ಅಮರಾವತಿ: ಕುವೈತ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ರಾಜ್ಯದ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ.
ಮೃತರನ್ನು ಶ್ರೀಕಾಕುಳಂ ಜಿಲ್ಲೆಯ ಟಿ. ಲೋಕಾನಂದಂ, ಪಶ್ಚಿಮ ಗೋದಾವರಿ ಜಿಲ್ಲೆಯ ಎಂ. ಸತ್ಯನಾರಾಯಣ ಮತ್ತು ಎಂ.ಈಶ್ವರುಡು ಎಂದು ಗುರುತಿಸಲಾಗಿದೆ ಎಂದು ಆಂಧ್ರಪ್ರದೇಶ ಅನಿವಾಸಿ ತೆಲುಗು ಸೊಸೈಟಿ (APNRTS) ತಿಳಿಸಿದೆ.