‘ಆರೋಪಿಗಳು ಒಂದು ವರ್ಷದಿಂದ ಜೈಲಿನಲ್ಲಿದ್ದಾರೆ. ಇದೀಗ ಆರೋಪಪಟ್ಟಿಯೂ ಸಲ್ಲಿಕೆಯಾಗಿ, ನ್ಯಾಯಾಲಯವು ಅವರ ವಿರುದ್ಧ ದೋಷಾರೋಪವನ್ನೂ ಹೊರಿಸಿದೆ. ಈ ಪ್ರಕರಣದಲ್ಲಿ ಎಲ್ಲರ ಹಿತಾಸಕ್ತಿಯನ್ನೂ ನಾವು ಸಮತೋಲನಗೊಳಿಸಬೇಕಾಗಿದೆ’ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠ ಹೇಳಿದೆ.