<p><strong>ಕೋಲ್ಕತ್ತ(ಪಶ್ಚಿಮ ಬಂಗಾಳ):</strong> ಇಲ್ಲಿನ ಆರ್.ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರಣಾಂತ ಉಪವಾಸ ನಡೆಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಸೋಮವಾರ) ಸಂಜೆ ಭೇಟಿ ಮಾಡಲಿದ್ದಾರೆ.</p>.<p>ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಕ್ಟೋಬರ್ 22 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಿರಿಯ ವೈದ್ಯರು ಶನಿವಾರ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ರಾಜ್ಯ ಸಚಿವಾಲಯ ನಬನ್ನಾದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.</p>.<p>ಮೃತ ವೈದ್ಯ ವಿದ್ಯಾರ್ಥಿನಿಗೆ ನ್ಯಾಯಾಕ್ಕಾಗಿ ಹಾಗೂ ಕೆಲಸದ ಸ್ಥಳದಲ್ಲಿ ಭದ್ರತೆಗಾಗಿ ಆಗ್ರಹಿಸಿ ಕಿರಿಯ ವೈದ್ಯರು ಅಕ್ಟೋಬರ್ 5ರಿಂದ ಅಮರಣಾಂತ ಉಪವಾಸ ನಡೆಸುತ್ತಿದ್ದು, ಸೋಮವಾರ 17ನೇ ದಿನಕ್ಕೆ ಕಾಲಿರಿಸಿದೆ.</p>.<p>ಧರಣಿ ನಿರತ 6 ಮಂದಿ ವೈದ್ಯರ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದಂತೆ 8 ಮಂದಿ ವೈದ್ಯರು ಅನಿರ್ದಿಷ್ಟಾವಧಿ ಉಪವಾಸ ಮುಂದುವರೆಸಿದ್ದಾರೆ.</p>.RG Kar | ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ: ವೈದ್ಯರ ಎಚ್ಚರಿಕೆ.<p><strong>ಪ್ರತಿಭಟನಾ ನಿರತರ ಬೇಡಿಕೆಗಳೇನು?</strong></p>.<p>ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆಯನ್ನು ಸ್ಥಾಪಿಸುವುದು, ಕೆಲಸದ ಸ್ಥಳಗಳಲ್ಲಿ ಸಿಸಿಟಿವಿ, ಆನ್-ಕಾಲ್ ಕೊಠಡಿಗಳು ಮತ್ತು ಶೌಚಾಲಯಗಳು ಸೇರಿ ಅಗತ್ಯ ಸೌಲಭ್ಯಗಳನ್ನು ಖಚಿತಪಡಿಸಲು ಕಾರ್ಯಪಡೆಗಳನ್ನು ರಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.</p><p>ಅಲ್ಲದೇ ಆಸ್ಪತ್ರೆಗಳಲ್ಲಿ ಹೆಚ್ಚಿನ ಪೊಲೀಸ್ ರಕ್ಷಣೆ, ವೈದ್ಯರು, ನರ್ಸ್ಗಳು ಮತ್ತು ಇತರ ಆರೋಗ್ಯ ಕಾರ್ಯಕರ್ತರ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆಯೂ ಅವರು ಆಗ್ರಹಿಸುತ್ತಿದ್ದಾರೆ.</p> .RG Kar: ಮುಷ್ಕರ ಕೈಬಿಡುವಂತೆ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ(ಪಶ್ಚಿಮ ಬಂಗಾಳ):</strong> ಇಲ್ಲಿನ ಆರ್.ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರಣಾಂತ ಉಪವಾಸ ನಡೆಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಸೋಮವಾರ) ಸಂಜೆ ಭೇಟಿ ಮಾಡಲಿದ್ದಾರೆ.</p>.<p>ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಅಕ್ಟೋಬರ್ 22 ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಿರಿಯ ವೈದ್ಯರು ಶನಿವಾರ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ರಾಜ್ಯ ಸಚಿವಾಲಯ ನಬನ್ನಾದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.</p>.<p>ಮೃತ ವೈದ್ಯ ವಿದ್ಯಾರ್ಥಿನಿಗೆ ನ್ಯಾಯಾಕ್ಕಾಗಿ ಹಾಗೂ ಕೆಲಸದ ಸ್ಥಳದಲ್ಲಿ ಭದ್ರತೆಗಾಗಿ ಆಗ್ರಹಿಸಿ ಕಿರಿಯ ವೈದ್ಯರು ಅಕ್ಟೋಬರ್ 5ರಿಂದ ಅಮರಣಾಂತ ಉಪವಾಸ ನಡೆಸುತ್ತಿದ್ದು, ಸೋಮವಾರ 17ನೇ ದಿನಕ್ಕೆ ಕಾಲಿರಿಸಿದೆ.</p>.<p>ಧರಣಿ ನಿರತ 6 ಮಂದಿ ವೈದ್ಯರ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳಿದಂತೆ 8 ಮಂದಿ ವೈದ್ಯರು ಅನಿರ್ದಿಷ್ಟಾವಧಿ ಉಪವಾಸ ಮುಂದುವರೆಸಿದ್ದಾರೆ.</p>.RG Kar | ಬೇಡಿಕೆ ಈಡೇರಿಸದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ: ವೈದ್ಯರ ಎಚ್ಚರಿಕೆ.<p><strong>ಪ್ರತಿಭಟನಾ ನಿರತರ ಬೇಡಿಕೆಗಳೇನು?</strong></p>.<p>ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆಯನ್ನು ಸ್ಥಾಪಿಸುವುದು, ಕೆಲಸದ ಸ್ಥಳಗಳಲ್ಲಿ ಸಿಸಿಟಿವಿ, ಆನ್-ಕಾಲ್ ಕೊಠಡಿಗಳು ಮತ್ತು ಶೌಚಾಲಯಗಳು ಸೇರಿ ಅಗತ್ಯ ಸೌಲಭ್ಯಗಳನ್ನು ಖಚಿತಪಡಿಸಲು ಕಾರ್ಯಪಡೆಗಳನ್ನು ರಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.</p><p>ಅಲ್ಲದೇ ಆಸ್ಪತ್ರೆಗಳಲ್ಲಿ ಹೆಚ್ಚಿನ ಪೊಲೀಸ್ ರಕ್ಷಣೆ, ವೈದ್ಯರು, ನರ್ಸ್ಗಳು ಮತ್ತು ಇತರ ಆರೋಗ್ಯ ಕಾರ್ಯಕರ್ತರ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆಯೂ ಅವರು ಆಗ್ರಹಿಸುತ್ತಿದ್ದಾರೆ.</p> .RG Kar: ಮುಷ್ಕರ ಕೈಬಿಡುವಂತೆ ಕಿರಿಯ ವೈದ್ಯರಿಗೆ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>