<p><strong>ಲೇಹ್</strong>: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಭಾರತೀಯ ಸೈನಿಕರೊಂದಿಗೆ ಹೋಳಿ ಹಬ್ಬವನ್ನು ಇಲ್ಲಿ ಆಚರಿಸಿದರು. ಪ್ರತಿಕೂಲ ಹವಾಮಾನದಲ್ಲೂ ಶತ್ರುರಾಷ್ಟ್ರಗಳ ದಾಳಿಯಿಂದ ದೇಶವನ್ನು ರಕ್ಷಿಸುತ್ತಿರುವ ಸೈನಿಕರನ್ನು ಶ್ಲಾಘಿಸಿದರು.</p>.<p>ಜಗತ್ತಿನ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ನಲ್ಲಿ ಹೋಳಿ ಆಚರಿಸಲು ಸಿಂಗ್ ಮೊದಲು ತೀರ್ಮಾನಿಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಕಾರಣದಿಂದ ಅಲ್ಲಿಗೆ ಭೇಟಿ ನೀಡುವ ಕಾರ್ಯಕ್ರಮ ರದ್ದಾಯಿತು.</p>.<p>ಸಿಂಗ್, ಸೈನಿಕರ ಹಣೆಗೆ ತಿಲಕವನ್ನು ಇಟ್ಟರು. ಬಳಿಕ ಮಾತನಾಡಿ, ‘ರಾಷ್ಟ್ರ ರಾಜಧಾನಿಯಾಗಿ ದೆಹಲಿ, ಆರ್ಥಿಕ ರಾಜಧಾನಿಯಾಗಿ ಮುಂಬೈ ಮತ್ತು ತಾಂತ್ರಿಕ ರಾಜಧಾನಿಯಾಗಿ ಬೆಂಗಳೂರನ್ನು ಹೊಂದಿರುವಂತೆ ಲಡಾಕ್, ಧೈರ್ಯ ಮತ್ತು ಶೌರ್ಯದ ರಾಜಧಾನಿ’ ಎಂದು ಹೇಳಿದರು.</p>.<p>‘ತೀವ್ರ ಚಳಿಯ ವಾತಾವರಣದಿಂದಾಗಿ ಎಲ್ಲರೂ ಮನೆಯೊಳಗೆ ಬೆಚ್ಚಗೆ ಇರಲು ಬಯಸಿದರೆ, ನೀವು ದೇಶಕ್ಕಾಗಿ ಎದೆಯೊಡ್ಡಿ ಹೋರಾಡುತ್ತಿದ್ದೀರಿ. ನಿಮ್ಮ ದೇಶಭಕ್ತಿ ಮತ್ತು ಸೇವೆಗೆ ನಾವು ಎಂದಿಗೂ ಚಿರಋಣಿ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿನ ಇಲ್ಲಿನ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೇಹ್</strong>: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಭಾರತೀಯ ಸೈನಿಕರೊಂದಿಗೆ ಹೋಳಿ ಹಬ್ಬವನ್ನು ಇಲ್ಲಿ ಆಚರಿಸಿದರು. ಪ್ರತಿಕೂಲ ಹವಾಮಾನದಲ್ಲೂ ಶತ್ರುರಾಷ್ಟ್ರಗಳ ದಾಳಿಯಿಂದ ದೇಶವನ್ನು ರಕ್ಷಿಸುತ್ತಿರುವ ಸೈನಿಕರನ್ನು ಶ್ಲಾಘಿಸಿದರು.</p>.<p>ಜಗತ್ತಿನ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್ನಲ್ಲಿ ಹೋಳಿ ಆಚರಿಸಲು ಸಿಂಗ್ ಮೊದಲು ತೀರ್ಮಾನಿಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಕಾರಣದಿಂದ ಅಲ್ಲಿಗೆ ಭೇಟಿ ನೀಡುವ ಕಾರ್ಯಕ್ರಮ ರದ್ದಾಯಿತು.</p>.<p>ಸಿಂಗ್, ಸೈನಿಕರ ಹಣೆಗೆ ತಿಲಕವನ್ನು ಇಟ್ಟರು. ಬಳಿಕ ಮಾತನಾಡಿ, ‘ರಾಷ್ಟ್ರ ರಾಜಧಾನಿಯಾಗಿ ದೆಹಲಿ, ಆರ್ಥಿಕ ರಾಜಧಾನಿಯಾಗಿ ಮುಂಬೈ ಮತ್ತು ತಾಂತ್ರಿಕ ರಾಜಧಾನಿಯಾಗಿ ಬೆಂಗಳೂರನ್ನು ಹೊಂದಿರುವಂತೆ ಲಡಾಕ್, ಧೈರ್ಯ ಮತ್ತು ಶೌರ್ಯದ ರಾಜಧಾನಿ’ ಎಂದು ಹೇಳಿದರು.</p>.<p>‘ತೀವ್ರ ಚಳಿಯ ವಾತಾವರಣದಿಂದಾಗಿ ಎಲ್ಲರೂ ಮನೆಯೊಳಗೆ ಬೆಚ್ಚಗೆ ಇರಲು ಬಯಸಿದರೆ, ನೀವು ದೇಶಕ್ಕಾಗಿ ಎದೆಯೊಡ್ಡಿ ಹೋರಾಡುತ್ತಿದ್ದೀರಿ. ನಿಮ್ಮ ದೇಶಭಕ್ತಿ ಮತ್ತು ಸೇವೆಗೆ ನಾವು ಎಂದಿಗೂ ಚಿರಋಣಿ’ ಎಂದು ಹೇಳಿದರು.</p>.<p>ಇದೇ ಸಂದರ್ಭದಲ್ಲಿನ ಇಲ್ಲಿನ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>