<p><strong>ರಾಂಚಿ (ಪಿಟಿಐ)</strong>: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಶನಿವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಆದರೆ, ಇದರ ಮುನ್ನ ದಿನವಾದ ಶುಕ್ರವಾರ, ಕೇಂದ್ರದ ತನಿಖಾ ಸಂಸ್ಥೆಗಳ ವಿರುದ್ಧ ಹಲವು ಬುಡಕಟ್ಟು ಸಂಘಟನೆಗಳು ಪ್ರತಿಭಟನೆ ನಡೆಸಿದವು. </p>.<p>ಬುಡಕಟ್ಟು ಸಮುದಾಯದ ಶಸ್ತ್ರಾಸ್ತ್ರಗಳಾದ ಬಿಲ್ಲು ಮತ್ತು ಬಾಣಗಳು, ‘ಸರ್ನಾ’ ಧರ್ಮದ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಕಾರರು, ರಾಂಚಿಯ ಮೋರಾಬದಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. </p>.<p>‘ಬುಡಕಟ್ಟು ಸಮುದಾಯದ ಮುಖ್ಯಮಂತ್ರಿಗೆ ಕಿರುಕುಳ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು’ ಎಂಬ ಘೋಷಣಾ ಫಲಕವನ್ನು ಪ್ರದರ್ಶಿಸಿದರು. ರಾಜಭವನದ ಬಳಿ ಪ್ರತಿಭಟನೆ ನಡೆಸಿ, ಸೊರೇನ್ ವಿರುದ್ಧದ ಕ್ರಮಗಳನ್ನು ಇ.ಡಿ ಅಧಿಕಾರಿಗಳು ನಿಲ್ಲಿಸದಿದ್ದರೆ ಜಾರ್ಖಂಡನ್ನಲ್ಲಿ ಮತ್ತೊಂದು ‘ಉಲ್ಗುಲಾನ್’ (ದಂಗೆ) ನಡೆಯಲಿದೆ ಎಂದು ಎಚ್ಚರಿಸಿದರು. </p>.<p>19ನೇ ಶತಮಾನದಲ್ಲಿ ಸ್ಥಳೀಯ ಆಡಳಿತಾಧಿಕಾರಿಗಳು ಬುಡಕಟ್ಟು ಜನರ ಮೇಲೆ ನಡೆಸುತ್ತಿದ್ದ ದೌರ್ಜನ್ಯ ಮತ್ತು ತಾರತಮ್ಯ ವಿರೋಧಿಸಿ ಬಿರ್ಸಾ ಮುಂಡಾ ಅವರು ‘ಉಲ್ಗುಲಾನ್’ ಚಳವಳಿ ನಡೆಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ (ಪಿಟಿಐ)</strong>: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಶನಿವಾರ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಆದರೆ, ಇದರ ಮುನ್ನ ದಿನವಾದ ಶುಕ್ರವಾರ, ಕೇಂದ್ರದ ತನಿಖಾ ಸಂಸ್ಥೆಗಳ ವಿರುದ್ಧ ಹಲವು ಬುಡಕಟ್ಟು ಸಂಘಟನೆಗಳು ಪ್ರತಿಭಟನೆ ನಡೆಸಿದವು. </p>.<p>ಬುಡಕಟ್ಟು ಸಮುದಾಯದ ಶಸ್ತ್ರಾಸ್ತ್ರಗಳಾದ ಬಿಲ್ಲು ಮತ್ತು ಬಾಣಗಳು, ‘ಸರ್ನಾ’ ಧರ್ಮದ ಧ್ವಜಗಳನ್ನು ಹಿಡಿದಿದ್ದ ಪ್ರತಿಭಟನಕಾರರು, ರಾಂಚಿಯ ಮೋರಾಬದಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು. </p>.<p>‘ಬುಡಕಟ್ಟು ಸಮುದಾಯದ ಮುಖ್ಯಮಂತ್ರಿಗೆ ಕಿರುಕುಳ ನೀಡುವುದನ್ನು ತಕ್ಷಣವೇ ನಿಲ್ಲಿಸಬೇಕು’ ಎಂಬ ಘೋಷಣಾ ಫಲಕವನ್ನು ಪ್ರದರ್ಶಿಸಿದರು. ರಾಜಭವನದ ಬಳಿ ಪ್ರತಿಭಟನೆ ನಡೆಸಿ, ಸೊರೇನ್ ವಿರುದ್ಧದ ಕ್ರಮಗಳನ್ನು ಇ.ಡಿ ಅಧಿಕಾರಿಗಳು ನಿಲ್ಲಿಸದಿದ್ದರೆ ಜಾರ್ಖಂಡನ್ನಲ್ಲಿ ಮತ್ತೊಂದು ‘ಉಲ್ಗುಲಾನ್’ (ದಂಗೆ) ನಡೆಯಲಿದೆ ಎಂದು ಎಚ್ಚರಿಸಿದರು. </p>.<p>19ನೇ ಶತಮಾನದಲ್ಲಿ ಸ್ಥಳೀಯ ಆಡಳಿತಾಧಿಕಾರಿಗಳು ಬುಡಕಟ್ಟು ಜನರ ಮೇಲೆ ನಡೆಸುತ್ತಿದ್ದ ದೌರ್ಜನ್ಯ ಮತ್ತು ತಾರತಮ್ಯ ವಿರೋಧಿಸಿ ಬಿರ್ಸಾ ಮುಂಡಾ ಅವರು ‘ಉಲ್ಗುಲಾನ್’ ಚಳವಳಿ ನಡೆಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>