ನವದೆಹಲಿ: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಜೊತೆ ಶುಕ್ರವಾರ ನಡೆದ ಗುಂಡಿನ ಕಾಳಗದಲ್ಲಿ ಏಳು ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾರಾಯಣಪುರ-ದಾಂತೇವಾಡ ಗಡಿಯ ಅಬುಜ್ಮದ್ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು 1 ಗಂಟೆಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಯಾಚರಣೆ ಈಗಲೂ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
ಬಸ್ತಾರ್ ಪ್ರದೇಶದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ನಕ್ಸಲ್ ಕ್ಯಾಂಪ್ ಧ್ವಂಸಗೊಳಿಸಿದ್ದ ಭದ್ರತಾ ಪಡೆ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿತ್ತು.