<p><strong>ನವದೆಹಲಿ</strong>: ಸಂಸತ್ತಿನ ಕೆಳಮನೆಯಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.</p><p>ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರನ್ನೊಳಗೊಂಡ ಪೀಠ, ಮಹುವಾ ಅವರು ತಮ್ಮ ವಿರುದ್ಧದ ಉಚ್ಚಾಟನೆ ಆದೇಶಕ್ಕೆ ತಡೆ ನೀಡಿ, ಸದನದ ಕಲಾಪಗಳಿಗೆ ಹಾಜರಾಗಲು ಅನುವು ಮಾಡಿಕೊಡುವಂತೆ ಮಾಡಿದ ಮನವಿ ಬಗ್ಗೆ ಯಾವುದೇ ಆದೇಶ ನೀಡಲು ನಿರಾಕರಿಸಿತು.</p><p>'ಮಧ್ಯಂತರ ತಡೆ ಕೋರಿರುವ ನಿಮ್ಮ ಮನವಿಯನ್ನು ನಾವು ಮಾರ್ಚ್ನಲ್ಲಿ ಪರಿಗಣಿಸುತ್ತೇವೆ' ಎಂದು ಮಹುವಾ ಪರ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ನ್ಯಾ.ಖನ್ನಾ ತಿಳಿಸಿದ್ದಾರೆ.</p><p>ಪ್ರಧಾನ ಕಾರ್ಯದರ್ಶಿ ಪರ ವಿಚಾರಣೆಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಔಪಚಾರಿಕವಾಗಿ ಯಾವುದೇ ನೋಟಿಸ್ ನೀಡದಂತೆ ಮತ್ತು ಮಹುವಾ ಅವರ ಅರ್ಜಿಗೆ ಪ್ರತಿಕ್ರಿಯೆ ದಾಖಲಿಸುವುದಾಗಿ ಕೋರ್ಟ್ಗೆ ಮನವಿ ಮಾಡಿದರು.</p>.Mahua Moitra: ಆರೋಪದಿಂದ ಉಚ್ಚಾಟನೆವರೆಗೆ.. ಆಗಿದ್ದೇನು?.ಲೋಕಸಭೆಯಿಂದ ಉಚ್ಚಾಟನೆ: ಸುಪ್ರೀಂ ಕೋರ್ಟ್ ಮೊರೆ ಹೋದ ಮಹುವಾ ಮೊಯಿತ್ರಾ.<p>ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ನೀತಿ ನಿಯಮ ಸಮಿತಿಗೆ ನೋಟಿಸ್ ನೀಡಲು ನಿರಾಕರಿಸಿದ ಕೋರ್ಟ್, ಲೋಕಸಭೆಯ ಪ್ರಧಾನ ಕಾರ್ಯದರ್ಶಿಯವರ ಪ್ರತಿಕ್ರಿಯೆಗೆ ಸೂಚನೆ ನೀಡಿದೆ.</p><p><strong>ಮಹುವಾ ಉಚ್ಚಾಟನೆ<br></strong>ಮಹುವಾ ಅವರು ತಮ್ಮ ಸಂಸತ್ ಸದಸ್ಯತ್ವದ ಐಡಿ ಮತ್ತು ಪಾಸ್ವರ್ಡ್ಗಳನ್ನು ಅನಧಿಕೃತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳುವ ಮೂಲಕ 'ಅನೈತಿಕವಾಗಿ' ನಡೆದುಕೊಂಡಿದ್ದಾರೆ. ಇದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಉಂಟುಮಾಡಲಿದೆ ಎಂದು ಲೋಕಸಭೆಯ ನೀತಿ ಸಮಿತಿಯು ಆರೋಪಿಸಿತ್ತು.</p><p>ಅದರಂತೆ, ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿ, ಅದಕ್ಕೆ ಸಂಬಂಧಿಸಿದ 495 ಪುಟಗಳ ವರದಿಯನ್ನು ಡಿಸೆಂಬರ್ 8ರಂದು ಲೋಕಸಭೆಯಲ್ಲಿ ಮಂಡಿಸಿತ್ತು. ವರದಿ ಬೆನ್ನಲ್ಲೇ ಅವರನ್ನು ಉಚ್ಚಾಟಿಸಲಾಗಿತ್ತು. ಇದನ್ನು ಪ್ರಶ್ನಿಸಿ, ಮಹುವಾ ಡಿಸೆಂಬರ್ 11ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಸತ್ತಿನ ಕೆಳಮನೆಯಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.</p><p>ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರನ್ನೊಳಗೊಂಡ ಪೀಠ, ಮಹುವಾ ಅವರು ತಮ್ಮ ವಿರುದ್ಧದ ಉಚ್ಚಾಟನೆ ಆದೇಶಕ್ಕೆ ತಡೆ ನೀಡಿ, ಸದನದ ಕಲಾಪಗಳಿಗೆ ಹಾಜರಾಗಲು ಅನುವು ಮಾಡಿಕೊಡುವಂತೆ ಮಾಡಿದ ಮನವಿ ಬಗ್ಗೆ ಯಾವುದೇ ಆದೇಶ ನೀಡಲು ನಿರಾಕರಿಸಿತು.</p><p>'ಮಧ್ಯಂತರ ತಡೆ ಕೋರಿರುವ ನಿಮ್ಮ ಮನವಿಯನ್ನು ನಾವು ಮಾರ್ಚ್ನಲ್ಲಿ ಪರಿಗಣಿಸುತ್ತೇವೆ' ಎಂದು ಮಹುವಾ ಪರ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ನ್ಯಾ.ಖನ್ನಾ ತಿಳಿಸಿದ್ದಾರೆ.</p><p>ಪ್ರಧಾನ ಕಾರ್ಯದರ್ಶಿ ಪರ ವಿಚಾರಣೆಗೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಔಪಚಾರಿಕವಾಗಿ ಯಾವುದೇ ನೋಟಿಸ್ ನೀಡದಂತೆ ಮತ್ತು ಮಹುವಾ ಅವರ ಅರ್ಜಿಗೆ ಪ್ರತಿಕ್ರಿಯೆ ದಾಖಲಿಸುವುದಾಗಿ ಕೋರ್ಟ್ಗೆ ಮನವಿ ಮಾಡಿದರು.</p>.Mahua Moitra: ಆರೋಪದಿಂದ ಉಚ್ಚಾಟನೆವರೆಗೆ.. ಆಗಿದ್ದೇನು?.ಲೋಕಸಭೆಯಿಂದ ಉಚ್ಚಾಟನೆ: ಸುಪ್ರೀಂ ಕೋರ್ಟ್ ಮೊರೆ ಹೋದ ಮಹುವಾ ಮೊಯಿತ್ರಾ.<p>ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ನೀತಿ ನಿಯಮ ಸಮಿತಿಗೆ ನೋಟಿಸ್ ನೀಡಲು ನಿರಾಕರಿಸಿದ ಕೋರ್ಟ್, ಲೋಕಸಭೆಯ ಪ್ರಧಾನ ಕಾರ್ಯದರ್ಶಿಯವರ ಪ್ರತಿಕ್ರಿಯೆಗೆ ಸೂಚನೆ ನೀಡಿದೆ.</p><p><strong>ಮಹುವಾ ಉಚ್ಚಾಟನೆ<br></strong>ಮಹುವಾ ಅವರು ತಮ್ಮ ಸಂಸತ್ ಸದಸ್ಯತ್ವದ ಐಡಿ ಮತ್ತು ಪಾಸ್ವರ್ಡ್ಗಳನ್ನು ಅನಧಿಕೃತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳುವ ಮೂಲಕ 'ಅನೈತಿಕವಾಗಿ' ನಡೆದುಕೊಂಡಿದ್ದಾರೆ. ಇದು ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಉಂಟುಮಾಡಲಿದೆ ಎಂದು ಲೋಕಸಭೆಯ ನೀತಿ ಸಮಿತಿಯು ಆರೋಪಿಸಿತ್ತು.</p><p>ಅದರಂತೆ, ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿ, ಅದಕ್ಕೆ ಸಂಬಂಧಿಸಿದ 495 ಪುಟಗಳ ವರದಿಯನ್ನು ಡಿಸೆಂಬರ್ 8ರಂದು ಲೋಕಸಭೆಯಲ್ಲಿ ಮಂಡಿಸಿತ್ತು. ವರದಿ ಬೆನ್ನಲ್ಲೇ ಅವರನ್ನು ಉಚ್ಚಾಟಿಸಲಾಗಿತ್ತು. ಇದನ್ನು ಪ್ರಶ್ನಿಸಿ, ಮಹುವಾ ಡಿಸೆಂಬರ್ 11ರಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>