<p><strong>ಮುಂಬೈ:</strong> ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಮತ್ತು ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ನೂರಾರು ಕೋಟಿ ಹಣ ಹರಿದು ಬರುತ್ತಿದೆ ಎಂದು ಆರೋಪಿಸಿರುವ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷವು, ಈ ಎರಡೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.</p>.<p>ಈ ಎರಡೂ ರಾಜ್ಯಗಳ ಜತೆ ಮಹಾರಾಷ್ಟ್ರ ಗಡಿ ಹಂಚಿಕೊಂಡಿದೆ. ಈ ರಾಜ್ಯಗಳೇ ಅಲ್ಲದೆ, ಇಲ್ಲಿನ ವಿಧಾನಸಭಾ ಚುನಾವಣೆಗೆ ವಿದೇಶಗಳಿಂದಲೂ ಹಣ ಬರುತ್ತಿದೆ ಎಂದು ಅದು ದೂರಿದೆ. </p>.<p>ಕಾಂಗ್ರೆಸ್ ಆಡಳಿತವಿರುವ ಈ ಎರಡೂ ರಾಜ್ಯಗಳಿಂದ ನೂರಾರು ಕೋಟಿ ಹಣ ಮಹಾ ವಿಕಾಸ್ ಅಘಾಡಿಗೆ (ಎಂವಿಎ) ಹರಿದು ಬರುತ್ತಿದೆ ಎಂದು ಸೇನಾ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ಕಿರಣ್ ಪಾವಸ್ಕರ್ ತಿಳಿಸಿದ್ದಾರೆ. ಈ ಸಂಬಂಧ ಶಿವಸೇನಾ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿದೆ.</p>.<p>ಚುನಾವಣೆ ವೇಳೆ ಈ ಎರಡೂ ರಾಜ್ಯಗಳು ಮತ್ತು ವಿದೇಶಗಳಿಂದ ಬರುತ್ತಿರುವ ಹಣದ ಬಗ್ಗೆ ತನಿಖೆ ಆಗಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ. </p>.<p>ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಈ ಎರಡೂ ರಾಜ್ಯಗಳಿಂದ ಹಣ ಹರಿದು ಬಂದಿತ್ತು. ಅದರ ಪರಿಣಾಮ ‘ಮಹಾಯುತಿ’ ಮೇಲೆ ಬಿದ್ದಿತು. ಆದ್ದರಿಂದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ಗಡಿಗಳನ್ನು ಮುಚ್ಚಬೇಕಾದ ಅಗತ್ಯವಿದೆ ಎಂದು ಶಿವಸೇನಾ ಪ್ರತಿಪಾದಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಮತ್ತು ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ನೂರಾರು ಕೋಟಿ ಹಣ ಹರಿದು ಬರುತ್ತಿದೆ ಎಂದು ಆರೋಪಿಸಿರುವ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷವು, ಈ ಎರಡೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡುವಂತೆ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.</p>.<p>ಈ ಎರಡೂ ರಾಜ್ಯಗಳ ಜತೆ ಮಹಾರಾಷ್ಟ್ರ ಗಡಿ ಹಂಚಿಕೊಂಡಿದೆ. ಈ ರಾಜ್ಯಗಳೇ ಅಲ್ಲದೆ, ಇಲ್ಲಿನ ವಿಧಾನಸಭಾ ಚುನಾವಣೆಗೆ ವಿದೇಶಗಳಿಂದಲೂ ಹಣ ಬರುತ್ತಿದೆ ಎಂದು ಅದು ದೂರಿದೆ. </p>.<p>ಕಾಂಗ್ರೆಸ್ ಆಡಳಿತವಿರುವ ಈ ಎರಡೂ ರಾಜ್ಯಗಳಿಂದ ನೂರಾರು ಕೋಟಿ ಹಣ ಮಹಾ ವಿಕಾಸ್ ಅಘಾಡಿಗೆ (ಎಂವಿಎ) ಹರಿದು ಬರುತ್ತಿದೆ ಎಂದು ಸೇನಾ ಕಾರ್ಯದರ್ಶಿ ಮತ್ತು ಮುಖ್ಯ ವಕ್ತಾರ ಕಿರಣ್ ಪಾವಸ್ಕರ್ ತಿಳಿಸಿದ್ದಾರೆ. ಈ ಸಂಬಂಧ ಶಿವಸೇನಾ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿದೆ.</p>.<p>ಚುನಾವಣೆ ವೇಳೆ ಈ ಎರಡೂ ರಾಜ್ಯಗಳು ಮತ್ತು ವಿದೇಶಗಳಿಂದ ಬರುತ್ತಿರುವ ಹಣದ ಬಗ್ಗೆ ತನಿಖೆ ಆಗಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ. </p>.<p>ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಈ ಎರಡೂ ರಾಜ್ಯಗಳಿಂದ ಹಣ ಹರಿದು ಬಂದಿತ್ತು. ಅದರ ಪರಿಣಾಮ ‘ಮಹಾಯುತಿ’ ಮೇಲೆ ಬಿದ್ದಿತು. ಆದ್ದರಿಂದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ಗಡಿಗಳನ್ನು ಮುಚ್ಚಬೇಕಾದ ಅಗತ್ಯವಿದೆ ಎಂದು ಶಿವಸೇನಾ ಪ್ರತಿಪಾದಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>