<p><strong>ನವದೆಹಲಿ</strong>: ದೇಶದಾದ್ಯಂತ ದ್ವೇಷ ಭಾಷಣಗಳ ಕುರಿತು ಕ್ರಮ ಕೈಗೊಳ್ಳುವುದಕ್ಕಾಗಿ ಆಡಳಿತಾತ್ಮಕ ಕಾರ್ಯವಿಧಾನ ಸ್ಥಾಪಿಸುವ ಆಲೋಚನೆ ಇದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ದ್ವೇಷ ಭಾಷಣಕ್ಕೆ ಸಂಬಂಧಿಸಿ ಒಂದೊಂದೇ ಪ್ರಕರಣ ಕುರಿತು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ, ಈ ಸಂಬಂಧ ಒಂದು ಆಡಳಿತಾತ್ಮಕ ಕಾರ್ಯವಿಧಾನ ರೂಪಿಸುವ ಚಿಂತನೆ ಇದೆ ಎಂದು ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್ವಿಎನ್ ಭಟ್ಟಿ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ವೇಳೆ ಈ ಮಾತು ಹೇಳಿದೆ.</p>.<p>‘ಯಾವುದು ದ್ವೇಷ ಭಾಷಣ ಎಂಬುದನ್ನು ಈಗಾಗಲೇ ನ್ಯಾಯಾಲಯ ವ್ಯಾಖ್ಯಾನಿಸಿದೆ. ಈಗ, ಅದರ ಅನುಷ್ಟಾನ ಮತ್ತು ಹೇಗೆ ಅನ್ವಯಿಸಬೇಕು ಎಂಬುದನ್ನು ಅರಿಯುವುದೇ ನಮ್ಮ ಮುಂದಿರುವ ಪ್ರಶ್ನೆ’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಒಂದರ ನಂತರ ಒಂದು ಪ್ರಕರಣಗಳ ವಿಚಾರಣೆ ಸಾಧ್ಯವಿಲ್ಲ. ಈ ರೀತಿ ಮಾಡಿದಲ್ಲಿ ಪ್ರಕರಣಗಳ ರಾಶಿಯೇ ನಮ್ಮ ಮುಂದೆ ಬೀಳುತ್ತದೆ. ಹೀಗಾಗಿ, ಈ ವಿಷಯಕ್ಕೆ ಸಂಬಂಧಿಸಿ ಸೂಕ್ತ ಮೂಲಸೌಕರ್ಯ ಇಲ್ಲವೇ ಆಡಳಿತಾತ್ಮಕ ಕಾರ್ಯವಿಧಾನ ಜಾರಿಯಾಗಬೇಕು ಎಂಬುದು ನಮ್ಮ ಬಯಕೆ. ಇಂತಹ ಕಾರ್ಯವಿಧಾನದಲ್ಲಿಯೂ ನ್ಯೂನತೆ ಕಂಡುಬಂದಲ್ಲಿ ಸಂಬಂಧಿಸಿದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು’ ಎಂದು ನ್ಯಾಯಪೀಠ ಹೇಳಿತು.</p>.<p>ಅಲ್ಲದೇ, ಈ ವಿಷಯವಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡದಿರುವುದಕ್ಕಾಗಿ ತಮಿಳುನಾಡು, ಕೇರಳ, ನಾಗಾಲ್ಯಾಂಡ್ ಹಾಗೂ ಗುಜರಾತ್ ಸರ್ಕಾರಗಳಿಗೆ ನ್ಯಾಯಪೀಠ ನೋಟಿಸ್ ಜಾರಿ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಾದ್ಯಂತ ದ್ವೇಷ ಭಾಷಣಗಳ ಕುರಿತು ಕ್ರಮ ಕೈಗೊಳ್ಳುವುದಕ್ಕಾಗಿ ಆಡಳಿತಾತ್ಮಕ ಕಾರ್ಯವಿಧಾನ ಸ್ಥಾಪಿಸುವ ಆಲೋಚನೆ ಇದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>ದ್ವೇಷ ಭಾಷಣಕ್ಕೆ ಸಂಬಂಧಿಸಿ ಒಂದೊಂದೇ ಪ್ರಕರಣ ಕುರಿತು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ, ಈ ಸಂಬಂಧ ಒಂದು ಆಡಳಿತಾತ್ಮಕ ಕಾರ್ಯವಿಧಾನ ರೂಪಿಸುವ ಚಿಂತನೆ ಇದೆ ಎಂದು ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್ವಿಎನ್ ಭಟ್ಟಿ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ವೇಳೆ ಈ ಮಾತು ಹೇಳಿದೆ.</p>.<p>‘ಯಾವುದು ದ್ವೇಷ ಭಾಷಣ ಎಂಬುದನ್ನು ಈಗಾಗಲೇ ನ್ಯಾಯಾಲಯ ವ್ಯಾಖ್ಯಾನಿಸಿದೆ. ಈಗ, ಅದರ ಅನುಷ್ಟಾನ ಮತ್ತು ಹೇಗೆ ಅನ್ವಯಿಸಬೇಕು ಎಂಬುದನ್ನು ಅರಿಯುವುದೇ ನಮ್ಮ ಮುಂದಿರುವ ಪ್ರಶ್ನೆ’ ಎಂದು ನ್ಯಾಯಪೀಠ ಹೇಳಿದೆ.</p>.<p>‘ಒಂದರ ನಂತರ ಒಂದು ಪ್ರಕರಣಗಳ ವಿಚಾರಣೆ ಸಾಧ್ಯವಿಲ್ಲ. ಈ ರೀತಿ ಮಾಡಿದಲ್ಲಿ ಪ್ರಕರಣಗಳ ರಾಶಿಯೇ ನಮ್ಮ ಮುಂದೆ ಬೀಳುತ್ತದೆ. ಹೀಗಾಗಿ, ಈ ವಿಷಯಕ್ಕೆ ಸಂಬಂಧಿಸಿ ಸೂಕ್ತ ಮೂಲಸೌಕರ್ಯ ಇಲ್ಲವೇ ಆಡಳಿತಾತ್ಮಕ ಕಾರ್ಯವಿಧಾನ ಜಾರಿಯಾಗಬೇಕು ಎಂಬುದು ನಮ್ಮ ಬಯಕೆ. ಇಂತಹ ಕಾರ್ಯವಿಧಾನದಲ್ಲಿಯೂ ನ್ಯೂನತೆ ಕಂಡುಬಂದಲ್ಲಿ ಸಂಬಂಧಿಸಿದ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು’ ಎಂದು ನ್ಯಾಯಪೀಠ ಹೇಳಿತು.</p>.<p>ಅಲ್ಲದೇ, ಈ ವಿಷಯವಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡದಿರುವುದಕ್ಕಾಗಿ ತಮಿಳುನಾಡು, ಕೇರಳ, ನಾಗಾಲ್ಯಾಂಡ್ ಹಾಗೂ ಗುಜರಾತ್ ಸರ್ಕಾರಗಳಿಗೆ ನ್ಯಾಯಪೀಠ ನೋಟಿಸ್ ಜಾರಿ ಮಾಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>