯ ಕಸರತ್ತು ನಡೆಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಂಡಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ನಾಯಕರು ತಮ್ಮ ಕುಟುಂಬದ ಕುಡಿಗಳಿಗೆ ಟಿಕೆಟ್ ಕೊಡಿಸಲು ಲಾಬಿ ನಡೆಸಿದ್ದಾರೆ.</p>.<p>70–80 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ರಾಜಕಾರಣಿಗಳು ತಮ್ಮ ಮಕ್ಕಳು, ಮೊಮ್ಮಕ್ಕಳು ಮತ್ತು ಕುಟುಂಬ ಸದಸ್ಯರಿಗಾಗಿ ಟಿಕೆಟ್ ತ್ಯಾಗ ಮಾಡಲು ಮುಂದಾಗಿದ್ದಾರೆ.</p>.<p>ಬಿಜೆಪಿ ಶಾಸಕರಾದ ನಂದಲಾಲ್ ಮೀನಾ, ದೇವಿಸಿಂಗ್ ಭಟ್ಟಿ , ಕಿಸ್ನಾ ರಾಮ್ ನಾಯಿ ಮತ್ತು ಗೋಪಾಲ್ ಜೋಶಿ ತಮ್ಮ ಬದಲು ಮೊಮ್ಮಕ್ಕಳಿಗೆ ಟಿಕೆಟ್ ನೀಡುವಂತೆ ಕೇಳಿದ್ದಾರೆ. ಅವರಿಗೆ ಟಿಕೆಟ್ ದೊರೆಯುವುದು ಖಚಿತವಾಗಿದೆ.</p>.<p>ಮಾಜಿ ಉಪ ರಾಷ್ಟ್ರಪತಿ ದಿವಂಗತ ಭೈರೋನ್ ಸಿಂಗ್ ಶೇಖಾವತ್ ಅವರ ಮೊಮ್ಮಗ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಭಿಮನ್ಯು ರಜ್ವಿಗೆ ಟಿಕೆಟ್ ನೀಡುವಂತೆ ಶೇಖಾವತ್ ಕುಟುಂಬವು ವರಿಷ್ಠರ ಮೇಲೆ ಒತ್ತಡ ಹೇರುತ್ತಿದೆ.</p>.<p>ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ನಂದಲಾಲ್ ಮೀನಾ, ಗಜೇಂದ್ರ ಸಿಂಗ್ ಖಿಮ್ಸರ್ ಮತ್ತು ಜಸ್ವಂತ್ ಸಿಂಗ್ ಕೂಡ ತಮ್ಮ ವಾರಸುದಾರರಿಗಾಗಿ ಟಿಕೆಟ್ ತ್ಯಾಗಕ್ಕೆ ಸಿದ್ಧರಾಗಿದ್ದಾರೆ.</p>.<p>ಅಷ್ಟೇ ಏಕೆ, ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ಲಾಲ್ ಮೀನಾ ಅವರಿಗೂ ಕುಟುಂಬ ರಾಜಕಾರಣದ ವ್ಯಾಮೋಹ ಕಾಡುತ್ತಿದೆ. ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಅವರು ಲಾಬಿ ಮಾಡುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.</p>.<p>ಗೆಲ್ಲುವ ಮತ್ತು ಅರ್ಹ ಅಭ್ಯರ್ಥಿಗಳಿಗೆ ಮಾತ್ರ ಪಕ್ಷದ ಟಿಕೆಟ್ ನೀಡುವುದಾಗಿ ಬಿಜೆಪಿಯ ಚುನಾವಣಾ ಉಸ್ತುವಾರಿ ಹೊತ್ತಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸ್ಪಷ್ಟವಾಗಿ ಹೇಳಿದ್ದಾರೆ.</p>.<p><strong>ಕಾಂಗ್ರೆಸ್ ಕೂಡ ಹೊರತಲ್ಲ</strong></p>.<p>ಕುಟುಂಬ ರಾಜಕಾರಣದ ವ್ಯಾಮೋಹ ಬಿಜೆಪಿಗೆ ಸೀಮಿತವಾಗಿಲ್ಲ. ಇದಕ್ಕೆ ಕಾಂಗ್ರೆಸ್ ಕೂಡ ಹೊರತಾಗಿಲ್ಲ.</p>.<p>ಮಮತಾ ಶರ್ಮಾ, ಭಂವರ್ ಲಾಲ್ ಮೇಘ್ವಾಲ್, ಅಲ್ಲಾವುದ್ದೀನ್ ಝಾಡ್ ಅವರಂತಹ ಹಿರಿಯ ನಾಯಕರು ಮಕ್ಕಳು, ಮೊಮ್ಮಕ್ಕಳಿಗಾಗಿ ತಮ್ಮ ರಾಜಕೀಯ ಆಸೆ, ಆಕಾಂಕ್ಷೆಗಳನ್ನು ತ್ಯಾಗ ಮಾಡಲು ಮುಂದಾಗಿದ್ದಾರೆ.</p>.<p>ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಪುತ್ರ ವೈಭವ್ಗೆ ಹ್ಲೋಟ್ಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದಾರೆ.</p>.<p>ಭಂವಾರಿ ದೇವಿ ಲೈಂಗಿಕ ಹಗರಣದ ಆರೋಪಿ ಮತ್ತು ಮಾಜಿ ಸಚಿವ ಮಹಿಪಾಲ್ ಮದೆರ್ನಾ ಅವರ ಪುತ್ರಿ ದಿವ್ಯಾ ಮದೆರ್ನಾ ಕೂಡಾ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.</p>.<p>ರಾಜಸ್ಥಾನ ಚುನಾವಣೆಯಲ್ಲಿ ನಿರ್ಣಾಯಕ ಜಾಟ್ ಸಮುದಾಯಕ್ಕೆ ದಿವ್ಯಾ ಸೇರಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡ ರಾಜಸ್ಥಾನದಲ್ಲಿ ಜಾಟ್ ಸಮುದಾಯವನ್ನು ಓಲೈಸುವ ಅನಿವಾರ್ಯತೆ ಎದುರಿಸುತ್ತಿದೆ.</p>.<p>ಮಕ್ಕಳು, ಮೊಮ್ಮಕ್ಕಳು ಮತ್ತು ಬಂಧುಗಳಿಗೆ ಟಿಕೆಟ್ ಕೇಳುತ್ತಿರುವ ಪ್ರಬಲ ಕೋಮು, ಸಮುದಾಯಗಳ ನಾಯಕರು ಪಕ್ಷದ ವರಿಷ್ಠರ ಮುಂದೆ ತಮ್ಮ ಜಾತಿಯ ಲೆಕ್ಕಾಚಾರ ಬಿಚ್ಚಿಡುತ್ತಿದ್ದಾರೆ. ವರಿಷ್ಠರ ಮನವರಿಕೆಯ ಕಸರತ್ತು ನಡೆಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>