ಚೆನ್ನೈ (ಪಿಟಿಐ): ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಆರೋಪದ ಮೇಲೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ರಾಜ್ಯ ಸರ್ಕಾರವು ಬುಧವಾರ ಮಾನನಷ್ಟ ಮೊಕದ್ದಮೆ ಹೂಡಿದೆ.
ಸರ್ಕಾರಿ ವಕೀಲ ಜಿ.ದೇವರಾಜನ್ ಅವರು ಅಣ್ಣಾಮಲೈ ಮಾಡಿರುವ ಎರಡು ಆರೋಪಗಳಿಗೆ ಸಂಬಂಧಿಸಿದಂತೆ ರಜಾ ಅವಧಿಯ ಸೆಷನ್ಸ್ ನ್ಯಾಯಾಧೀಶೆ ಸಿ. ಉಮಾ ಮಹೇಶ್ವರಿ ಅವರ ಪೀಠದೆದುರು ಮೊಕದ್ದಮೆ ದಾಖಲಿಸಿದ್ದಾರೆ.
ಸ್ಟಾಲಿನ್ ಅವರು ಹೂಡಿಕೆದಾರ ಸಂಸ್ಥೆ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದರು ಮತ್ತು ₹200 ಕೋಟಿ ಲಂಚ ಪಡೆದಿದ್ದರು ಎಂದು ಅಣ್ಣಾಮಲೈ ಅವರು ಕಳೆದ ಏಪ್ರಿಲ್ನಲ್ಲಿ ಸುದ್ದಿಗೋಷ್ಠಿಯೊಂದರಲ್ಲಿ ಆರೋಪಿಸಿದ್ದರು.
ಸ್ಟಾಲಿನ್ರ ಹೆಸರಿಗೆ ಚ್ಯುತಿ ತರುವ ಉದ್ದೇಶದಿಂದಲೇ ಈ ಸುಳ್ಳು ಆರೋಪಗಳನ್ನು ಮಾಡಲಾಗಿದೆ ಎಂದು ಡಿಎಂಕೆ ಆರೋಪಿಸಿತ್ತು.