<p><strong>ಮುಂಬೈ</strong>: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಏರ್ ಇಂಡಿಯಾ ವಿಮಾನವು ನಿರ್ಗಮನದ ಹಂತದಲ್ಲಿ ಇರುವಾಗಲೇ, ಇಂಡಿಗೊ ವಿಮಾನವು ಅದೇ ರನ್ವೇನಲ್ಲಿ ಇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ತನಿಖೆ ಆರಂಭಿಸಿದೆ.</p>.<p>ಒಂದು ನಿಮಿಷದ ಅಂತರದಲ್ಲಿ ಈ ವಿಮಾನಗಳಿಗೆ ಹಾರಾಟ ಮತ್ತು ಇಳಿಯಲು ಅನುಮತಿ ನೀಡಲಾಗಿದೆ. ಕೂದಲೆಳೆಯ ಅಂತರದಲ್ಲಿ ಭಾರಿ ದುರಂತ ಸಂಭವಿಸುವುದು ತಪ್ಪಿದ್ದು, ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>‘ಆ ದಿನ ಕಾರ್ಯ ನಿರ್ವಹಿಸಿದ್ದ ವಿಮಾನ ನಿಲ್ದಾಣದ ವಾಯು ಸಂಚಾರ ನಿಯಂತ್ರಣ (ಎಟಿಸಿ) ಘಟಕದ ಅಧಿಕಾರಿಯನ್ನು ಕರ್ತವ್ಯದ ಪಾಳಿಯಿಂದ ಬಿಡುಗಡೆಗೊಳಿಸಲಾಗಿದೆ’ ಎಂದು ಡಿಜಿಸಿಎ ತಿಳಿಸಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೊ ಕಂಪನಿ ಕೂಡ ತನಿಖೆಗೆ ಮುಂದಾಗಿದೆ. ಏರ್ ಇಂಡಿಯಾಗೆ ಸೇರಿದ ವಿಮಾನವು ತಿರುವನಂತಪುರಕ್ಕೆ ತೆರಳುತ್ತಿತ್ತು.</p>.<p>ಈ ವಿಮಾನ ನಿಲ್ದಾಣದಲ್ಲಿ ಎರಡು ಕ್ರಾಸಿಂಗ್ ರನ್ವೇಗಳು ಹಾಗೂ ಒಂದು ಕಾರ್ಯಾಚರಣೆ ರನ್ವೇ ಇದೆ. ಈ ರನ್ವೇನಲ್ಲಿ ಪ್ರತಿ ಒಂದು ಗಂಟೆಗೆ 46 ವಿಮಾನಗಳ ಆಗಮನ ಮತ್ತು ನಿರ್ಗಮಿಸುತ್ತವೆ. </p>.<p>ಇಂದೋರ್ನಿಂದ ಆಗಮಿಸುತ್ತಿದ್ದ ವಿಮಾನವು ಎಟಿಸಿ ಅಧಿಕಾರಿಯ ಸೂಚನೆಯ ಅನ್ವಯವೇ ಇಳಿದಿದೆ. ನಮಗೆ ಪ್ರಯಾಣಿಕರ ಸುರಕ್ಷತೆ ಮುಖ್ಯವಾಗಿದೆ. ಹಾಗಾಗಿ, ಡಿಜಿಸಿಎಗೆ ವರದಿ ಸಲ್ಲಿಸಿದ್ದೇವೆ ಎಂದು ಇಂಡಿಗೊ ಕಂಪನಿ ತಿಳಿಸಿದೆ. </p>.<p>ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ನಿಯಮಾವಳಿ ಅನ್ವಯ, ಹಾರಾಟಕ್ಕೆ ಅನುಮತಿ ಪಡೆದ ವಿಮಾನವು ರನ್ವೇ ಹಂತವನ್ನು ಪೂರ್ಣಗೊಳಿಸಿದ ನಂತರವಷ್ಟೇ ಮತ್ತೊಂದು ವಿಮಾನವು ಆ ರನ್ವೇನಲ್ಲಿ ಇಳಿಯಲು ಅನುಮತಿ ನೀಡುವುದು ಎಟಿಸಿ ಅಧಿಕಾರಿಯ ಕರ್ತವ್ಯವಾಗಿದೆ.</p>.<p>ಆದರೆ, ಈ ಪ್ರಕರಣದಲ್ಲಿ ನಿಯಮಾವಳಿಗಳನ್ನು ಪಾಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಏರ್ ಇಂಡಿಯಾ ವಿಮಾನವು ನಿರ್ಗಮನದ ಹಂತದಲ್ಲಿ ಇರುವಾಗಲೇ, ಇಂಡಿಗೊ ವಿಮಾನವು ಅದೇ ರನ್ವೇನಲ್ಲಿ ಇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ತನಿಖೆ ಆರಂಭಿಸಿದೆ.</p>.<p>ಒಂದು ನಿಮಿಷದ ಅಂತರದಲ್ಲಿ ಈ ವಿಮಾನಗಳಿಗೆ ಹಾರಾಟ ಮತ್ತು ಇಳಿಯಲು ಅನುಮತಿ ನೀಡಲಾಗಿದೆ. ಕೂದಲೆಳೆಯ ಅಂತರದಲ್ಲಿ ಭಾರಿ ದುರಂತ ಸಂಭವಿಸುವುದು ತಪ್ಪಿದ್ದು, ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>‘ಆ ದಿನ ಕಾರ್ಯ ನಿರ್ವಹಿಸಿದ್ದ ವಿಮಾನ ನಿಲ್ದಾಣದ ವಾಯು ಸಂಚಾರ ನಿಯಂತ್ರಣ (ಎಟಿಸಿ) ಘಟಕದ ಅಧಿಕಾರಿಯನ್ನು ಕರ್ತವ್ಯದ ಪಾಳಿಯಿಂದ ಬಿಡುಗಡೆಗೊಳಿಸಲಾಗಿದೆ’ ಎಂದು ಡಿಜಿಸಿಎ ತಿಳಿಸಿದೆ.</p>.<p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೊ ಕಂಪನಿ ಕೂಡ ತನಿಖೆಗೆ ಮುಂದಾಗಿದೆ. ಏರ್ ಇಂಡಿಯಾಗೆ ಸೇರಿದ ವಿಮಾನವು ತಿರುವನಂತಪುರಕ್ಕೆ ತೆರಳುತ್ತಿತ್ತು.</p>.<p>ಈ ವಿಮಾನ ನಿಲ್ದಾಣದಲ್ಲಿ ಎರಡು ಕ್ರಾಸಿಂಗ್ ರನ್ವೇಗಳು ಹಾಗೂ ಒಂದು ಕಾರ್ಯಾಚರಣೆ ರನ್ವೇ ಇದೆ. ಈ ರನ್ವೇನಲ್ಲಿ ಪ್ರತಿ ಒಂದು ಗಂಟೆಗೆ 46 ವಿಮಾನಗಳ ಆಗಮನ ಮತ್ತು ನಿರ್ಗಮಿಸುತ್ತವೆ. </p>.<p>ಇಂದೋರ್ನಿಂದ ಆಗಮಿಸುತ್ತಿದ್ದ ವಿಮಾನವು ಎಟಿಸಿ ಅಧಿಕಾರಿಯ ಸೂಚನೆಯ ಅನ್ವಯವೇ ಇಳಿದಿದೆ. ನಮಗೆ ಪ್ರಯಾಣಿಕರ ಸುರಕ್ಷತೆ ಮುಖ್ಯವಾಗಿದೆ. ಹಾಗಾಗಿ, ಡಿಜಿಸಿಎಗೆ ವರದಿ ಸಲ್ಲಿಸಿದ್ದೇವೆ ಎಂದು ಇಂಡಿಗೊ ಕಂಪನಿ ತಿಳಿಸಿದೆ. </p>.<p>ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ನಿಯಮಾವಳಿ ಅನ್ವಯ, ಹಾರಾಟಕ್ಕೆ ಅನುಮತಿ ಪಡೆದ ವಿಮಾನವು ರನ್ವೇ ಹಂತವನ್ನು ಪೂರ್ಣಗೊಳಿಸಿದ ನಂತರವಷ್ಟೇ ಮತ್ತೊಂದು ವಿಮಾನವು ಆ ರನ್ವೇನಲ್ಲಿ ಇಳಿಯಲು ಅನುಮತಿ ನೀಡುವುದು ಎಟಿಸಿ ಅಧಿಕಾರಿಯ ಕರ್ತವ್ಯವಾಗಿದೆ.</p>.<p>ಆದರೆ, ಈ ಪ್ರಕರಣದಲ್ಲಿ ನಿಯಮಾವಳಿಗಳನ್ನು ಪಾಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>