<p><strong>ಜೈಪುರ:</strong> ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಇಂದು (ಮಂಗಳವಾರ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಸೋನಿಯಾ ಗಾಂಧಿ ಹಾಗೂ ಭಾರತೀಯ ಜನತಾ ಪಕ್ಷದ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ಪ್ರಕಟಿಸಿದ್ದಾರೆ. </p><p>ಮಂಗಳವಾರ ನಾಮಪತ್ರ ಹಿಂತೆಗೆಯುವ ಕೊನೆಯ ದಿನಾಂಕವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿಲ್ಲದ ಕಾರಣ ಈ ಮೂವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಹಾವೀರ್ ಪ್ರಸಾದ್ ಶರ್ಮಾ ಘೋಷಿಸಿದರು. </p>.ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಕಣಕ್ಕೆ, ನಾಮಪತ್ರ ಸಲ್ಲಿಕೆ.ಪಿ.ವಿ. ನರಸಿಂಹ ರಾವ್ ಅವರಿಗೆ ಭಾರತ ರತ್ನ: ಸ್ವಾಗತಿಸಿದ ಸೋನಿಯಾ ಗಾಂಧಿ.<p>ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಬಿಜೆಪಿಯ ಭೂಪೇಂದ್ರ ಯಾದವ್ ಅವರ ರಾಜ್ಯಸಭೆ ಸದಸ್ಯತ್ವದ ಅವಧಿ ಏಪ್ರಿಲ್ 3ರಂದು ಕೊನೆಗೊಳ್ಳಲಿದೆ. ಬಿಜೆಪಿಯ ಕಿರೋಡಿ ಲಾಲ್ ಮೀಣಾ ಕಳೆದ ಡಿಸೆಂಬರ್ನಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.</p><p>ಇದರೊಂದಿಗೆ ರಾಜಸ್ಥಾನಕ್ಕಿದ್ದ 10 ರಾಜ್ಯಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 6 ಮತ್ತು ಬಿಜೆಪಿ 4 ಸದಸ್ಯರನ್ನು ಹೊಂದಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಇಂದು (ಮಂಗಳವಾರ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಸೋನಿಯಾ ಗಾಂಧಿ ಹಾಗೂ ಭಾರತೀಯ ಜನತಾ ಪಕ್ಷದ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ಪ್ರಕಟಿಸಿದ್ದಾರೆ. </p><p>ಮಂಗಳವಾರ ನಾಮಪತ್ರ ಹಿಂತೆಗೆಯುವ ಕೊನೆಯ ದಿನಾಂಕವಾಗಿತ್ತು. ಬೇರೆ ಯಾವುದೇ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿಲ್ಲದ ಕಾರಣ ಈ ಮೂವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮಹಾವೀರ್ ಪ್ರಸಾದ್ ಶರ್ಮಾ ಘೋಷಿಸಿದರು. </p>.ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಕಣಕ್ಕೆ, ನಾಮಪತ್ರ ಸಲ್ಲಿಕೆ.ಪಿ.ವಿ. ನರಸಿಂಹ ರಾವ್ ಅವರಿಗೆ ಭಾರತ ರತ್ನ: ಸ್ವಾಗತಿಸಿದ ಸೋನಿಯಾ ಗಾಂಧಿ.<p>ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಬಿಜೆಪಿಯ ಭೂಪೇಂದ್ರ ಯಾದವ್ ಅವರ ರಾಜ್ಯಸಭೆ ಸದಸ್ಯತ್ವದ ಅವಧಿ ಏಪ್ರಿಲ್ 3ರಂದು ಕೊನೆಗೊಳ್ಳಲಿದೆ. ಬಿಜೆಪಿಯ ಕಿರೋಡಿ ಲಾಲ್ ಮೀಣಾ ಕಳೆದ ಡಿಸೆಂಬರ್ನಲ್ಲಿ ಶಾಸಕರಾಗಿ ಆಯ್ಕೆಯಾದ ಬಳಿಕ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.</p><p>ಇದರೊಂದಿಗೆ ರಾಜಸ್ಥಾನಕ್ಕಿದ್ದ 10 ರಾಜ್ಯಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 6 ಮತ್ತು ಬಿಜೆಪಿ 4 ಸದಸ್ಯರನ್ನು ಹೊಂದಿದಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>