ಪಿಟಿಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, ‘ನಾವು ನಮ್ಮ ಪ್ರಯತ್ನ ಮಾಡಿದ್ದೇವೆ. ಉತ್ತಮ ಕೆಲಸವನ್ನೂ ಮಾಡಿದ್ದೇವೆ. ನಮ್ಮ ಸರ್ಕಾರ ಹಾಗೂ ಪಕ್ಷದ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ. ಪ್ರಜಾಪ್ರಭುತ್ವದಲ್ಲಿ ನೀವು ಒಂದೋ ಸೋಲಬೇಕು ಅಥವಾ ಗೆಲ್ಲಬೇಕು’ ಎಂದು ಹೇಳಿದ್ದಾರೆ.
ಸುದೀರ್ಘ ಅವಧಿಯ ಬಳಿಕ ನಾವು ಸೋಲನುಭವಿಸಿದ್ದೇವೆ. ಜನರ ತೀರ್ಪನ್ನು ನಾವು ಯಾವತ್ತೂ ಮನಃಪೂರ್ವಕವಾಗಿ ಸ್ವೀಕರಿಸಲೇಬೇಕು. ಒಡಿಶಾದ 4.5 ಕೋಟಿ ಜನರೆಲ್ಲರೂ ನನ್ನ ಕುಟುಂಬ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಸಾಧ್ಯವಿರುವ ಎಲ್ಲಾ ರೀತಿಯಲ್ಲಿ ಅವರ ಸೇವೆ ಮಾಡುವುದನ್ನು ನಾನು ಮುಂದುವರಿಸುತ್ತೇನೆ’ ಎಂದು ನುಡಿದಿದ್ದಾರೆ.