<p><strong>ಲಖನೌ</strong>: ಅಂಗಡಿ ತೆರೆಯುವ ವಿಚಾರವಾಗಿ ಉಂಟಾದ ವಿವಾದದಲ್ಲಿ ಕಿಡಿಗೇಡಿಗಳ ಗುಂಪೊಂದು ಬಡಿಗೆ, ಇಟ್ಟಿಗೆಗಳಿಂದ ಥಳಿಸಿ, ಅರ್ಚಕರೊಬ್ಬರನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ತೆನುವಾ ಚೌಬೆ ಗ್ರಾಮದಲ್ಲಿ ನಡೆದಿದೆ.</p>.<p>60 ವರ್ಷದ ಅಶೋಕ್ ಚೌಬೆ ಕೊಲೆಯಾದವರು. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.</p>.<p>ಅಶೋಕ್ ಅವರು ತಮ್ಮ ಊರಿನ ಸಮೀಪದ ಗ್ರಾಮ ಬಾರಿಪುರದಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು.</p>.<p>‘ಅಶೋಕ್ ತಮ್ಮ ಮನೆ ಪಕ್ಕದಲ್ಲಿಯೇ ಇರುವ ಅಂಗಡಿಯನ್ನು ಮುಚ್ಚುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಹೌಸಲಾ ಪಾಸ್ವಾನ್ ಎಂಬಾತನ ಕುಟುಂಬದ ಕೆಲವರು, ಅಂಗಡಿ ತೆರೆಯುವಂತೆ ಒತ್ತಾಯಿಸಿದ್ದರು. ಅಂಗಡಿ ಮುಚ್ಚುವ ಸಮಯವಾಗಿದೆ ಎಂದು ಹೇಳಿದ್ದ ಅಶೋಕ್, ಅವರ ಮನವಿಯನ್ನು ತಿರಸ್ಕರಿಸಿದ್ದರು. ಈ ವೇಳೆ, ಪಾಸ್ವಾನ್ ಕುಟುಂಬದವರು ಹಾಗೂ ಅಶೋಕ್ ನಡುವೆ ವಾಗ್ವಾದ ನಡೆದಿತ್ತು‘ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>‘ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಾಗಿ ಪಾಸ್ವಾನ್ ಕುಟುಂಬದವರು ಬೆದರಿಕೆ ಹಾಕಿದ್ದರಿಂದ, ಈ ಕುರಿತು ಅಶೋಕ್ ಅವರು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಮಂಗಳವಾರ ರಾತ್ರಿ ಅಶೋಕ್ ಅವರು ತೆನುವಾ ಚೌಬೆ ಗ್ರಾಮದಲ್ಲಿರುವ ತಮ್ಮ ಮನೆ ಮುಂದೆ ಕುಳಿತಿದ್ದ ವೇಳೆ, 10ಕ್ಕೂ ಹೆಚ್ಚು ದುಷ್ಕರ್ಮಿಗಳಿದ್ದ ಗುಂಪೊಂದು ಅಶೋಕ್ ಅವರ ಮೇಲೆ ಬಡಿಗೆ ಹಾಗೂ ಇಟ್ಟಿಗೆಗಳಿಂದ ದಾಳಿ ನಡೆಸಿತು’</p>.<p>‘ತೀವ್ರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಗೋರಖಪುರದ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರ ಗಾಯಗಳಿಂದಾಗಿ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>‘ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಘಟನೆಗೆ ಸಂಬಂಧಿಸಿ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ಆಗ್ರಹ: ಸ್ಥಳೀಯ ದೇವಸ್ಥಾನಗಳ ಸಾಧು–ಸಂತರು ಘಟನೆಯನ್ನು ಖಂಡಿಸಿದ್ದು, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಅಂಗಡಿ ತೆರೆಯುವ ವಿಚಾರವಾಗಿ ಉಂಟಾದ ವಿವಾದದಲ್ಲಿ ಕಿಡಿಗೇಡಿಗಳ ಗುಂಪೊಂದು ಬಡಿಗೆ, ಇಟ್ಟಿಗೆಗಳಿಂದ ಥಳಿಸಿ, ಅರ್ಚಕರೊಬ್ಬರನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ತೆನುವಾ ಚೌಬೆ ಗ್ರಾಮದಲ್ಲಿ ನಡೆದಿದೆ.</p>.<p>60 ವರ್ಷದ ಅಶೋಕ್ ಚೌಬೆ ಕೊಲೆಯಾದವರು. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.</p>.<p>ಅಶೋಕ್ ಅವರು ತಮ್ಮ ಊರಿನ ಸಮೀಪದ ಗ್ರಾಮ ಬಾರಿಪುರದಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು.</p>.<p>‘ಅಶೋಕ್ ತಮ್ಮ ಮನೆ ಪಕ್ಕದಲ್ಲಿಯೇ ಇರುವ ಅಂಗಡಿಯನ್ನು ಮುಚ್ಚುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಹೌಸಲಾ ಪಾಸ್ವಾನ್ ಎಂಬಾತನ ಕುಟುಂಬದ ಕೆಲವರು, ಅಂಗಡಿ ತೆರೆಯುವಂತೆ ಒತ್ತಾಯಿಸಿದ್ದರು. ಅಂಗಡಿ ಮುಚ್ಚುವ ಸಮಯವಾಗಿದೆ ಎಂದು ಹೇಳಿದ್ದ ಅಶೋಕ್, ಅವರ ಮನವಿಯನ್ನು ತಿರಸ್ಕರಿಸಿದ್ದರು. ಈ ವೇಳೆ, ಪಾಸ್ವಾನ್ ಕುಟುಂಬದವರು ಹಾಗೂ ಅಶೋಕ್ ನಡುವೆ ವಾಗ್ವಾದ ನಡೆದಿತ್ತು‘ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>‘ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಾಗಿ ಪಾಸ್ವಾನ್ ಕುಟುಂಬದವರು ಬೆದರಿಕೆ ಹಾಕಿದ್ದರಿಂದ, ಈ ಕುರಿತು ಅಶೋಕ್ ಅವರು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಆದರೆ, ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ’ ಎಂದು ತಿಳಿಸಿದ್ದಾರೆ.</p>.<p>‘ಮಂಗಳವಾರ ರಾತ್ರಿ ಅಶೋಕ್ ಅವರು ತೆನುವಾ ಚೌಬೆ ಗ್ರಾಮದಲ್ಲಿರುವ ತಮ್ಮ ಮನೆ ಮುಂದೆ ಕುಳಿತಿದ್ದ ವೇಳೆ, 10ಕ್ಕೂ ಹೆಚ್ಚು ದುಷ್ಕರ್ಮಿಗಳಿದ್ದ ಗುಂಪೊಂದು ಅಶೋಕ್ ಅವರ ಮೇಲೆ ಬಡಿಗೆ ಹಾಗೂ ಇಟ್ಟಿಗೆಗಳಿಂದ ದಾಳಿ ನಡೆಸಿತು’</p>.<p>‘ತೀವ್ರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಗೋರಖಪುರದ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರ ಗಾಯಗಳಿಂದಾಗಿ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು’ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.</p>.<p>‘ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಘಟನೆಗೆ ಸಂಬಂಧಿಸಿ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ಆಗ್ರಹ: ಸ್ಥಳೀಯ ದೇವಸ್ಥಾನಗಳ ಸಾಧು–ಸಂತರು ಘಟನೆಯನ್ನು ಖಂಡಿಸಿದ್ದು, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>