<p class="bodytext"><strong>ನವದೆಹಲಿ</strong>: ಅಂತರರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಭಯೋತ್ಪಾದನೆಯು ಧಕ್ಕೆ ತರುತ್ತದೆ. ಯಾವುದೇ ಭಯೋತ್ಪಾದಕ ಕೃತ್ಯಗಳಿಗೆ ಬೆಂಬಲ ನೀಡುವುದು ಮಾನವೀಯತೆಯ ವಿರುದ್ಧದ ಅಪರಾಧವೇ ಆಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.</p>.<p class="bodytext">ದುಶಾಂಬೆಯಲ್ಲಿ ಬುಧವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ರಕ್ಷಣಾ ಸಚಿವರ ಸಮಾವೇಶದಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯ ವಿರುದ್ಧ ಭಾರತ ಎಲ್ಲಾ ರೀತಿಯಲ್ಲೂ ಹೋರಾಡುವ ಸಂಕಲ್ಪ ಹೊಂದಿದೆ ಎಂದು ಪುನರುಚ್ಚರಿಸಿದರು.</p>.<p class="bodytext">ಶಾಂತಿ ಮತ್ತು ಸಮೃದ್ಧಿಯು ಭಯೋತ್ಪಾದನೆಯೊಂದಿಗೆ ಸಹಬಾಳ್ವೆ ನಡೆಸಲು ಸಾಧ್ಯವೇ ಇಲ್ಲ ಅವರು ಪಾಕಿಸ್ತಾನವನ್ನು ಉದ್ದೇಶಿಸಿ ಹೇಳಿದರು.</p>.<p class="bodytext">‘ಯಾವುದೇ ರೀತಿಯ ಭಯೋತ್ಪಾದನೆ ಸಹಿಸಲಾಗುದು. ಅದಕ್ಕೆ ಬೆಂಬಲ ನೀಡುವವರು ಯಾರೇ ಆಗಲಿ, ಎಲ್ಲಿಯೇ ಇರಲಿ, ಅವರ ಉದ್ದೇಶಗಳು ಮಾನವೀಯತೆಯ ವಿರುದ್ಧದ ಅಪರಾಧ ಎಸಗುವುದೇ ಆಗಿದೆ. ಅವರ ವಿರುದ್ಧ ಭಾರತ ಎಲ್ಲ ರೀತಿಯಲ್ಲೂ ಹೋರಾಡುವ ದೃಢ ಸಂಕಲ್ಪ ಹೊಂದಿದೆ’ ಎಂದರು.</p>.<p class="bodytext">ಚೀನಾ, ರಷ್ಯಾ ಮತ್ತು ಎಸ್ಸಿಒದ ಇತರ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ</strong>: ಅಂತರರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಭಯೋತ್ಪಾದನೆಯು ಧಕ್ಕೆ ತರುತ್ತದೆ. ಯಾವುದೇ ಭಯೋತ್ಪಾದಕ ಕೃತ್ಯಗಳಿಗೆ ಬೆಂಬಲ ನೀಡುವುದು ಮಾನವೀಯತೆಯ ವಿರುದ್ಧದ ಅಪರಾಧವೇ ಆಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.</p>.<p class="bodytext">ದುಶಾಂಬೆಯಲ್ಲಿ ಬುಧವಾರ ನಡೆದ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ರಕ್ಷಣಾ ಸಚಿವರ ಸಮಾವೇಶದಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಯ ವಿರುದ್ಧ ಭಾರತ ಎಲ್ಲಾ ರೀತಿಯಲ್ಲೂ ಹೋರಾಡುವ ಸಂಕಲ್ಪ ಹೊಂದಿದೆ ಎಂದು ಪುನರುಚ್ಚರಿಸಿದರು.</p>.<p class="bodytext">ಶಾಂತಿ ಮತ್ತು ಸಮೃದ್ಧಿಯು ಭಯೋತ್ಪಾದನೆಯೊಂದಿಗೆ ಸಹಬಾಳ್ವೆ ನಡೆಸಲು ಸಾಧ್ಯವೇ ಇಲ್ಲ ಅವರು ಪಾಕಿಸ್ತಾನವನ್ನು ಉದ್ದೇಶಿಸಿ ಹೇಳಿದರು.</p>.<p class="bodytext">‘ಯಾವುದೇ ರೀತಿಯ ಭಯೋತ್ಪಾದನೆ ಸಹಿಸಲಾಗುದು. ಅದಕ್ಕೆ ಬೆಂಬಲ ನೀಡುವವರು ಯಾರೇ ಆಗಲಿ, ಎಲ್ಲಿಯೇ ಇರಲಿ, ಅವರ ಉದ್ದೇಶಗಳು ಮಾನವೀಯತೆಯ ವಿರುದ್ಧದ ಅಪರಾಧ ಎಸಗುವುದೇ ಆಗಿದೆ. ಅವರ ವಿರುದ್ಧ ಭಾರತ ಎಲ್ಲ ರೀತಿಯಲ್ಲೂ ಹೋರಾಡುವ ದೃಢ ಸಂಕಲ್ಪ ಹೊಂದಿದೆ’ ಎಂದರು.</p>.<p class="bodytext">ಚೀನಾ, ರಷ್ಯಾ ಮತ್ತು ಎಸ್ಸಿಒದ ಇತರ ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>