<p><strong>ನವದೆಹಲಿ</strong>: ಉತ್ತರಕಾಶಿಯ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ವಿಷಯ ಮಂಗಳವಾರ ರಾತ್ರಿ ನಡೆದ ಕೇಂದ್ರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ಭಾವುಕರಾಗಿದ್ದರು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.</p><p>ಸಂಪುಟ ನಿರ್ಣಯಗಳ ಬಗ್ಗೆ ಮಾಧ್ಯಮಗಳಿಗೆ ವಿವರಿಸಿದ ಅವರು, ಈ ಕಾರ್ಯಾಚರಣೆಗೆ ಸಂಪೂರ್ಣ ಸರ್ಕಾರದ ಪ್ರಯತ್ನ ಇತ್ತು. ಪ್ರತಿಯೊಂದು ಜೀವ ರಕ್ಷಣೆಗೆ ಬೇಕಾದ ಎಲ್ಲ ಪ್ರಯತ್ನ ಮಾಡಲಾಯಿತು ಎಂದು ಹೇಳಿದರು.</p><p>ಚುನಾವಣಾ ಪ್ರಚಾರದ ಮಧ್ಯೆಯೂ ಪ್ರಧಾನಿ ಮೋದಿ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ವಿವಿಧ ಮೂಲಗಳಿಂದ ದಿನಕ್ಕೆ ಎರಡು ಬಾರಿ ರಕ್ಷಣಾ ಕಾರ್ಯಾಚರಣೆಯ ಅಪ್ಡೇಟ್ ಪಡೆಯುತ್ತಿದ್ದರು.</p><p> ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಮಂಗಳವಾರ ರಾತ್ರಿ ಯಶಸ್ವಿ ಕಾರ್ಯಾಚರಣೆ ಮೂಲಕ ಹೊರಗೆ ಕರೆತರಲಾಗಿತ್ತು.</p><p>ಕಾರ್ಯಾಚರಣೆ ಬಳಿಕ ಸುಧಾರಿಸಿಕೊಂಡ ಕಾರ್ಮಿಕರ ಜೊತೆ ಪ್ರಧಾನಿ ಮೋದಿ ವರ್ಚುವಲ್ ಸಂವಾದ ಸಹ ನಡೆಸಿದ್ದಾರೆ.</p><p>ನವೆಂಬರ್ 12ರಂದು ಚಾರ್ ಧಾಮ್ ಮಾರ್ಗದ ಸುರಂಗದ ಒಂದು ಭಾಗ ಕುಸಿದಿದ್ದರಿಂದ ಅಂದಿನಿಂದ 41 ಕಾರ್ಮಿಕರು ಸುರಂಗದಲ್ಲಿ ಸಿಲುಕಿದ್ದರು. 6 ಇಂಚಿನ ಪೈಪ್ ಮೂಲಕ ನೀರು, ಆಹಾರ, ಅಗತ್ಯ ವಸ್ತುಗಳನ್ನು ಸರಬರಾಜು ಮಾಡಲಾಗಿತ್ತು. 17 ದಿನಗಳ ಸತತ ಕಾರ್ಯಾಚರಣೆಯಲ್ಲಿ 60 ಮೀಟರ್ ರಂಧ್ರ ಕೊರೆದು ಪೈಪ್ ಅಳವಡಿಸಿ ಕಾರ್ಮಿಕರನ್ನು ಹೊರಲಾಯಿತು.</p> .ಸಿಲ್ಕ್ಯಾರಾ ಸುರಂಗ ಕುಸಿತ: ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉತ್ತರಕಾಶಿಯ ಸುರಂಗದಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ವಿಷಯ ಮಂಗಳವಾರ ರಾತ್ರಿ ನಡೆದ ಕೇಂದ್ರದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ಭಾವುಕರಾಗಿದ್ದರು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.</p><p>ಸಂಪುಟ ನಿರ್ಣಯಗಳ ಬಗ್ಗೆ ಮಾಧ್ಯಮಗಳಿಗೆ ವಿವರಿಸಿದ ಅವರು, ಈ ಕಾರ್ಯಾಚರಣೆಗೆ ಸಂಪೂರ್ಣ ಸರ್ಕಾರದ ಪ್ರಯತ್ನ ಇತ್ತು. ಪ್ರತಿಯೊಂದು ಜೀವ ರಕ್ಷಣೆಗೆ ಬೇಕಾದ ಎಲ್ಲ ಪ್ರಯತ್ನ ಮಾಡಲಾಯಿತು ಎಂದು ಹೇಳಿದರು.</p><p>ಚುನಾವಣಾ ಪ್ರಚಾರದ ಮಧ್ಯೆಯೂ ಪ್ರಧಾನಿ ಮೋದಿ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸೇರಿದಂತೆ ವಿವಿಧ ಮೂಲಗಳಿಂದ ದಿನಕ್ಕೆ ಎರಡು ಬಾರಿ ರಕ್ಷಣಾ ಕಾರ್ಯಾಚರಣೆಯ ಅಪ್ಡೇಟ್ ಪಡೆಯುತ್ತಿದ್ದರು.</p><p> ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಮಂಗಳವಾರ ರಾತ್ರಿ ಯಶಸ್ವಿ ಕಾರ್ಯಾಚರಣೆ ಮೂಲಕ ಹೊರಗೆ ಕರೆತರಲಾಗಿತ್ತು.</p><p>ಕಾರ್ಯಾಚರಣೆ ಬಳಿಕ ಸುಧಾರಿಸಿಕೊಂಡ ಕಾರ್ಮಿಕರ ಜೊತೆ ಪ್ರಧಾನಿ ಮೋದಿ ವರ್ಚುವಲ್ ಸಂವಾದ ಸಹ ನಡೆಸಿದ್ದಾರೆ.</p><p>ನವೆಂಬರ್ 12ರಂದು ಚಾರ್ ಧಾಮ್ ಮಾರ್ಗದ ಸುರಂಗದ ಒಂದು ಭಾಗ ಕುಸಿದಿದ್ದರಿಂದ ಅಂದಿನಿಂದ 41 ಕಾರ್ಮಿಕರು ಸುರಂಗದಲ್ಲಿ ಸಿಲುಕಿದ್ದರು. 6 ಇಂಚಿನ ಪೈಪ್ ಮೂಲಕ ನೀರು, ಆಹಾರ, ಅಗತ್ಯ ವಸ್ತುಗಳನ್ನು ಸರಬರಾಜು ಮಾಡಲಾಗಿತ್ತು. 17 ದಿನಗಳ ಸತತ ಕಾರ್ಯಾಚರಣೆಯಲ್ಲಿ 60 ಮೀಟರ್ ರಂಧ್ರ ಕೊರೆದು ಪೈಪ್ ಅಳವಡಿಸಿ ಕಾರ್ಮಿಕರನ್ನು ಹೊರಲಾಯಿತು.</p> .ಸಿಲ್ಕ್ಯಾರಾ ಸುರಂಗ ಕುಸಿತ: ಎಲ್ಲಾ 41 ಕಾರ್ಮಿಕರ ರಕ್ಷಣೆ ಯಶಸ್ವಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>