ಪ್ರಯೋಗಾಲಯದ ವರದಿಯನ್ನು ಆಂಧ್ರಪ್ರದೇಶ ಸರ್ಕಾರವಾಗಲೀ ಅಥವಾ ವೆಂಕಟೇಶ್ವರ ಸ್ವಾಮಿ ದೇಗುಲ ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ಖಾತ್ರಿಪಡಿಸಿಲ್ಲ.
ಗುಜರಾತ್ನ ಆನಂದ್ನಲ್ಲಿರುವ ಜಾನುವಾರು ಹಾಗೂ ಆಹಾರ ಕುರಿತ ವಿಶ್ಲೇಷಣೆ ಮತ್ತು ಕಲಿಕಾ ಕೇಂದ್ರದ ಪ್ರಯೋಗಾಲಯವು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ ಬಹುಶಿಸ್ತೀಯ ವಿಶ್ಲೇಷಣಾತ್ಮಕ ಪ್ರಯೋಗಾಲಯದ ಭಾಗವಾಗಿದೆ.
ವೆಂಕಟೇಶ್ವರ ದೇವಸ್ಥಾನದ ಪವಿತ್ರ ಪ್ರಸಾದವಾದ ತಿರುಪತಿ ಲಾಡು ತಯಾರಿಕೆಯಲ್ಲಿ ಹಿಂದಿನ ವೈಎಸ್ಆರ್ಸಿಪಿ ಸರ್ಕಾರವು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಬುಧವಾರ ಆರೋಪಿಸಿದ್ದರು. ಆದರೆ ಈ ಆರೋಪವನ್ನು ವೈಎಸ್ಆರ್ಸಿಪಿ ಕಾಂಗ್ರೆಸ್ ನಿರಾಕರಿಸಿತ್ತು.