ಅಗ್ನಿವೀರರ ತಂಡವೊಂದು ಭಾರತೀಯ ಫೀಲ್ಡ್ ಗನ್ ಅನ್ನು ಶೆಲ್ಗಳಿಂದ ಸಿಡಿಸುತ್ತಿದ್ದಾಗ ಅವುಗಳಲ್ಲಿ ಒಂದು ಸ್ಫೋಟಗೊಂಡಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನೂ ದೇವಲಾಲಿಯ ಎಂ.ಎಚ್. ಆಸ್ಪತ್ರೆಗೆ ಸೇರಿಸಲಾಯಿತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಹವಿಲ್ದಾರ್ ಅಜಿತ್ ಕುಮಾರ್ ಅವರ ದೂರಿನ ಮೇರೆಗೆ, ದೇವಲಾಲಿ ಕ್ಯಾಂಪ್ ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ.