<p><strong>ಆಗ್ರಾ</strong>: ಕಳ್ಳರು ₹ 30 ಲಕ್ಷ ಹಣವಿದ್ದ ಎಟಿಎಂ ಯಂತ್ರವನ್ನೇ ಕದ್ದೊಯ್ದಿರುವ ಘಟನೆ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ನಡೆದಿದೆ.</p><p>ಬ್ಯಾಂಕ್ ಮ್ಯಾನೇಜರ್ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಖದೀಮರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸೋಮವಾರ ಬೆಳಗಿನ ಜಾವ 2.45ರ ಸುಮಾರಿಗೆ ಕಗರೋಲ್ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ.</p><p>ಎಟಿಎಂನಲ್ಲಿ ಶಬ್ಧ ಕೇಳಿ ಜೋರಾಗಿ ಕೂಗುವ ಮೂಲಕ ಸ್ಥಳೀಯರನ್ನು ಎಚ್ಚರಿಸಿದೆ ಎಂದು ಎಸ್ಬಿಐ ಬ್ಯಾಂಕ್ ಶಾಖೆ ಇರುವ ಕಟ್ಟಡದ ಮಾಲೀಕರು ಹೇಳಿದ್ದಾರೆ.</p><p>ಆದರೆ, ಜನ ಸೇರುವ ಹೊತ್ತಿಗೆ ಕಳ್ಳರು ಎಟಿಎಂ ಮೆಷಿನನ್ನು ವ್ಯಾನ್ನಲ್ಲಿ ಹಾಕಿಕೊಂಡು ಹೋದರು ಎಂದೂ ಅವರು ಹೇಳಿದ್ದಾರೆ.</p><p>ಕದ್ದೊಯ್ದಿರುವ ಎಟಿಎಂನಲ್ಲಿ ₹30 ಲಕ್ಷ ಹಣವಿತ್ತು ಎಂದು ಬ್ಯಾಂಕ್ ಮ್ಯಾನೇಜರ್ ಹೇಳಿದ್ಧಾರೆ.</p><p>ಖಾಸಗಿ ವಾಹನದ ಜೊತೆ ಕಗರೋಲ್ ಎಸ್ಬಿಐ ಶಾಖೆಗೆ ನುಗ್ಗಿರುವ ಅಪರಿಚಿತ ವ್ಯಕ್ತಿಗಳು ಎಟಿಎಂ ಕದ್ದೊಯ್ದಿದ್ದಾರೆ. ಸಿಸಿಟಿವಿ ದೃಶ್ಯ ಪರಿಶೀಲಿಸಲಾಗುತ್ತಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎಂದು ಆಗ್ರಾ ಪೊಲೀಸ್ ಕಮೀಷನರ್ ಪ್ರೀತಿಂದರ್ ಸಿಂಗ್ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಗ್ರಾ</strong>: ಕಳ್ಳರು ₹ 30 ಲಕ್ಷ ಹಣವಿದ್ದ ಎಟಿಎಂ ಯಂತ್ರವನ್ನೇ ಕದ್ದೊಯ್ದಿರುವ ಘಟನೆ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ನಡೆದಿದೆ.</p><p>ಬ್ಯಾಂಕ್ ಮ್ಯಾನೇಜರ್ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ಖದೀಮರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸೋಮವಾರ ಬೆಳಗಿನ ಜಾವ 2.45ರ ಸುಮಾರಿಗೆ ಕಗರೋಲ್ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ.</p><p>ಎಟಿಎಂನಲ್ಲಿ ಶಬ್ಧ ಕೇಳಿ ಜೋರಾಗಿ ಕೂಗುವ ಮೂಲಕ ಸ್ಥಳೀಯರನ್ನು ಎಚ್ಚರಿಸಿದೆ ಎಂದು ಎಸ್ಬಿಐ ಬ್ಯಾಂಕ್ ಶಾಖೆ ಇರುವ ಕಟ್ಟಡದ ಮಾಲೀಕರು ಹೇಳಿದ್ದಾರೆ.</p><p>ಆದರೆ, ಜನ ಸೇರುವ ಹೊತ್ತಿಗೆ ಕಳ್ಳರು ಎಟಿಎಂ ಮೆಷಿನನ್ನು ವ್ಯಾನ್ನಲ್ಲಿ ಹಾಕಿಕೊಂಡು ಹೋದರು ಎಂದೂ ಅವರು ಹೇಳಿದ್ದಾರೆ.</p><p>ಕದ್ದೊಯ್ದಿರುವ ಎಟಿಎಂನಲ್ಲಿ ₹30 ಲಕ್ಷ ಹಣವಿತ್ತು ಎಂದು ಬ್ಯಾಂಕ್ ಮ್ಯಾನೇಜರ್ ಹೇಳಿದ್ಧಾರೆ.</p><p>ಖಾಸಗಿ ವಾಹನದ ಜೊತೆ ಕಗರೋಲ್ ಎಸ್ಬಿಐ ಶಾಖೆಗೆ ನುಗ್ಗಿರುವ ಅಪರಿಚಿತ ವ್ಯಕ್ತಿಗಳು ಎಟಿಎಂ ಕದ್ದೊಯ್ದಿದ್ದಾರೆ. ಸಿಸಿಟಿವಿ ದೃಶ್ಯ ಪರಿಶೀಲಿಸಲಾಗುತ್ತಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಐದು ತಂಡಗಳನ್ನು ರಚಿಸಲಾಗಿದೆ ಎಂದು ಆಗ್ರಾ ಪೊಲೀಸ್ ಕಮೀಷನರ್ ಪ್ರೀತಿಂದರ್ ಸಿಂಗ್ ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>