<p><strong>ನವದೆಹಲಿ</strong>: ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ಕಾಂಗ್ರೆಸ್ ಪಕ್ಷದ ಆರು ಮಂದಿ ಅನರ್ಹ ಶಾಸಕರು ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.</p><p>ಫೆಬ್ರುವರಿ 29ರಂದು ವಿಧಾನಸಭಾಧ್ಯಕ್ಷ ಕುಲದೀಪ್ ಪಟಾನಿಯಾ ತಮ್ಮನ್ನು ಅನರ್ಹಗೊಳಿಸಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.</p><p>ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಹಾಕಿದ್ದ ಈ ಶಾಸಕರು, ವಿಧಾನಸಭೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಬಜೆಟ್ ಅನುಮೋದನೆ ಮೇಲಿನ ಮತದಾನಕ್ಕೂ ಗೈರಾಗಿದ್ದರು. ಈ ಎರಡೂ ಕಾರಣಗಳನ್ನು ಮುಂದಿಟ್ಟಿದ್ದ ಕಾಂಗ್ರೆಸ್, ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿತ್ತು.</p><p>ರಾಜಿಂದರ್ ರಾಣಾ, ಸುಧೀರ್ ಶರ್ಮಾ, ಇಂದೇರ್ ದತ್ ಲಖನ್ಪಾಲ್, ದೇವಿಂದರ್ ಕುಮಾರ್ ಭಟೂ, ರವಿ ಠಾಕೂರ್ ಮತ್ತು ಚೈತನ್ಯ ಶರ್ಮಾ ಅನರ್ಹಗೊಂಡ ಶಾಸಕರು.</p><p>6 ಶಾಸಕರನ್ನು ಅನರ್ಹಗೊಳಿಸಿದ ಬಳಿಕ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಶಾಸಕರ ಬಲ 68ರಿಂದ 62ಕ್ಕೆ ಕುಸಿದರೆ, ಕಾಂಗ್ರೆಸ್ ಶಾಸಕರ ಸಂಖ್ಯೆ 40ರಿಂದ 34ಕ್ಕೆ ಬಂದಿದೆ.</p>.ಹಿಮಾಚಲ ಪ್ರದೇಶ ರಾಜಕೀಯದಲ್ಲಿ ಏನಾದರೂ ಆಗಬಹುದು, ಕಾರ್ಯಕರ್ತರು ಸಜ್ಜಾಗಿರಿ: BJP.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಹಿಮಾಚಲ ಪ್ರದೇಶದ ಕಾಂಗ್ರೆಸ್ ಪಕ್ಷದ ಆರು ಮಂದಿ ಅನರ್ಹ ಶಾಸಕರು ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.</p><p>ಫೆಬ್ರುವರಿ 29ರಂದು ವಿಧಾನಸಭಾಧ್ಯಕ್ಷ ಕುಲದೀಪ್ ಪಟಾನಿಯಾ ತಮ್ಮನ್ನು ಅನರ್ಹಗೊಳಿಸಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.</p><p>ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಹಾಕಿದ್ದ ಈ ಶಾಸಕರು, ವಿಧಾನಸಭೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಬಜೆಟ್ ಅನುಮೋದನೆ ಮೇಲಿನ ಮತದಾನಕ್ಕೂ ಗೈರಾಗಿದ್ದರು. ಈ ಎರಡೂ ಕಾರಣಗಳನ್ನು ಮುಂದಿಟ್ಟಿದ್ದ ಕಾಂಗ್ರೆಸ್, ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿತ್ತು.</p><p>ರಾಜಿಂದರ್ ರಾಣಾ, ಸುಧೀರ್ ಶರ್ಮಾ, ಇಂದೇರ್ ದತ್ ಲಖನ್ಪಾಲ್, ದೇವಿಂದರ್ ಕುಮಾರ್ ಭಟೂ, ರವಿ ಠಾಕೂರ್ ಮತ್ತು ಚೈತನ್ಯ ಶರ್ಮಾ ಅನರ್ಹಗೊಂಡ ಶಾಸಕರು.</p><p>6 ಶಾಸಕರನ್ನು ಅನರ್ಹಗೊಳಿಸಿದ ಬಳಿಕ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಶಾಸಕರ ಬಲ 68ರಿಂದ 62ಕ್ಕೆ ಕುಸಿದರೆ, ಕಾಂಗ್ರೆಸ್ ಶಾಸಕರ ಸಂಖ್ಯೆ 40ರಿಂದ 34ಕ್ಕೆ ಬಂದಿದೆ.</p>.ಹಿಮಾಚಲ ಪ್ರದೇಶ ರಾಜಕೀಯದಲ್ಲಿ ಏನಾದರೂ ಆಗಬಹುದು, ಕಾರ್ಯಕರ್ತರು ಸಜ್ಜಾಗಿರಿ: BJP.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>