<p><strong>ನವದೆಹಲಿ:</strong> ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಾಮೆಡಿ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಬ್ಬರು ಶೂಟರ್ಗಳು ಸೇರಿದಂತೆ ಮೂವರನ್ನು ಪೊಲೀಸರು ಚಂಡೀಗಢದಲ್ಲಿ ಬಂಧಿಸಿದ್ದಾರೆ. </p><p>ರಾಜಸ್ಥಾನ ಪೊಲೀಸರೊಂದಿಗೆ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.</p><p>ಡಿಸೆಂಬರ್ 5 ರಂದು ಸುಖದೇವ್ ಸಿಂಗ್ ಅವರನ್ನು ಜೈಪುರದಲ್ಲಿರುವ ಅವರ ಮನೆಯ ಲಿವಿಂಗ್ ರೂಮಿನಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ದುಷ್ಕರ್ಮಿಗಳು ಗುಂಡು ಹಾರಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.</p><p>ಹಂತಕರನ್ನು ಜೈಪುರದ ರೋಹಿತ್ ರಾಥೋಡ್ ಮತ್ತು ಹರಿಯಾಣದ ಮಹೇಂದ್ರಗಢ್ನ ನಿತಿನ್ ಫೌಜಿ ಎಂದು ಪೊಲೀಸರು ಗುರುತಿಸಿದ್ದರು. ಅವರ ಬಗ್ಗೆ ಮಾಹಿತಿ ನೀಡಿದರೆ ₹5 ಲಕ್ಷ ನಗದು ಬಹುಮಾನವನ್ನು ನೀಡುವುದಾಗಿ ಘೋಷಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಚಂಡೀಗಢದ ಸೆಕ್ಟರ್ 22ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅವರ ಜೊತೆಯಲ್ಲಿ ಮತ್ತೊಬ್ಬ ಸಹಚರ ಉಧಮ್ ಸಿಂಗ್ ಕೂಡ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಂಧಿತ ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಜೈಪುರ ಪೊಲೀಸರ ವಶಕ್ಕೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಾಮೆಡಿ ಹತ್ಯೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಬ್ಬರು ಶೂಟರ್ಗಳು ಸೇರಿದಂತೆ ಮೂವರನ್ನು ಪೊಲೀಸರು ಚಂಡೀಗಢದಲ್ಲಿ ಬಂಧಿಸಿದ್ದಾರೆ. </p><p>ರಾಜಸ್ಥಾನ ಪೊಲೀಸರೊಂದಿಗೆ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.</p><p>ಡಿಸೆಂಬರ್ 5 ರಂದು ಸುಖದೇವ್ ಸಿಂಗ್ ಅವರನ್ನು ಜೈಪುರದಲ್ಲಿರುವ ಅವರ ಮನೆಯ ಲಿವಿಂಗ್ ರೂಮಿನಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ದುಷ್ಕರ್ಮಿಗಳು ಗುಂಡು ಹಾರಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.</p><p>ಹಂತಕರನ್ನು ಜೈಪುರದ ರೋಹಿತ್ ರಾಥೋಡ್ ಮತ್ತು ಹರಿಯಾಣದ ಮಹೇಂದ್ರಗಢ್ನ ನಿತಿನ್ ಫೌಜಿ ಎಂದು ಪೊಲೀಸರು ಗುರುತಿಸಿದ್ದರು. ಅವರ ಬಗ್ಗೆ ಮಾಹಿತಿ ನೀಡಿದರೆ ₹5 ಲಕ್ಷ ನಗದು ಬಹುಮಾನವನ್ನು ನೀಡುವುದಾಗಿ ಘೋಷಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಚಂಡೀಗಢದ ಸೆಕ್ಟರ್ 22ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಅವರ ಜೊತೆಯಲ್ಲಿ ಮತ್ತೊಬ್ಬ ಸಹಚರ ಉಧಮ್ ಸಿಂಗ್ ಕೂಡ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಬಂಧಿತ ಆರೋಪಿಗಳನ್ನು ಹೆಚ್ಚಿನ ತನಿಖೆಗಾಗಿ ಜೈಪುರ ಪೊಲೀಸರ ವಶಕ್ಕೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>