<p><strong>ಗುವಾಹಟಿ:</strong> ಅಸ್ಸಾಂನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಶಂಕಿತ ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಅವರಿಂದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.</p> <p>ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 2 ದಿನಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಸ್ಸಾಂ ಪೊಲೀಸರು, ಅಸಂಖ್ಯಾತ ಯುವಕರ ಜೀವನವನ್ನು ರಕ್ಷಿಸಿದ್ದಾರೆ ಎಂದು ಬರೆದಿಕೊಂಡಿದ್ದಾರೆ.</p>.<p>ಮೊದಲ ಕಾರ್ಯಾಚರಣೆಯಲ್ಲಿ 2 ಲಕ್ಷ ವೈಎಬಿಎ ಮಾತ್ರೆಗಳೊಂದಿಗೆ ಒಬ್ಬ ವ್ಯಕ್ತಿಯನ್ನು ಕರೀಂಗಂಜ್ ಪೊಲೀಸರು ಬಂಧಿಸಿದ್ದಾರೆ. ಜೋರ್ಹತ್ ಮತ್ತು ಗೋಲಾಘಾಟ್ ಪೊಲೀಸರು ನಡೆಸಿದ 2ನೇ ಕಾರ್ಯಾಚರಣೆಯಲ್ಲಿ 358 ಗ್ರಾಂ ಹೆರಾಯಿನ್ನೊಂದಿಗೆ ಶಂಕಿತನನ್ನು ಬಂಧಿಸಿದ್ದಾರೆ.</p> <p>3ನೇ ಕಾರ್ಯಾಚರಣೆಯಲ್ಲಿ ಕರೀಂಗಂಜ್ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತನಿಂದ 1.2 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ಅಲ್ಲದೇ ಮಾದಕವಸ್ತುಗಳನ್ನು ನೆರೆಯ ರಾಜ್ಯಗಳಿಂದ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದೂ ಶರ್ಮಾ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಅಸ್ಸಾಂನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಶಂಕಿತ ಡ್ರಗ್ಸ್ ಪೆಡ್ಲರ್ಗಳನ್ನು ಬಂಧಿಸಲಾಗಿದೆ. ಅವರಿಂದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.</p> <p>ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, 2 ದಿನಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಸ್ಸಾಂ ಪೊಲೀಸರು, ಅಸಂಖ್ಯಾತ ಯುವಕರ ಜೀವನವನ್ನು ರಕ್ಷಿಸಿದ್ದಾರೆ ಎಂದು ಬರೆದಿಕೊಂಡಿದ್ದಾರೆ.</p>.<p>ಮೊದಲ ಕಾರ್ಯಾಚರಣೆಯಲ್ಲಿ 2 ಲಕ್ಷ ವೈಎಬಿಎ ಮಾತ್ರೆಗಳೊಂದಿಗೆ ಒಬ್ಬ ವ್ಯಕ್ತಿಯನ್ನು ಕರೀಂಗಂಜ್ ಪೊಲೀಸರು ಬಂಧಿಸಿದ್ದಾರೆ. ಜೋರ್ಹತ್ ಮತ್ತು ಗೋಲಾಘಾಟ್ ಪೊಲೀಸರು ನಡೆಸಿದ 2ನೇ ಕಾರ್ಯಾಚರಣೆಯಲ್ಲಿ 358 ಗ್ರಾಂ ಹೆರಾಯಿನ್ನೊಂದಿಗೆ ಶಂಕಿತನನ್ನು ಬಂಧಿಸಿದ್ದಾರೆ.</p> <p>3ನೇ ಕಾರ್ಯಾಚರಣೆಯಲ್ಲಿ ಕರೀಂಗಂಜ್ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತನಿಂದ 1.2 ಕೆ.ಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ಅಲ್ಲದೇ ಮಾದಕವಸ್ತುಗಳನ್ನು ನೆರೆಯ ರಾಜ್ಯಗಳಿಂದ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದೂ ಶರ್ಮಾ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>