ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇರುವ ತ್ರಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸುವ ನಿರೀಕ್ಷೆ ಇದೆ. ಮದ್ರಾಸ್ ಹೈಕೋರ್ಟ್ನ ಆದೇಶವು ಆಘಾತಕಾರಿ ಎಂದು ಹೇಳಿದ್ದ ತ್ರಿಸದಸ್ಯ ಪೀಠವು, ಆ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಈ ಹಿಂದೆ ಒಪ್ಪಿತ್ತು.