ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶದ ಏಕತೆ ನಮ್ಮ ಮೊದಲ ಆದ್ಯತೆ: 1947ರ ದೇಶ ವಿಭಜನೆ ಘಟನೆ ನೆನೆದ ಪ್ರಧಾನಿ ಮೋದಿ

Published : 14 ಆಗಸ್ಟ್ 2024, 7:29 IST
Last Updated : 14 ಆಗಸ್ಟ್ 2024, 7:29 IST
ಫಾಲೋ ಮಾಡಿ
Comments

ನವದೆಹಲಿ: ದೇಶದ ಏಕತೆ, ಸಹೋದರತ್ವದ ಬಂಧಗಳನ್ನು ರಕ್ಷಿಸುವುದು ಮೊದಲ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ದೇಶ ವಿಭಜನೆಯ ವರ್ಷಾಚರಣೆಯ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘1947ರ ದೇಶ ವಿಭಜನೆಯ ಕರಾಳ ದಿನ‘ದಂದು ಲಕ್ಷಾಂತರ ಜನರು ಸ್ಥಳಾಂತರಗೊಂಡರು, ಸಾಕಷ್ಟು ಮಂದಿ ಮೃತಪಟ್ಟಿರು. ನಿರಾಶ್ರಿತರಾದ ಲಕ್ಷಾಂತರ ಮಂದಿ ತಮ್ಮ ಜೀವನವನ್ನು ಪುನಃ ಕಟ್ಟಿಕೊಳ್ಳಲು ಸಾಕಷ್ಟು ಶ್ರಮಿಸಿದ್ದಾರೆ. ಅವರ ಧೈರ್ಯವು ಮೆಚ್ಚುವಂತಹದ್ದು ಎಂದು ಬರೆದುಕೊಂಡಿದ್ದಾರೆ.

ದೇಶದ ಏಕತೆ ಮತ್ತು ಸಹೋದರತ್ವದ ಬಂಧಗಳನ್ನು ಕಾಪಡಿಕೊಳ್ಳುವುದು ನಮ್ಮ ಬದ್ಧತೆಯಾಗಿದೆ ಎಂದು ಮೋದಿ ಪುನರುಚ್ಚರಿಸಿದರು.

ದೇಶ ವಿಭಜನೆ ಸಮಯದಲ್ಲಿ ಮೃತಪಟ್ಟವರ ಸ್ಮರಣಾರ್ಥವಾಗಿ ಆಗಸ್ಟ್ 14ರಂದು ‘ ದೇಶ ವಿಭಜನೆಯ ಕರಾಳ ದಿನವೆಂದು’ ಆಚರಿಸಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT