<p><strong>ಹೈದಾರಬಾದ್</strong>: 'ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ದೇಶದ ಅತ್ಯಂತ ಭ್ರಷ್ಟ ರಾಜಕಾರಣಿ‘ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. </p>.ತೆಲಂಗಾಣ ದೇಶದಲ್ಲೇ ಕಡಿಮೆ ಭ್ರಷ್ಟಾಚಾರ ಹೊಂದಿರುವ ರಾಜ್ಯ: ಕೆ.ಕವಿತಾ .<p>‘ತೆಲಂಗಾಣ ಚುನಾವಣೆ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಆಡಳಿತಾರೂಢ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ಪಕ್ಷವು ಮದ್ಯ ಹಗರಣ, ಕಾಳೇಶ್ವರಂ ಯೋಜನೆ, ಹೈದರಾಬಾದ್ನ ಮಿಯಾಪುರ್ನಲ್ಲಿ ನಡೆಸಲಾದ ಭೂ ಅವ್ಯವಹಾರಗಳು ಸೇರಿದಂತೆ ವಿವಿಧ ಹಗರಣಗಳಲ್ಲಿ ಭಾಗಿಯಾಗಿದೆ‘ ಎಂದರು. </p>.ಕಾಂಗ್ರೆಸ್ ತೂಫಾನ್ಗೆ ತೆಲಂಗಾಣ ಸಾಕ್ಷಿಯಾಗಲಿದೆ: ರಾಹುಲ್ ಗಾಂಧಿ. <p>‘ಕೆ.ಸಿ ರಾವ್ ದೇಶದ ಅತ್ಯಂತ ಭ್ರಷ್ಟ ರಾಜಕಾರಣಿದ್ದು, ಅವರು ಭಾಗಿಯಾಗಿರುವ ಎಲ್ಲಾ ಹಗರಣಗಳ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ಭ್ರಷ್ಟಚಾರದಲ್ಲಿ ತೊಡಗಿರುವವರನ್ನು ಬಿಜೆಪಿ ಜೈಲಿಗೆ ಕಳುಹಿಸುತ್ತದೆ‘ ಎಂದು ಅಮಿತ್ ಶಾ ಹೇಳಿದ್ದಾರೆ.</p>.ತೆಲಂಗಾಣ ಚುನಾವಣೆ | ಯುವಜನರ ಕನಸುಗಳನ್ನು ಬಿಆರ್ಎಸ್ ಕೊಂದಿದೆ: ರಾಹುಲ್ ಗಾಂಧಿ.<p>‘ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗುವುದು. ಹಾಗೂ ಅಭಿವೃದ್ಧಿ ಹೆಸರಿನಲ್ಲಿ ಕಾಳೇಶ್ವರಂ ಮತ್ತು ಧರಣೆ ಯೋಜನೆಗಳಲ್ಲಿ ನಡೆಸಲಾದ ಹಗರಣ ಕುರಿತು ತನಿಖೆ ನಡೆಸಲಾಗವುದು. ಅಯೋಧ್ಯಾಯ ರಾಮಮಂದಿರಕ್ಕೆ ಉಚಿತವಾಗಿ ಪ್ರವಾಸ ಏರ್ಪಡಿಸಲಾಗುವುದು‘ ಎಂದು ಅಮಿತ್ ಶಾ ಪುನರುಚ್ಚರಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದಾರಬಾದ್</strong>: 'ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ದೇಶದ ಅತ್ಯಂತ ಭ್ರಷ್ಟ ರಾಜಕಾರಣಿ‘ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. </p>.ತೆಲಂಗಾಣ ದೇಶದಲ್ಲೇ ಕಡಿಮೆ ಭ್ರಷ್ಟಾಚಾರ ಹೊಂದಿರುವ ರಾಜ್ಯ: ಕೆ.ಕವಿತಾ .<p>‘ತೆಲಂಗಾಣ ಚುನಾವಣೆ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಆಡಳಿತಾರೂಢ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್ಎಸ್) ಪಕ್ಷವು ಮದ್ಯ ಹಗರಣ, ಕಾಳೇಶ್ವರಂ ಯೋಜನೆ, ಹೈದರಾಬಾದ್ನ ಮಿಯಾಪುರ್ನಲ್ಲಿ ನಡೆಸಲಾದ ಭೂ ಅವ್ಯವಹಾರಗಳು ಸೇರಿದಂತೆ ವಿವಿಧ ಹಗರಣಗಳಲ್ಲಿ ಭಾಗಿಯಾಗಿದೆ‘ ಎಂದರು. </p>.ಕಾಂಗ್ರೆಸ್ ತೂಫಾನ್ಗೆ ತೆಲಂಗಾಣ ಸಾಕ್ಷಿಯಾಗಲಿದೆ: ರಾಹುಲ್ ಗಾಂಧಿ. <p>‘ಕೆ.ಸಿ ರಾವ್ ದೇಶದ ಅತ್ಯಂತ ಭ್ರಷ್ಟ ರಾಜಕಾರಣಿದ್ದು, ಅವರು ಭಾಗಿಯಾಗಿರುವ ಎಲ್ಲಾ ಹಗರಣಗಳ ಕುರಿತು ಸಮಗ್ರ ತನಿಖೆ ನಡೆಸಲಾಗುವುದು. ಭ್ರಷ್ಟಚಾರದಲ್ಲಿ ತೊಡಗಿರುವವರನ್ನು ಬಿಜೆಪಿ ಜೈಲಿಗೆ ಕಳುಹಿಸುತ್ತದೆ‘ ಎಂದು ಅಮಿತ್ ಶಾ ಹೇಳಿದ್ದಾರೆ.</p>.ತೆಲಂಗಾಣ ಚುನಾವಣೆ | ಯುವಜನರ ಕನಸುಗಳನ್ನು ಬಿಆರ್ಎಸ್ ಕೊಂದಿದೆ: ರಾಹುಲ್ ಗಾಂಧಿ.<p>‘ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಲಾಗುವುದು. ಹಾಗೂ ಅಭಿವೃದ್ಧಿ ಹೆಸರಿನಲ್ಲಿ ಕಾಳೇಶ್ವರಂ ಮತ್ತು ಧರಣೆ ಯೋಜನೆಗಳಲ್ಲಿ ನಡೆಸಲಾದ ಹಗರಣ ಕುರಿತು ತನಿಖೆ ನಡೆಸಲಾಗವುದು. ಅಯೋಧ್ಯಾಯ ರಾಮಮಂದಿರಕ್ಕೆ ಉಚಿತವಾಗಿ ಪ್ರವಾಸ ಏರ್ಪಡಿಸಲಾಗುವುದು‘ ಎಂದು ಅಮಿತ್ ಶಾ ಪುನರುಚ್ಚರಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>