<p><strong>ನವದೆಹಲಿ</strong>: ‘ದೇಶದಲ್ಲಿ ರಸ್ತೆ ಅಪಘಾತ ಮತ್ತು ಜನರ ಸಾವಿನ ಪ್ರಕರಣಗಳನ್ನು 2030ರೊಳಗೆ ಶೇ 50ರಷ್ಟಕ್ಕೆ ತಗ್ಗಿಸುವುದು ಕೇಂದ್ರ ಸರ್ಕಾರದ ಪ್ರಧಾನ ಆದ್ಯತೆಯಾಗಿದೆ’ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಪ್ರತಿ ಗಂಟೆಗೆ 53 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 19 ಮಂದಿ ಮೃತಪಡುತ್ತಿದ್ದಾರೆ’ ಎಂದು ತಿಳಿಸಿದರು. </p>.<p>ರಸ್ತೆ ಸುರಕ್ಷತಾ ಪಾಲನೆಯಲ್ಲಿ ರಸ್ತೆ ಮತ್ತು ವಾಹನಗಳು, ಸಂಚಾರ ನಿಯಮದ ಅನುಷ್ಠಾನ, ಚಾಲಕರಿಗೆ ಶಿಕ್ಷಣ ಹಾಗೂ ತುರ್ತು ವೈದ್ಯಕೀಯ ಸೇವೆಯ ಪಾತ್ರ ಹಿರಿದು. ಇವುಗಳ ಬಲವರ್ಧನೆಗೆ ಕ್ರಮವಹಿಸಲಾಗುವುದು ಎಂದರು.</p>.<p>ಸಾರಿಗೆ ಸಚಿವಾಲಯದ ಅಂಕಿಅಂಶದ ಪ್ರಕಾರ 2022ರಲ್ಲಿ ದೇಶದಲ್ಲಿ 4.6 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿದ್ದು, 1.68 ಲಕ್ಷ ಮಂದಿ ಮೃತಪಟ್ಟಿದ್ದಾರೆ. 4 ಲಕ್ಷ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದರು.</p>.<p>ಅಲ್ಲದೇ, ಆ ವರ್ಷದಲ್ಲಿ ಅಪಘಾತಗಳ ಸಂಖ್ಯೆ ಶೇ 12ರಷ್ಟು ಹಾಗೂ ಸಾವಿನ ಪ್ರಕರಣಗಳು ಶೇ 10ರಷ್ಟು ಏರಿಕೆಯಾಗಿವೆ. ಮೃತಪಟ್ಟವರಲ್ಲಿ ಶೇ 60ರಷ್ಟು 18ರಿಂದ 35 ವಯೋಮಾನದವರು ಇದ್ದಾರೆ. ಇದರಿಂದ ದೇಶದ ಜಿಡಿಪಿಗೆ ಶೇ 3.14ರಷ್ಟು ನಷ್ಟವಾಗಿದೆ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ದೇಶದಲ್ಲಿ ರಸ್ತೆ ಅಪಘಾತ ಮತ್ತು ಜನರ ಸಾವಿನ ಪ್ರಕರಣಗಳನ್ನು 2030ರೊಳಗೆ ಶೇ 50ರಷ್ಟಕ್ಕೆ ತಗ್ಗಿಸುವುದು ಕೇಂದ್ರ ಸರ್ಕಾರದ ಪ್ರಧಾನ ಆದ್ಯತೆಯಾಗಿದೆ’ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.</p>.<p>ಭಾರತೀಯ ಕೈಗಾರಿಕಾ ಒಕ್ಕೂಟವು (ಸಿಐಐ) ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಪ್ರತಿ ಗಂಟೆಗೆ 53 ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, 19 ಮಂದಿ ಮೃತಪಡುತ್ತಿದ್ದಾರೆ’ ಎಂದು ತಿಳಿಸಿದರು. </p>.<p>ರಸ್ತೆ ಸುರಕ್ಷತಾ ಪಾಲನೆಯಲ್ಲಿ ರಸ್ತೆ ಮತ್ತು ವಾಹನಗಳು, ಸಂಚಾರ ನಿಯಮದ ಅನುಷ್ಠಾನ, ಚಾಲಕರಿಗೆ ಶಿಕ್ಷಣ ಹಾಗೂ ತುರ್ತು ವೈದ್ಯಕೀಯ ಸೇವೆಯ ಪಾತ್ರ ಹಿರಿದು. ಇವುಗಳ ಬಲವರ್ಧನೆಗೆ ಕ್ರಮವಹಿಸಲಾಗುವುದು ಎಂದರು.</p>.<p>ಸಾರಿಗೆ ಸಚಿವಾಲಯದ ಅಂಕಿಅಂಶದ ಪ್ರಕಾರ 2022ರಲ್ಲಿ ದೇಶದಲ್ಲಿ 4.6 ಲಕ್ಷ ರಸ್ತೆ ಅಪಘಾತಗಳು ಸಂಭವಿಸಿದ್ದು, 1.68 ಲಕ್ಷ ಮಂದಿ ಮೃತಪಟ್ಟಿದ್ದಾರೆ. 4 ಲಕ್ಷ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದರು.</p>.<p>ಅಲ್ಲದೇ, ಆ ವರ್ಷದಲ್ಲಿ ಅಪಘಾತಗಳ ಸಂಖ್ಯೆ ಶೇ 12ರಷ್ಟು ಹಾಗೂ ಸಾವಿನ ಪ್ರಕರಣಗಳು ಶೇ 10ರಷ್ಟು ಏರಿಕೆಯಾಗಿವೆ. ಮೃತಪಟ್ಟವರಲ್ಲಿ ಶೇ 60ರಷ್ಟು 18ರಿಂದ 35 ವಯೋಮಾನದವರು ಇದ್ದಾರೆ. ಇದರಿಂದ ದೇಶದ ಜಿಡಿಪಿಗೆ ಶೇ 3.14ರಷ್ಟು ನಷ್ಟವಾಗಿದೆ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>