ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಅರ್ಜಿ, ಇ.ಡಿಗೆ ಸುಪ್ರೀಂ ಕೋರ್ಟ್‌ ನೋಟಿಸ್

Published : 15 ಏಪ್ರಿಲ್ 2024, 13:31 IST
Last Updated : 15 ಏಪ್ರಿಲ್ 2024, 13:31 IST
ಫಾಲೋ ಮಾಡಿ
Comments
ಕೇಜ್ರಿವಾಲ್ ಬಂಧನ ಅವಧಿ ವಿಸ್ತರಣೆ
ನವದೆಹಲಿ: ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಸಿಬಿಐ ಮತ್ತು ಇ.ಡಿ. ವಿಶೇಷ ನ್ಯಾಯಾಲಯವು ಏಪ್ರಿಲ್‌ 23ರವರೆಗೆ ವಿಸ್ತರಿಸಿದೆ. ಕೇಜ್ರಿವಾಲ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶೆ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ತನಿಖೆಯು ಮಹತ್ವದ ಹಂತದಲ್ಲಿ ಇದೆ ಎಂದು ಹೇಳಿದ ಇ.ಡಿ. ಇನ್ನೂ 14 ದಿನಗಳವರೆಗೆ ಕೇಜ್ರಿವಾಲ್ ಅವರ ಬಂಧನದ ಅವಧಿ ವಿಸ್ತರಿಸಬೇಕು ಎಂದು ಕೋರಿತು. ಆದರೆ ಈ ಪ್ರಕರಣದ ಸಹ ಆರೋಪಿಗಳಾಗಿರುವ ಇತರ ಕೆಲವರ ನ್ಯಾಯಾಂಗ ಬಂಧನದ ಅವಧಿಯು ಏಪ್ರಿಲ್‌ 23ಕ್ಕೆ ಕೊನೆಗೊಳ್ಳಲಿದೆ ಎಂದು ಹೇಳಿದ ನ್ಯಾಯಾಧೀಶರು ಕೇಜ್ರಿವಾಲ್ ಅವರ ಬಂಧನದ ಅವಧಿಯನ್ನು ಕೂಡ ಆ ದಿನಾಂಕದವರೆಗೆ ವಿಸ್ತರಿಸಿದರು. ಸಿಬಿಐಗೆ ನೋಟಿಸ್: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಗರಣದಲ್ಲಿ ಬಂಧನದಲ್ಲಿರುವ ಬಿಆರ್‌ಎಸ್ ಪಕ್ಷದ ನಾಯಕಿ ಕೆ. ಕವಿತಾ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರವಾಗಿ ಸಿಬಿಐಗೆ ನೋಟಿಸ್ ಜಾರಿಗೆ ನ್ಯಾಯಾಧೀಶೆ ಕಾವೇರಿ ಬವೇಜಾ ಆದೇಶಿಸಿದ್ದಾರೆ. ಕವಿತಾ ಅವರ ಅರ್ಜಿಗೆ ಸಂಬಂಧಿಸಿದಂತೆ ಏಪ್ರಿಲ್‌ 22ಕ್ಕೆ ಮೊದಲು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT