<p><strong>ನವದೆಹಲಿ</strong>: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಪ್ರಸಕ್ತ ವರ್ಷ ನಡೆದಿದ್ದ ‘ನೀಟ್’ (ಯುಜಿ) ಪರೀಕ್ಷೆಯಲ್ಲಿ 1,500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಲಾಗಿರುವ ಕೃಪಾಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯ ನಾಲ್ಕು ಸದಸ್ಯರ ಸಮಿತಿ ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಶನಿವಾರ ತಿಳಿಸಿದೆ.</p><p>ಈ ಬಾರಿಯ ಪರೀಕ್ಷೆಯಲ್ಲಿ ಒಂದೇ ಪರೀಕ್ಷಾ ಕೇಂದ್ರದ ಆರು ಅಭ್ಯರ್ಥಿಗಳು ಸೇರಿದಂತೆ ಒಟ್ಟು 67 ಅಭ್ಯರ್ಥಿಗಳು ಮೊದಲ ರ್ಯಾಂಕ್ ಪಡೆದಿದ್ದಾರೆ. ಇವರೂ ಸೇರಿದಂತೆ ಕೆಲ ಅಭ್ಯರ್ಥಿಗಳಿಗೆ ಹೆಚ್ಚು ಅಂಕಗಳು ಬಂದಿರುವುದಕ್ಕೆ ನೀಟ್ ಆಕಾಂಕ್ಷಿಗಳು ಅನುಮಾನ ವ್ಯಕ್ತಪಡಿಸಿ, ಆರೋಪಗಳನ್ನು ಮಾಡಿದ ಬೆನ್ನಲ್ಲೇ ಶಿಕ್ಷಣ ಸಚಿವಾಲಯ ಈ ಕ್ರಮ ತೆಗೆದುಕೊಂಡಿದೆ. </p><p>ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾಜಿ ಅಧ್ಯಕ್ಷರ ನೇತೃತ್ವದ ಸಮಿತಿಯು ಆರೋಪಗಳನ್ನು ಪರಿಶೀಲಿಸಿ, ವಾರದೊಳಗೆ ತನ್ನ ಶಿಫಾರಸುಗಳ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ಅಭ್ಯರ್ಥಿಗಳ ಫಲಿತಾಂಶ ಪರಿಷ್ಕರಿಸಬಹುದು ಎಂದು ಎನ್ಟಿಎ ಮಹಾನಿರ್ದೇಶಕ ಸುಬೋಧ್<br>ಕುಮಾರ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p><p>ಕೃಪಾಂಕ ನೀಡುವಿಕೆಯು ಪರೀಕ್ಷಾ ಅರ್ಹತಾ ಮಾನದಂಡಗಳ ಮೇಲಾಗಲಿ, ಪ್ರವೇಶ ಪ್ರಕ್ರಿಯೆಯ ಮೇಲಾಗಲಿ ಪರಿಣಾಮ ಬೀರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.</p><p>ಆದಾಗ್ಯೂ, ಈ ಸಂಬಂಧ ಯಾವುದೇ ಅಕ್ರಮಗಳು ನಡೆದಿಲ್ಲ ಎಂದು ಪ್ರತಿಕ್ರಿಯಿಸಿದ ಅವರು, ಎನ್ಸಿಇಆರ್ಟಿ ಪಠ್ಯ ಪುಸ್ತಕಗಳಲ್ಲಿ ಆದ ಬದಲಾವಣೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಮಯ ನಷ್ಟವಾದ ಅಭ್ಯರ್ಥಿಗಳಿಗೆ ಕೃಪಾಂಕಗಳನ್ನು ನೀಡಲಾಗಿದೆ. ಈ ಕಾರಣದಿಂದ ಕೆಲವರಿಗೆ ಹೆಚ್ಚಿನ ಅಂಕಗಳು ದೊರೆತಿವೆ ಎಂದು ವಿವರಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪಗಳನ್ನೂ ಅವರು ನಿರಾಕರಿಸಿದರು.</p><p><strong>ಮರು ಪರೀಕ್ಷೆಗೆ ಆಗ್ರಹ:</strong> ‘ಮೇಘಾಲಯ, ಹರಿಯಾಣದ ಬಹದ್ದೂರ್ಗಢ, ಛತ್ತೀಸಗಢದ ದಂತೇವಾಡ, ಬಲೋಧ್, ಗುಜರಾತ್ನ ಸೂರತ್ ಮತ್ತು ಚಂಡೀಗಢದ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಆದ ಪರೀಕ್ಷಾ ಸಮಯ ನಷ್ಟವನ್ನು ಸರಿದೂಗಿಸಲು ನೀಡಲಾಗಿರುವ ‘ಕೃಪಾಂಕ’ಗಳಿಂದ ಕೆಲವರಿಗೆ ಹೆಚ್ಚು ಅಂಕಗಳು ದೊರೆತಿವೆ. ಇದು ಇತರ ಅಭ್ಯರ್ಥಿಗಳ ಅವಕಾಶವನ್ನು ಕಸಿದಿದೆ. ಹೀಗಾಗಿ ಆ ಕೇಂದ್ರಗಳಲ್ಲಿ ಮರು ಪರೀಕ್ಷೆ ನಡೆಸಬೇಕು’ ಎಂಬ ಆಗ್ರಹ ಅಭ್ಯರ್ಥಿಗಳು ಮತ್ತು ಅವರ ಪೋಷಕರಿಂದ ವ್ಯಕ್ತವಾಗಿದೆ.</p><p>ಕೆಲ ಕೇಂದ್ರಗಳ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಂಗ್, ‘ಸಮಿತಿಯ ಶಿಫಾರಸುಗಳನ್ನು ಆಧರಿಸಿ ನಿರ್ಧರಿಸಲಾಗುವುದು’ ಎಂದರು.</p><p>‘ಸಮಯ ನಷ್ಟವಾಗಿರುವ ಅಭ್ಯರ್ಥಿಗಳು ಅಥವಾ ಇತರ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದು ಸಮಿತಿ ರಚನೆಯ ಹಿಂದಿನ ಉದ್ದೇಶವಾಗಿದೆ’ ಎಂದು ಅವರು ತಿಳಿಸಿದರು.</p><p><strong>ಪರೀಕ್ಷೆ ರದ್ದಿಗೆ ಮಹಾರಾಷ್ಟ್ರ ಆಗ್ರಹ:</strong> ‘ನೀಟ್’ ಫಲಿತಾಂಶದಲ್ಲಿ ಮಹಾರಾಷ್ಟ್ರದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಈ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಬಿಜೆಪಿ ಮೈತ್ರಿಕೂಟ ಎನ್ಡಿಎಗೆ ಸೇರಿರುವ ಪಕ್ಷದ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಕೇಂದ್ರ ಸರ್ಕಾರವನ್ನು ಕೋರಿದೆ.</p><p>ಫೆಡರಲ್ ವ್ಯವಸ್ಥೆಗೆ ವಿರುದ್ಧ– ಡಿಎಂಕೆ: ಇತ್ತೀಚಿಗೆ ಪ್ರಕಟವಾದ ನೀಟ್ ಫಲಿತಾಂಶಗಳು ಸಾಕಷ್ಟು ಗೊಂದಲ ಮೂಡಿಸಿದ್ದು, ನೀಟ್ ವಿರೋಧಿಸುವ ಡಿಎಂಕೆ ನಿಲುವನ್ನು ಸಮರ್ಥಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ‘ಎಕ್ಸ್’ನಲ್ಲಿ ಹೇಳಿದ್ದಾರೆ. ಅಲ್ಲದೆ ‘ನೀಟ್’ ಸಾಮಾಜಿಕ ನ್ಯಾಯ ಮತ್ತು ದೇಶದ ಫೆಡರಲ್ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.</p><p><strong>ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆಗ್ರಹ</strong></p><p>ಇದು ದೊಡ್ಡ ಹಗರಣವಾಗಿದ್ದು, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಈ ಕುರಿತು ತನಿಖೆ ನಡೆಸಬೇಕು ಎಂದು ಕಾಂಗ್ರೆಸ್, ಎಎಪಿ ಮತ್ತು ಎಸ್ಪಿ ಆಗ್ರಹಿಸಿವೆ.</p><p>‘ಬಿಜೆಪಿ ಆಡಳಿತದಲ್ಲಿ ಪರೀಕ್ಷಾ ಅಕ್ರಮಗಳು ಹೆಚ್ಚಾಗಿವೆ. ಪ್ರಶ್ನೆ ಪತ್ರಿಕೆ ಸೋರಿಕೆ, ನಕಲಿ ಅಭ್ಯರ್ಥಿ ಪ್ರಕರಣಗಳು ನಡೆದಿವೆ. ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮತ್ತು ಫಲಿತಾಂಶ ನಿರ್ವಹಣೆಯು ದಂಧೆಯಾಗಿ ಬದಲಾಗುತ್ತಿದೆ’ ಎಂದು ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ‘ಎಕ್ಸ್’ನಲ್ಲಿ ಆರೋಪಿಸಿದ್ದಾರೆ.</p><p>‘ಭಾರತವನ್ನು ವಿಶ್ವಗುರುವನ್ನಾಗಿ ಮಾಡುವುದಾಗಿ ಬಿಜೆಪಿ ಹೇಳುತ್ತಿದೆ. ಆದರೆ ಅವರಿಗೆ ಪ್ರವೇಶ ಪರೀಕ್ಷೆಗಳನ್ನೇ ಸರಿಯಾಗಿ ನಡೆಸಲು ಬರುತ್ತಿಲ್ಲ’ ಎಂದು ಎಎಪಿ ನಾಯಕ ಜಾಸ್ಮಿನ್ ಶಾ ಸುದ್ದಿಗೋಷ್ಠಿಯಲ್ಲಿ ಲೇವಡಿ ಮಾಡಿದರು.</p><p>‘ಬಿಜೆಪಿ ಆಡಳಿತವಿರುವ ಗುಜರಾತ್ನಲ್ಲಿ ಕಳೆದ 11 ವರ್ಷಗಳಲ್ಲಿ 11 ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಹಾಗೆಯೇ ಉತ್ತರ ಪ್ರದೇಶದಲ್ಲಿ ಪೊಲೀಸ್ ಕಾನ್ಸ್ಟೆಬಲ್ಗಳು ಮತ್ತು ಶಿಕ್ಷಕರ ನೇಮಕಾತಿಯ ಪ್ರಶ್ನೆ ಪತ್ರಿಕೆಗಳೂ ಸೋರಿಕೆಯಾಗಿವೆ. ಈ ಮೂಲಕ ಬಿಜೆಪಿ ಲಕ್ಷಾಂತರ ಯುವ ಜನರ ಭವಿಷ್ಯವನ್ನು ಅನಿಶ್ಚಿತಗೊಳಿಸಿದೆ’ ಎಂದು ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಪ್ರಸಕ್ತ ವರ್ಷ ನಡೆದಿದ್ದ ‘ನೀಟ್’ (ಯುಜಿ) ಪರೀಕ್ಷೆಯಲ್ಲಿ 1,500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಲಾಗಿರುವ ಕೃಪಾಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯ ನಾಲ್ಕು ಸದಸ್ಯರ ಸಮಿತಿ ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಶನಿವಾರ ತಿಳಿಸಿದೆ.</p><p>ಈ ಬಾರಿಯ ಪರೀಕ್ಷೆಯಲ್ಲಿ ಒಂದೇ ಪರೀಕ್ಷಾ ಕೇಂದ್ರದ ಆರು ಅಭ್ಯರ್ಥಿಗಳು ಸೇರಿದಂತೆ ಒಟ್ಟು 67 ಅಭ್ಯರ್ಥಿಗಳು ಮೊದಲ ರ್ಯಾಂಕ್ ಪಡೆದಿದ್ದಾರೆ. ಇವರೂ ಸೇರಿದಂತೆ ಕೆಲ ಅಭ್ಯರ್ಥಿಗಳಿಗೆ ಹೆಚ್ಚು ಅಂಕಗಳು ಬಂದಿರುವುದಕ್ಕೆ ನೀಟ್ ಆಕಾಂಕ್ಷಿಗಳು ಅನುಮಾನ ವ್ಯಕ್ತಪಡಿಸಿ, ಆರೋಪಗಳನ್ನು ಮಾಡಿದ ಬೆನ್ನಲ್ಲೇ ಶಿಕ್ಷಣ ಸಚಿವಾಲಯ ಈ ಕ್ರಮ ತೆಗೆದುಕೊಂಡಿದೆ. </p><p>ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾಜಿ ಅಧ್ಯಕ್ಷರ ನೇತೃತ್ವದ ಸಮಿತಿಯು ಆರೋಪಗಳನ್ನು ಪರಿಶೀಲಿಸಿ, ವಾರದೊಳಗೆ ತನ್ನ ಶಿಫಾರಸುಗಳ ವರದಿಯನ್ನು ಸಲ್ಲಿಸಲಿದೆ. ಆ ಬಳಿಕ ಅಭ್ಯರ್ಥಿಗಳ ಫಲಿತಾಂಶ ಪರಿಷ್ಕರಿಸಬಹುದು ಎಂದು ಎನ್ಟಿಎ ಮಹಾನಿರ್ದೇಶಕ ಸುಬೋಧ್<br>ಕುಮಾರ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p><p>ಕೃಪಾಂಕ ನೀಡುವಿಕೆಯು ಪರೀಕ್ಷಾ ಅರ್ಹತಾ ಮಾನದಂಡಗಳ ಮೇಲಾಗಲಿ, ಪ್ರವೇಶ ಪ್ರಕ್ರಿಯೆಯ ಮೇಲಾಗಲಿ ಪರಿಣಾಮ ಬೀರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.</p><p>ಆದಾಗ್ಯೂ, ಈ ಸಂಬಂಧ ಯಾವುದೇ ಅಕ್ರಮಗಳು ನಡೆದಿಲ್ಲ ಎಂದು ಪ್ರತಿಕ್ರಿಯಿಸಿದ ಅವರು, ಎನ್ಸಿಇಆರ್ಟಿ ಪಠ್ಯ ಪುಸ್ತಕಗಳಲ್ಲಿ ಆದ ಬದಲಾವಣೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಸಮಯ ನಷ್ಟವಾದ ಅಭ್ಯರ್ಥಿಗಳಿಗೆ ಕೃಪಾಂಕಗಳನ್ನು ನೀಡಲಾಗಿದೆ. ಈ ಕಾರಣದಿಂದ ಕೆಲವರಿಗೆ ಹೆಚ್ಚಿನ ಅಂಕಗಳು ದೊರೆತಿವೆ ಎಂದು ವಿವರಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪಗಳನ್ನೂ ಅವರು ನಿರಾಕರಿಸಿದರು.</p><p><strong>ಮರು ಪರೀಕ್ಷೆಗೆ ಆಗ್ರಹ:</strong> ‘ಮೇಘಾಲಯ, ಹರಿಯಾಣದ ಬಹದ್ದೂರ್ಗಢ, ಛತ್ತೀಸಗಢದ ದಂತೇವಾಡ, ಬಲೋಧ್, ಗುಜರಾತ್ನ ಸೂರತ್ ಮತ್ತು ಚಂಡೀಗಢದ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಆದ ಪರೀಕ್ಷಾ ಸಮಯ ನಷ್ಟವನ್ನು ಸರಿದೂಗಿಸಲು ನೀಡಲಾಗಿರುವ ‘ಕೃಪಾಂಕ’ಗಳಿಂದ ಕೆಲವರಿಗೆ ಹೆಚ್ಚು ಅಂಕಗಳು ದೊರೆತಿವೆ. ಇದು ಇತರ ಅಭ್ಯರ್ಥಿಗಳ ಅವಕಾಶವನ್ನು ಕಸಿದಿದೆ. ಹೀಗಾಗಿ ಆ ಕೇಂದ್ರಗಳಲ್ಲಿ ಮರು ಪರೀಕ್ಷೆ ನಡೆಸಬೇಕು’ ಎಂಬ ಆಗ್ರಹ ಅಭ್ಯರ್ಥಿಗಳು ಮತ್ತು ಅವರ ಪೋಷಕರಿಂದ ವ್ಯಕ್ತವಾಗಿದೆ.</p><p>ಕೆಲ ಕೇಂದ್ರಗಳ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಂಗ್, ‘ಸಮಿತಿಯ ಶಿಫಾರಸುಗಳನ್ನು ಆಧರಿಸಿ ನಿರ್ಧರಿಸಲಾಗುವುದು’ ಎಂದರು.</p><p>‘ಸಮಯ ನಷ್ಟವಾಗಿರುವ ಅಭ್ಯರ್ಥಿಗಳು ಅಥವಾ ಇತರ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದು ಸಮಿತಿ ರಚನೆಯ ಹಿಂದಿನ ಉದ್ದೇಶವಾಗಿದೆ’ ಎಂದು ಅವರು ತಿಳಿಸಿದರು.</p><p><strong>ಪರೀಕ್ಷೆ ರದ್ದಿಗೆ ಮಹಾರಾಷ್ಟ್ರ ಆಗ್ರಹ:</strong> ‘ನೀಟ್’ ಫಲಿತಾಂಶದಲ್ಲಿ ಮಹಾರಾಷ್ಟ್ರದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಈ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಬಿಜೆಪಿ ಮೈತ್ರಿಕೂಟ ಎನ್ಡಿಎಗೆ ಸೇರಿರುವ ಪಕ್ಷದ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಕೇಂದ್ರ ಸರ್ಕಾರವನ್ನು ಕೋರಿದೆ.</p><p>ಫೆಡರಲ್ ವ್ಯವಸ್ಥೆಗೆ ವಿರುದ್ಧ– ಡಿಎಂಕೆ: ಇತ್ತೀಚಿಗೆ ಪ್ರಕಟವಾದ ನೀಟ್ ಫಲಿತಾಂಶಗಳು ಸಾಕಷ್ಟು ಗೊಂದಲ ಮೂಡಿಸಿದ್ದು, ನೀಟ್ ವಿರೋಧಿಸುವ ಡಿಎಂಕೆ ನಿಲುವನ್ನು ಸಮರ್ಥಿಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ‘ಎಕ್ಸ್’ನಲ್ಲಿ ಹೇಳಿದ್ದಾರೆ. ಅಲ್ಲದೆ ‘ನೀಟ್’ ಸಾಮಾಜಿಕ ನ್ಯಾಯ ಮತ್ತು ದೇಶದ ಫೆಡರಲ್ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.</p><p><strong>ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆಗ್ರಹ</strong></p><p>ಇದು ದೊಡ್ಡ ಹಗರಣವಾಗಿದ್ದು, ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಈ ಕುರಿತು ತನಿಖೆ ನಡೆಸಬೇಕು ಎಂದು ಕಾಂಗ್ರೆಸ್, ಎಎಪಿ ಮತ್ತು ಎಸ್ಪಿ ಆಗ್ರಹಿಸಿವೆ.</p><p>‘ಬಿಜೆಪಿ ಆಡಳಿತದಲ್ಲಿ ಪರೀಕ್ಷಾ ಅಕ್ರಮಗಳು ಹೆಚ್ಚಾಗಿವೆ. ಪ್ರಶ್ನೆ ಪತ್ರಿಕೆ ಸೋರಿಕೆ, ನಕಲಿ ಅಭ್ಯರ್ಥಿ ಪ್ರಕರಣಗಳು ನಡೆದಿವೆ. ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮತ್ತು ಫಲಿತಾಂಶ ನಿರ್ವಹಣೆಯು ದಂಧೆಯಾಗಿ ಬದಲಾಗುತ್ತಿದೆ’ ಎಂದು ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ‘ಎಕ್ಸ್’ನಲ್ಲಿ ಆರೋಪಿಸಿದ್ದಾರೆ.</p><p>‘ಭಾರತವನ್ನು ವಿಶ್ವಗುರುವನ್ನಾಗಿ ಮಾಡುವುದಾಗಿ ಬಿಜೆಪಿ ಹೇಳುತ್ತಿದೆ. ಆದರೆ ಅವರಿಗೆ ಪ್ರವೇಶ ಪರೀಕ್ಷೆಗಳನ್ನೇ ಸರಿಯಾಗಿ ನಡೆಸಲು ಬರುತ್ತಿಲ್ಲ’ ಎಂದು ಎಎಪಿ ನಾಯಕ ಜಾಸ್ಮಿನ್ ಶಾ ಸುದ್ದಿಗೋಷ್ಠಿಯಲ್ಲಿ ಲೇವಡಿ ಮಾಡಿದರು.</p><p>‘ಬಿಜೆಪಿ ಆಡಳಿತವಿರುವ ಗುಜರಾತ್ನಲ್ಲಿ ಕಳೆದ 11 ವರ್ಷಗಳಲ್ಲಿ 11 ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಹಾಗೆಯೇ ಉತ್ತರ ಪ್ರದೇಶದಲ್ಲಿ ಪೊಲೀಸ್ ಕಾನ್ಸ್ಟೆಬಲ್ಗಳು ಮತ್ತು ಶಿಕ್ಷಕರ ನೇಮಕಾತಿಯ ಪ್ರಶ್ನೆ ಪತ್ರಿಕೆಗಳೂ ಸೋರಿಕೆಯಾಗಿವೆ. ಈ ಮೂಲಕ ಬಿಜೆಪಿ ಲಕ್ಷಾಂತರ ಯುವ ಜನರ ಭವಿಷ್ಯವನ್ನು ಅನಿಶ್ಚಿತಗೊಳಿಸಿದೆ’ ಎಂದು ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>