<p><strong>ಕೋಲ್ಕತ್ತ:</strong> ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕೆ ಆಗ್ರಹಿಸಿ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಮಂಗಳವಾರ 11ನೇ ದಿನಕ್ಕೆ ಕಾಲಿರಿಸಿದೆ.</p><p>ಉಪವಾಸ ನಿರತ ವೈದ್ಯರಲ್ಲಿ ಮತ್ತಿಬ್ಬರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಉಪವಾಸನಿರತ 12 ವೈದ್ಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರ ನಡುವೆ ಸೋಮವಾರ ಸ್ವಾಸ್ಥ್ಯ ಭವನದಲ್ಲಿ ಸಭೆ ನಡೆಯಿತು. ಆದರೆ ಈ ಸಭೆಯಲ್ಲಿ ಯಾವುದೇ ಫಲಿತಾಂಶ ಬರಲಿಲ್ಲ.</p><p>ರಾಜ್ಯ ದಲ್ಲಿ ಅ.15ರಂದು ‘ದುರ್ಗಾ ಪೂಜಾ ಮಹೋತ್ಸವ’ ಇದೆ. ಆದರೆ, ಅದೇ ದಿನ ವೈದ್ಯರು ಸಮಾವೇಶ ಹಮ್ಮಿಕೊಂಡಿದ್ದಾರೆ. ಪೂಜಾ ಮಹೋತ್ಸವದ ಹಿನ್ನೆಲೆಯಲ್ಲಿ ಸಮಾವೇಶ ರದ್ದುಗೊಳಿಸ ಬೇಕೆಂದು ವೈದ್ಯರ ಜಂಟಿ ವೇದಿಕೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಆಗ್ರಹಿಸಿದ್ದಾರೆ.</p><p>ಆದರೆ, ಪಂತ್ ಅವರ ಈ ಆಗ್ರಹಕ್ಕೆ ವೈದ್ಯರ ಜಂಟಿ ವೇದಿಕೆ ಬೇಸರ ವ್ಯಕ್ತಪಡಿಸಿದೆ. ಕಿರಿಯ ವೈದ್ಯರು ಆಮರಣಾಂತ ಉಪವಾಸ ಮಾಡುತ್ತಿದ್ದರೂ ಸರ್ಕಾರ ಹಬ್ಬದ ಆಚರಣೆಗೆ ಆದ್ಯತೆ ನೀಡಿದೆ ಎಂದು ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ.</p><p>ರಾಜಭವನಕ್ಕೆ ಪ್ರತಿಭಟನಾ ರ್ಯಾಲಿ: ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಯುತ್ತಿರುವ ನಡುವೆಯೂ ಕಿರಿಯ ವೈದ್ಯರು ಸೋಮವಾರ ರಾಜಭವನಕ್ಕೆ ಪ್ರತಿಭಟನಾ ರ್ಯಾಲಿ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕೆ ಆಗ್ರಹಿಸಿ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹ ಮಂಗಳವಾರ 11ನೇ ದಿನಕ್ಕೆ ಕಾಲಿರಿಸಿದೆ.</p><p>ಉಪವಾಸ ನಿರತ ವೈದ್ಯರಲ್ಲಿ ಮತ್ತಿಬ್ಬರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಉಪವಾಸನಿರತ 12 ವೈದ್ಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಅವರ ನಡುವೆ ಸೋಮವಾರ ಸ್ವಾಸ್ಥ್ಯ ಭವನದಲ್ಲಿ ಸಭೆ ನಡೆಯಿತು. ಆದರೆ ಈ ಸಭೆಯಲ್ಲಿ ಯಾವುದೇ ಫಲಿತಾಂಶ ಬರಲಿಲ್ಲ.</p><p>ರಾಜ್ಯ ದಲ್ಲಿ ಅ.15ರಂದು ‘ದುರ್ಗಾ ಪೂಜಾ ಮಹೋತ್ಸವ’ ಇದೆ. ಆದರೆ, ಅದೇ ದಿನ ವೈದ್ಯರು ಸಮಾವೇಶ ಹಮ್ಮಿಕೊಂಡಿದ್ದಾರೆ. ಪೂಜಾ ಮಹೋತ್ಸವದ ಹಿನ್ನೆಲೆಯಲ್ಲಿ ಸಮಾವೇಶ ರದ್ದುಗೊಳಿಸ ಬೇಕೆಂದು ವೈದ್ಯರ ಜಂಟಿ ವೇದಿಕೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಆಗ್ರಹಿಸಿದ್ದಾರೆ.</p><p>ಆದರೆ, ಪಂತ್ ಅವರ ಈ ಆಗ್ರಹಕ್ಕೆ ವೈದ್ಯರ ಜಂಟಿ ವೇದಿಕೆ ಬೇಸರ ವ್ಯಕ್ತಪಡಿಸಿದೆ. ಕಿರಿಯ ವೈದ್ಯರು ಆಮರಣಾಂತ ಉಪವಾಸ ಮಾಡುತ್ತಿದ್ದರೂ ಸರ್ಕಾರ ಹಬ್ಬದ ಆಚರಣೆಗೆ ಆದ್ಯತೆ ನೀಡಿದೆ ಎಂದು ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ.</p><p>ರಾಜಭವನಕ್ಕೆ ಪ್ರತಿಭಟನಾ ರ್ಯಾಲಿ: ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಖಂಡಿಸಿ ಉಪವಾಸ ಸತ್ಯಾಗ್ರಹ ನಡೆಯುತ್ತಿರುವ ನಡುವೆಯೂ ಕಿರಿಯ ವೈದ್ಯರು ಸೋಮವಾರ ರಾಜಭವನಕ್ಕೆ ಪ್ರತಿಭಟನಾ ರ್ಯಾಲಿ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>