<p><strong>ನವದೆಹಲಿ</strong>: ಅಕ್ರಮ ನಿರ್ಮಾಣ ಚಟುವಟಿಕೆಗಳು ಹಾಗೂ ಮರಗಳ ಹನನದಿಂದಾಗಿ ಕಾರ್ಬೆಟ್ ಹುಲಿ ಮೀಸಲು ಅರಣ್ಯಕ್ಕೆ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಿ, ಪರಿಹಾರ ಸೂಚಿಸುವುದಕ್ಕೆ ಸಂಬಂಧಿಸಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.</p><p>‘ಅರಣ್ಯ, ಪರಿಸರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಈ ಸಮಿತಿ ರಚಿಸಬೇಕು. ಈ ಅರಣ್ಯ ಪ್ರದೇಶದ ಪರಿಸರಕ್ಕೆ ಆಗಿರುವ ಹಾನಿಯ ಅಂದಾಜು ಮಾಡುವ ಜೊತೆಗೆ, ಮರುಸ್ಥಾಪನೆಗೆ ತಗಲುವ ವೆಚ್ಚ ಕುರಿತು ವರದಿ ನೀಡಬೇಕು’ ಎಂದೂ ಸೂಚಿಸಿದೆ.</p><p>ಪರಿಸರ ಹೋರಾಟಗಾರ ಹಾಗೂ ವಕೀಲ ಗೌರವ್ ಬನ್ಸಾಲ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಪಿ.ಕೆ.ಮಿಶ್ರಾ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ.</p><p>‘ಈ ಮೀಸಲು ಅರಣ್ಯದ ಬಫರ್ ಅಥವಾ ಅಂಚಿನ ಪ್ರದೇಶದಲ್ಲಿ ಹುಲಿ ಸಫಾರಿಗೆ ಅನುಮತಿ ನೀಡಬಹುದೇ? ಒಂದು ವೇಳೆ, ಅನುಮತಿ ನೀಡಬೇಕು ಎಂದಾದಲ್ಲಿ ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ಪ್ರಶ್ನೆಗಳನ್ನು ಕೂಡ ಸಮಿತಿ ಅಧ್ಯಯನ ವೇಳೆ ಪರಿಗಣಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.</p><p>‘ಈ ಮೀಸಲು ಅರಣ್ಯದಲ್ಲಿನ ಹಾನಿಗೆ ಕಾರಣರಾದ ವ್ಯಕ್ತಿಗಳು/ಅಧಿಕಾರಿಗಳನ್ನು ಗುರುತಿಸಬೇಕು. ಈ ಹಾನಿಗೆ ಸಂಬಂಧಿಸಿ ನಿಗದಿ ಮಾಡಲಾದ ಮೊತ್ತವನ್ನು ಆ ವ್ಯಕ್ತಿಗಳು/ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಈ ರೀತಿ ವಸೂಲಿ ಮಾಡಲಾದ ಮೊತ್ತವನ್ನು ಪರಿಸರ ಮರುಸ್ಥಾಪನೆಗಾಗಿಯೆ ಬಳಸಿಕೊಳ್ಳಬೇಕು’ ಎಂದು ನ್ಯಾಯಪೀಠ ಹೇಳಿದೆ.</p>.<p><strong>‘ಸುಪ್ರೀಂ’ ಆದೇಶದಲ್ಲಿನ ಪ್ರಮುಖ ಅಂಶಗಳು</strong></p><p>* ಸಮಿತಿಯು ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರ, ಭಾರತೀಯ ವನ್ಯಜೀವಿ ಸಂಸ್ಥೆ, ಕೇಂದ್ರೀಯ ಉನ್ನತಾಧಿಕಾರ ಸಮಿತಿಯಿಂದ ತಲಾ ಒಬ್ಬ ಪ್ರತಿನಿಧಿಯನ್ನು ಒಳಗೊಂಡಿರಬೇಕು. ಪರಿಸರ ಸಚಿವಾಲಯ ಸೂಚಿಸುವ, ಜಂಟಿ ಕಾರ್ಯದರ್ಶಿಗಿಂತ ಕಡಿಮೆ ಇರದ ಶ್ರೇಣಿಯ ಅಧಿಕಾರಿಯು ಸದಸ್ಯ ಕಾರ್ಯದರ್ಶಿಯಾಗಿರಬೇಕು</p><p>* ಕಾರ್ಬೆಟ್ ಹುಲಿ ಮೀಸಲು ಅರಣ್ಯದ ಬಫರ್ ಮತ್ತು ಅಂಚಿನ ಪ್ರದೇಶಗಳಲ್ಲಿ ಯಾವ ಬಗೆಯ ಚಟುವಟಿಕೆಗಳಿಗೆ ಅವಕಾಶ ನೀಡಬೇಕು ಹಾಗೂ ನಿಷೇಧ ಹೇರಬೇಕು ಎಂಬ ಬಗ್ಗೆ ಸಮಿತಿ ಶಿಫಾರಸು ಮಾಡಬೇಕು</p><p>* ಒಂದುವೇಳೆ, ಈ ಮೀಸಲು ಅರಣ್ಯದಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬೇಕು ಎಂದಾದಲ್ಲಿ, ಅದು ಪರಿಸರ ಪ್ರವಾಸವೇ ಆಗಿರತಕ್ಕದ್ದು</p><p>* ಮೀಸಲು ಅರಣ್ಯದ ಸಮೀಪದಲ್ಲಿ ಯಾವ ರೀತಿಯ ಮತ್ತು ಎಷ್ಟು ಸಂಖ್ಯೆಯ ರೆಸಾರ್ಟ್ಗಳಿಗೆ ಅನುಮತಿ ನೀಡಬೇಕು. ಪರಿಸರ ವ್ಯವಸ್ಥೆಯ ಸಂರಕ್ಷಣೆ ಹಾಗೂ ನಿರ್ವಹಣೆ ಉದ್ದೇಶದ ಹಿನ್ನೆಲೆಯಲ್ಲಿ ರೆಸಾರ್ಟ್ಗಳ ಮೆಲೆ ಯಾವ ಬಗೆಯ ನಿರ್ಬಂಧಗಳನ್ನು ವಿಧಿಸಬೇಕು ಎಂಬ ಬಗ್ಗೆ ಸಮಿತಿ ಸಲಹೆ ನೀಡಬೇಕು</p><p>* ಈ ಮೀಸಲು ಅರಣ್ಯ ಪ್ರದೇಶದಲ್ಲಿ ಶಬ್ದ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಬೇಕು</p><p>* ಹುಲಿ ಮೀಸಲು ಅರಣ್ಯಗಳ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತು ಉದ್ದೇಶಿತ ಸಮಿತಿಯ ಶಿಫಾರಸಿನಂತೆ ಕೈಗೊಳ್ಳುವ ಕ್ರಮಗಳು ದೇಶದಾದ್ಯಂತ ಅನ್ವಯವಾಗುವಂತೆ ಇರಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಕ್ರಮ ನಿರ್ಮಾಣ ಚಟುವಟಿಕೆಗಳು ಹಾಗೂ ಮರಗಳ ಹನನದಿಂದಾಗಿ ಕಾರ್ಬೆಟ್ ಹುಲಿ ಮೀಸಲು ಅರಣ್ಯಕ್ಕೆ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಿ, ಪರಿಹಾರ ಸೂಚಿಸುವುದಕ್ಕೆ ಸಂಬಂಧಿಸಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.</p><p>‘ಅರಣ್ಯ, ಪರಿಸರ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಈ ಸಮಿತಿ ರಚಿಸಬೇಕು. ಈ ಅರಣ್ಯ ಪ್ರದೇಶದ ಪರಿಸರಕ್ಕೆ ಆಗಿರುವ ಹಾನಿಯ ಅಂದಾಜು ಮಾಡುವ ಜೊತೆಗೆ, ಮರುಸ್ಥಾಪನೆಗೆ ತಗಲುವ ವೆಚ್ಚ ಕುರಿತು ವರದಿ ನೀಡಬೇಕು’ ಎಂದೂ ಸೂಚಿಸಿದೆ.</p><p>ಪರಿಸರ ಹೋರಾಟಗಾರ ಹಾಗೂ ವಕೀಲ ಗೌರವ್ ಬನ್ಸಾಲ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಪಿ.ಕೆ.ಮಿಶ್ರಾ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿದೆ.</p><p>‘ಈ ಮೀಸಲು ಅರಣ್ಯದ ಬಫರ್ ಅಥವಾ ಅಂಚಿನ ಪ್ರದೇಶದಲ್ಲಿ ಹುಲಿ ಸಫಾರಿಗೆ ಅನುಮತಿ ನೀಡಬಹುದೇ? ಒಂದು ವೇಳೆ, ಅನುಮತಿ ನೀಡಬೇಕು ಎಂದಾದಲ್ಲಿ ಯಾವ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂಬ ಪ್ರಶ್ನೆಗಳನ್ನು ಕೂಡ ಸಮಿತಿ ಅಧ್ಯಯನ ವೇಳೆ ಪರಿಗಣಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.</p><p>‘ಈ ಮೀಸಲು ಅರಣ್ಯದಲ್ಲಿನ ಹಾನಿಗೆ ಕಾರಣರಾದ ವ್ಯಕ್ತಿಗಳು/ಅಧಿಕಾರಿಗಳನ್ನು ಗುರುತಿಸಬೇಕು. ಈ ಹಾನಿಗೆ ಸಂಬಂಧಿಸಿ ನಿಗದಿ ಮಾಡಲಾದ ಮೊತ್ತವನ್ನು ಆ ವ್ಯಕ್ತಿಗಳು/ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳಿಂದ ವಸೂಲಿ ಮಾಡಬೇಕು. ಈ ರೀತಿ ವಸೂಲಿ ಮಾಡಲಾದ ಮೊತ್ತವನ್ನು ಪರಿಸರ ಮರುಸ್ಥಾಪನೆಗಾಗಿಯೆ ಬಳಸಿಕೊಳ್ಳಬೇಕು’ ಎಂದು ನ್ಯಾಯಪೀಠ ಹೇಳಿದೆ.</p>.<p><strong>‘ಸುಪ್ರೀಂ’ ಆದೇಶದಲ್ಲಿನ ಪ್ರಮುಖ ಅಂಶಗಳು</strong></p><p>* ಸಮಿತಿಯು ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರ, ಭಾರತೀಯ ವನ್ಯಜೀವಿ ಸಂಸ್ಥೆ, ಕೇಂದ್ರೀಯ ಉನ್ನತಾಧಿಕಾರ ಸಮಿತಿಯಿಂದ ತಲಾ ಒಬ್ಬ ಪ್ರತಿನಿಧಿಯನ್ನು ಒಳಗೊಂಡಿರಬೇಕು. ಪರಿಸರ ಸಚಿವಾಲಯ ಸೂಚಿಸುವ, ಜಂಟಿ ಕಾರ್ಯದರ್ಶಿಗಿಂತ ಕಡಿಮೆ ಇರದ ಶ್ರೇಣಿಯ ಅಧಿಕಾರಿಯು ಸದಸ್ಯ ಕಾರ್ಯದರ್ಶಿಯಾಗಿರಬೇಕು</p><p>* ಕಾರ್ಬೆಟ್ ಹುಲಿ ಮೀಸಲು ಅರಣ್ಯದ ಬಫರ್ ಮತ್ತು ಅಂಚಿನ ಪ್ರದೇಶಗಳಲ್ಲಿ ಯಾವ ಬಗೆಯ ಚಟುವಟಿಕೆಗಳಿಗೆ ಅವಕಾಶ ನೀಡಬೇಕು ಹಾಗೂ ನಿಷೇಧ ಹೇರಬೇಕು ಎಂಬ ಬಗ್ಗೆ ಸಮಿತಿ ಶಿಫಾರಸು ಮಾಡಬೇಕು</p><p>* ಒಂದುವೇಳೆ, ಈ ಮೀಸಲು ಅರಣ್ಯದಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬೇಕು ಎಂದಾದಲ್ಲಿ, ಅದು ಪರಿಸರ ಪ್ರವಾಸವೇ ಆಗಿರತಕ್ಕದ್ದು</p><p>* ಮೀಸಲು ಅರಣ್ಯದ ಸಮೀಪದಲ್ಲಿ ಯಾವ ರೀತಿಯ ಮತ್ತು ಎಷ್ಟು ಸಂಖ್ಯೆಯ ರೆಸಾರ್ಟ್ಗಳಿಗೆ ಅನುಮತಿ ನೀಡಬೇಕು. ಪರಿಸರ ವ್ಯವಸ್ಥೆಯ ಸಂರಕ್ಷಣೆ ಹಾಗೂ ನಿರ್ವಹಣೆ ಉದ್ದೇಶದ ಹಿನ್ನೆಲೆಯಲ್ಲಿ ರೆಸಾರ್ಟ್ಗಳ ಮೆಲೆ ಯಾವ ಬಗೆಯ ನಿರ್ಬಂಧಗಳನ್ನು ವಿಧಿಸಬೇಕು ಎಂಬ ಬಗ್ಗೆ ಸಮಿತಿ ಸಲಹೆ ನೀಡಬೇಕು</p><p>* ಈ ಮೀಸಲು ಅರಣ್ಯ ಪ್ರದೇಶದಲ್ಲಿ ಶಬ್ದ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಬೇಕು</p><p>* ಹುಲಿ ಮೀಸಲು ಅರಣ್ಯಗಳ ಸಂರಕ್ಷಣೆ ಹಾಗೂ ನಿರ್ವಹಣೆ ಕುರಿತು ಉದ್ದೇಶಿತ ಸಮಿತಿಯ ಶಿಫಾರಸಿನಂತೆ ಕೈಗೊಳ್ಳುವ ಕ್ರಮಗಳು ದೇಶದಾದ್ಯಂತ ಅನ್ವಯವಾಗುವಂತೆ ಇರಬೇಕು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>