<p><strong>ಕೋಲ್ಕತ್ತ</strong>: ‘ರೀಮಲ್’ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಇಂದು ಮಧ್ಯರಾತ್ರಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿ 1 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.</p><p>ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಭಾರಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಕೆಲವೆಡೆ ಈಗಾಗಲೇ ಮಳೆ ಆರಂಭವಾಗಿದೆ.</p><p>ಸಾಗರ ದ್ವೀಪದಿಂದ 160 ಕಿ.ಮೀ ದೂರದಲ್ಲಿ ರೀಮಲ್ ಚಂಡಮಾರುತ ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.</p><p>100ರಿಂದ 110 ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಪಶ್ಚಿಮ ಬಂಗಾಳದ ಸಾಗರ ದ್ವೀಪ ಮತ್ತು ಬಾಂಗ್ಲಾದೇಶದ ಮೊಂಗ್ಲಾ ಬಂದರು ಸಮೀಪದ ಖೇಪುಪರ ನಡುವೆ ಇಂದು ಮಧ್ಯರಾತ್ರಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಧ್ಯಾಹ್ನ 3 ಗಂಟೆ ಸುಮಾರಿಗೆ ಕರಾವಳಿ ಮತ್ತು ತಗ್ಗು ಪ್ರದೇಶಗಳ 1 ಲಕ್ಷ ಜನರನ್ನು ಪಶ್ಚಿಮ ಬಂಗಾಳ ಸರ್ಕಾರ ಸ್ಥಳಾಂತರಿಸಿದೆ.</p><p>ಸುಂದರಬನ ಹಾಗೂ ಸಾಗರ ದ್ವೀಪದಿಂದಲೂ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಕ್ಷಣೆ ಹಾಗೂ ಪರಿಹಾರ ಕಾರ್ಯಕ್ಕೆ ನೆರವಾಗಲು ರಾಜ್ಯದ ಪರಿಹಾರ ನಿರ್ವಹಣಾ ತಂಡ ಮತ್ತು ಎನ್ಡಿಆರ್ಎಫ್ನ ತಲಾ 16 ತುಕಡಿಗಳನ್ನು ನಿಯೋಜಿಸಲಾಗಿದೆ.</p><p>‘ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಯತ್ನಗಳು ಕರಾವಳಿ ಪ್ರದೇಶದ ಮೇಲೆ ಗಮನ ಕೇಂದ್ರೀಕರಿಸಿವೆ’ ಎಂದು ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಂದಾಜು 5.4 ಲಕ್ಷ ಟಾರ್ಪಾಲಿನ್ಗಳನ್ನು ವಿತರಿಸಿದೆ. ಆಹಾರ ಧಾನ್ಯಗಳ ಪೊಟ್ಟಣ, ಹಾಲಿನ ಪುಡಿ, ಕುಡಿಯುವ ನೀರಿನ ಪೊಟ್ಟಣಗಳು ಈ ಪ್ರದೇಶದಲ್ಲಿ ಅಗತ್ಯ ಪ್ರಮಾಣದಲ್ಲಿ ಲಭ್ಯವಿರುವಂತೆ ಖಾತರಿಪಡಿಸಲಾಗಿದೆ.</p><p>ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯದ ಸಚಿವಾಲಯದಲ್ಲಿ ಕೇಂದ್ರೀಕೃತ ನಿಯಂತ್ರಣ ಘಟಕವೊಂದನ್ನು ಆರಂಭಿಸಲಾಗಿದೆ. </p><p>ರೀಮಲ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಲು ಪ್ರಧಾನಿ ಮೋದಿ ಪರಿಶೀಲನಾ ಸಭೆ ನಡೆಸಿದ್ದಾರೆ.</p><p>ಇತ್ತ, ನೆರೆಯ ಬಾಂಗ್ಲಾದೇಶವು ಸಹ ಕರಾವಳಿಯ ಸತ್ಕೀರ ಮತ್ತು ಕಾಕ್ಸ್ ಬಜಾರ್ ಜಿಲ್ಲೆಗಳಿಂದ 8 ಲಕ್ಷ ಜನರನ್ನು ಸ್ಥಳಾಂತರಿಸಿದೆ.</p><p>ಬಾಂಗ್ಲಾದೇಶ ಹವಾಮಾನ ಇಲಾಖೆ ಅತ್ಯಂತ ಅಪಾಯದ ಮುನ್ಸೂಚನೆ ನೀಡಿದೆ.</p><p>ಚಂಡಮಾರುತದ ಹಾನಿ ನಿರ್ವಹಣೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, 8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಬಾಂಗ್ಲಾದ ವಿಪತ್ತು ನಿರ್ವಹಣಾ ಮತ್ತು ಪರಿಹಾರ ಸಚಿವ ಮೊಹಮ್ಮದ್ ಮೊಹಿಬುರ್ ರೆಹಮಾನ್ ಹೇಳಿದ್ದಾರೆ.</p>.<p><strong>ಪರಿಸ್ಥಿತಿ ಎದುರಿಸಲು ಸನ್ನದ್ಧ</strong></p><ul><li><p>ಕೋಲ್ಕತ್ತದಲ್ಲಿ ಚಂಡಮಾರುತ ಎದುರಿಸಲು ನಡೆದಿರುವ ಸಿದ್ಧತೆ ಪರಿಶೀಲಿಸಲು ಕೋಲ್ಕತ್ತ ಮೇಯರ್ ಫಿರ್ಹಾದ್ ಹಕೀಂ ಅಧಿಕಾರಿಗಳ ಸಭೆ ನಡೆಸಿದ್ದಾರೆ.</p></li><li><p>ಕೋಲ್ಕತ್ತದಲ್ಲಿ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿಭಾಯಿಸಲು 15 ಸಾವಿರ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ.</p></li><li><p>ರಾತ್ರಿಯಿಡೀ ಎಚ್ಚರದಿಂದ ಇರುವುದಾಗಿ, ಪರಿಸ್ಥಿತಿಯ ಮೇಲೆ ಖುದ್ದಾಗಿ ನಿಗಾ ಇರಿಸುವುದಾಗಿ ಹಕೀಂ ಭರವಸೆ ನಿಡಿದ್ದಾರೆ.</p></li><li><p>ರೀಮಲ್ ಪರಿಣಾಮವಾಗಿ ಒಡಿಶಾದ ಭದ್ರಕ್, ಬಾಲೇಶ್ವರ, ಕೇಂದ್ರಪಾಢ ಮತ್ತು ಮಯೂರಭಂಜ್ ಜಿಲ್ಲೆಗಳಲ್ಲಿ 7 ಸೆಂ.ಮೀ.ನಿಂದ 11 ಸೆಂ.ಮೀ.ವರೆಗೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.</p></li><li><p>ತ್ರಿಪುರಾ ಸರ್ಕಾರವು ದಕ್ಷಿಣ, ಧಲಾಯ್, ಖೊವಾಯ್ ಮತ್ತು ಪಶ್ಚಿಮ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.</p></li><li><p>ತ್ರಿಪುರಾದಲ್ಲಿ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ರೀಮಲ್’ ಚಂಡಮಾರುತ ತೀವ್ರ ಸ್ವರೂಪ ಪಡೆಯುತ್ತಿದ್ದು, ಇಂದು ಮಧ್ಯರಾತ್ರಿ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಕರಾವಳಿಯಲ್ಲಿ 1 ಲಕ್ಷ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.</p><p>ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಭಾರಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಕೆಲವೆಡೆ ಈಗಾಗಲೇ ಮಳೆ ಆರಂಭವಾಗಿದೆ.</p><p>ಸಾಗರ ದ್ವೀಪದಿಂದ 160 ಕಿ.ಮೀ ದೂರದಲ್ಲಿ ರೀಮಲ್ ಚಂಡಮಾರುತ ಕೇಂದ್ರೀಕೃತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.</p><p>100ರಿಂದ 110 ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಪಶ್ಚಿಮ ಬಂಗಾಳದ ಸಾಗರ ದ್ವೀಪ ಮತ್ತು ಬಾಂಗ್ಲಾದೇಶದ ಮೊಂಗ್ಲಾ ಬಂದರು ಸಮೀಪದ ಖೇಪುಪರ ನಡುವೆ ಇಂದು ಮಧ್ಯರಾತ್ರಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಧ್ಯಾಹ್ನ 3 ಗಂಟೆ ಸುಮಾರಿಗೆ ಕರಾವಳಿ ಮತ್ತು ತಗ್ಗು ಪ್ರದೇಶಗಳ 1 ಲಕ್ಷ ಜನರನ್ನು ಪಶ್ಚಿಮ ಬಂಗಾಳ ಸರ್ಕಾರ ಸ್ಥಳಾಂತರಿಸಿದೆ.</p><p>ಸುಂದರಬನ ಹಾಗೂ ಸಾಗರ ದ್ವೀಪದಿಂದಲೂ ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ರಕ್ಷಣೆ ಹಾಗೂ ಪರಿಹಾರ ಕಾರ್ಯಕ್ಕೆ ನೆರವಾಗಲು ರಾಜ್ಯದ ಪರಿಹಾರ ನಿರ್ವಹಣಾ ತಂಡ ಮತ್ತು ಎನ್ಡಿಆರ್ಎಫ್ನ ತಲಾ 16 ತುಕಡಿಗಳನ್ನು ನಿಯೋಜಿಸಲಾಗಿದೆ.</p><p>‘ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಯತ್ನಗಳು ಕರಾವಳಿ ಪ್ರದೇಶದ ಮೇಲೆ ಗಮನ ಕೇಂದ್ರೀಕರಿಸಿವೆ’ ಎಂದು ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಅಂದಾಜು 5.4 ಲಕ್ಷ ಟಾರ್ಪಾಲಿನ್ಗಳನ್ನು ವಿತರಿಸಿದೆ. ಆಹಾರ ಧಾನ್ಯಗಳ ಪೊಟ್ಟಣ, ಹಾಲಿನ ಪುಡಿ, ಕುಡಿಯುವ ನೀರಿನ ಪೊಟ್ಟಣಗಳು ಈ ಪ್ರದೇಶದಲ್ಲಿ ಅಗತ್ಯ ಪ್ರಮಾಣದಲ್ಲಿ ಲಭ್ಯವಿರುವಂತೆ ಖಾತರಿಪಡಿಸಲಾಗಿದೆ.</p><p>ಪರಿಸ್ಥಿತಿಯನ್ನು ಅವಲೋಕಿಸಲು ರಾಜ್ಯದ ಸಚಿವಾಲಯದಲ್ಲಿ ಕೇಂದ್ರೀಕೃತ ನಿಯಂತ್ರಣ ಘಟಕವೊಂದನ್ನು ಆರಂಭಿಸಲಾಗಿದೆ. </p><p>ರೀಮಲ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆ ಕೈಗೊಂಡ ಕ್ರಮಗಳ ಕುರಿತು ಪರಿಶೀಲನೆ ನಡೆಸಲು ಪ್ರಧಾನಿ ಮೋದಿ ಪರಿಶೀಲನಾ ಸಭೆ ನಡೆಸಿದ್ದಾರೆ.</p><p>ಇತ್ತ, ನೆರೆಯ ಬಾಂಗ್ಲಾದೇಶವು ಸಹ ಕರಾವಳಿಯ ಸತ್ಕೀರ ಮತ್ತು ಕಾಕ್ಸ್ ಬಜಾರ್ ಜಿಲ್ಲೆಗಳಿಂದ 8 ಲಕ್ಷ ಜನರನ್ನು ಸ್ಥಳಾಂತರಿಸಿದೆ.</p><p>ಬಾಂಗ್ಲಾದೇಶ ಹವಾಮಾನ ಇಲಾಖೆ ಅತ್ಯಂತ ಅಪಾಯದ ಮುನ್ಸೂಚನೆ ನೀಡಿದೆ.</p><p>ಚಂಡಮಾರುತದ ಹಾನಿ ನಿರ್ವಹಣೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, 8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಬಾಂಗ್ಲಾದ ವಿಪತ್ತು ನಿರ್ವಹಣಾ ಮತ್ತು ಪರಿಹಾರ ಸಚಿವ ಮೊಹಮ್ಮದ್ ಮೊಹಿಬುರ್ ರೆಹಮಾನ್ ಹೇಳಿದ್ದಾರೆ.</p>.<p><strong>ಪರಿಸ್ಥಿತಿ ಎದುರಿಸಲು ಸನ್ನದ್ಧ</strong></p><ul><li><p>ಕೋಲ್ಕತ್ತದಲ್ಲಿ ಚಂಡಮಾರುತ ಎದುರಿಸಲು ನಡೆದಿರುವ ಸಿದ್ಧತೆ ಪರಿಶೀಲಿಸಲು ಕೋಲ್ಕತ್ತ ಮೇಯರ್ ಫಿರ್ಹಾದ್ ಹಕೀಂ ಅಧಿಕಾರಿಗಳ ಸಭೆ ನಡೆಸಿದ್ದಾರೆ.</p></li><li><p>ಕೋಲ್ಕತ್ತದಲ್ಲಿ ಚಂಡಮಾರುತದ ನಂತರದ ಪರಿಸ್ಥಿತಿಯನ್ನು ನಿಭಾಯಿಸಲು 15 ಸಾವಿರ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ.</p></li><li><p>ರಾತ್ರಿಯಿಡೀ ಎಚ್ಚರದಿಂದ ಇರುವುದಾಗಿ, ಪರಿಸ್ಥಿತಿಯ ಮೇಲೆ ಖುದ್ದಾಗಿ ನಿಗಾ ಇರಿಸುವುದಾಗಿ ಹಕೀಂ ಭರವಸೆ ನಿಡಿದ್ದಾರೆ.</p></li><li><p>ರೀಮಲ್ ಪರಿಣಾಮವಾಗಿ ಒಡಿಶಾದ ಭದ್ರಕ್, ಬಾಲೇಶ್ವರ, ಕೇಂದ್ರಪಾಢ ಮತ್ತು ಮಯೂರಭಂಜ್ ಜಿಲ್ಲೆಗಳಲ್ಲಿ 7 ಸೆಂ.ಮೀ.ನಿಂದ 11 ಸೆಂ.ಮೀ.ವರೆಗೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.</p></li><li><p>ತ್ರಿಪುರಾ ಸರ್ಕಾರವು ದಕ್ಷಿಣ, ಧಲಾಯ್, ಖೊವಾಯ್ ಮತ್ತು ಪಶ್ಚಿಮ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.</p></li><li><p>ತ್ರಿಪುರಾದಲ್ಲಿ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>