ಪುನರ್ಪರಿಶೀಲನೆ ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ತೆರೆದ ನ್ಯಾಯಾಲಯದಲ್ಲಿ ನಡೆಸಬೇಕು
ಎಂಬ ಕೋರಿಕೆಯನ್ನೂ ಪೀಠವು ತಿರಸ್ಕರಿಸಿದೆ.
ಚುನಾವಣಾ ಬಾಂಡ್ ಯೋಜನೆಗೆ ಸಂಬಂಧಿಸಿದ ವಿಷಯವು ಶಾಸಕಾಂಗ ಮತ್ತು ಕಾರ್ಯಾಂಗದ ನೀತಿಗಳ ವ್ಯಾಪ್ತಿಯೊಳಗೆ ಬರುತ್ತದೆ ಎಂದು ವಕೀಲ ಮ್ಯಾಥ್ಯೂಸ್ ಜೆ. ನೆಡುಂಬಾರ ಹಾಗೂ ಇತರರು ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಿದ್ದ ಅರ್ಜಿಯಲ್ಲಿ ಪ್ರತಿಪಾದಿಸಿದ್ದರು.
‘ಚುನಾವಣಾ ಬಾಂಡ್ಗೆ ಸಂಬಂಧಿಸಿದ ತೀರ್ಪಿಗೆ ಸಾರ್ವಜನಿಕ ವಲಯದಲ್ಲಿ ಭಿನ್ನ ಅಭಿಪ್ರಾಯ ಇರುವುದನ್ನು ಗಮನಿಸಲು ಸುಪ್ರೀಂ ಕೋರ್ಟ್ ವಿಫಲವಾಗಿದೆ. ತಮ್ಮ ಚುನಾಯಿತ ಪ್ರತಿನಿಧಿಗಳು ಜಾರಿಗೆ ತಂದ ಈ ಯೋಜನೆಯನ್ನು ದೇಶದ ಬಹುಪಾಲು ಮಂದಿ ಬೆಂಬಲಿಸಬಹುದು’ ಎಂದಿದ್ದರು.
ಚುನಾವಣಾ ಬಾಂಡ್ ಯೋಜನೆಯನ್ನು ಅಸಾಂವಿಧಾನಿಕ ಎಂದು ಹೇಳಿದ್ದ ಸುಪ್ರೀಂಕೋರ್ಟ್ ಫೆಬ್ರುವರಿ 15ರಂದು ರದ್ದು ಮಾಡಿತ್ತು.