<p><strong>ನವದೆಹಲಿ</strong>: ಪಶ್ಚಿಮ ಬಂಗಾಳ ವಿಧಾನಸಭೆಯು ಅಂಗೀಕರಿಸಿದ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ–2022 ವಿಚಾರ ಸಂಬಂಧ ರಾಜ್ಯಪಾಲರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾದ ಅರ್ಜಿ ಸಂಬಂಧ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯಪಾಲರ ಕಚೇರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. </p>.<p>ಈ ಕುರಿತು ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು, ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. </p>.<p>ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿ ರಾಜ್ಯಪಾಲರೇ ಆಗಿರುತ್ತಾರೆ. ಆದರೆ, ಈ ಸ್ಥಾನವನ್ನು ಮುಖ್ಯಮಂತ್ರಿಗೆ ವರ್ಗಾಯಿಸುವ ಮಸೂದೆಯನ್ನು 2022ರ ಜೂನ್ನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಅಂಗೀಕರಿಸಿತ್ತು.</p>.<p>ಈ ಪ್ರಕರಣದ ಕುರಿತು ರಾಜ್ಯಪಾಲರು ಹೇಳಿಕೆ ನೀಡಬೇಕು ಎಂಬ ತನ್ನದೇ ಆದೇಶಕ್ಕೆ ತಡೆ ಹೇರಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಸಯಾನ್ ಮುಖರ್ಜಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಬಂಗಾಳ ವಿಧಾನಸಭೆಯು ಅಂಗೀಕರಿಸಿದ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ–2022 ವಿಚಾರ ಸಂಬಂಧ ರಾಜ್ಯಪಾಲರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಲ್ಲಿಕೆಯಾದ ಅರ್ಜಿ ಸಂಬಂಧ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯಪಾಲರ ಕಚೇರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. </p>.<p>ಈ ಕುರಿತು ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು, ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. </p>.<p>ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿ ರಾಜ್ಯಪಾಲರೇ ಆಗಿರುತ್ತಾರೆ. ಆದರೆ, ಈ ಸ್ಥಾನವನ್ನು ಮುಖ್ಯಮಂತ್ರಿಗೆ ವರ್ಗಾಯಿಸುವ ಮಸೂದೆಯನ್ನು 2022ರ ಜೂನ್ನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಅಂಗೀಕರಿಸಿತ್ತು.</p>.<p>ಈ ಪ್ರಕರಣದ ಕುರಿತು ರಾಜ್ಯಪಾಲರು ಹೇಳಿಕೆ ನೀಡಬೇಕು ಎಂಬ ತನ್ನದೇ ಆದೇಶಕ್ಕೆ ತಡೆ ಹೇರಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಸಯಾನ್ ಮುಖರ್ಜಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>