<p><strong>ಕೋಲ್ಕತ್ತ</strong>: ‘ನಾನು ಬದುಕಿರುವವರೆಗೂ ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.</p><p>‘ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ ಸಿಎಎ ಜಾರಿ ಮಾಡಲಾಗುತ್ತದೆ’ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿಕೆ ನೀಡಿದ ಬೆನ್ನಲ್ಲೇ ಮಮತಾ ಈ ಹೇಳಿಕೆ ನೀಡಿದ್ದಾರೆ.</p><p>ಉತ್ತರ ದಿನಾಜಪುರ ಜಿಲ್ಲೆಯ ರಾಯಗಂಜ್ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ‘ಲೋಕಸಭಾ ಚುನಾವಣೆಯಲ್ಲಿ ಮತ ಗಳಿಸುವ ಉದ್ದೇಶದಿಂದ ಸಿಎಎ ವಿಚಾರವನ್ನು ಬಿಜೆಪಿ ನಾಯಕರು ಮತ್ತೆ ಪ್ರಸ್ತಾಪಿಸಿದ್ದಾರೆ’ ಎಂದು ಆರೋಪಿಸಿದರು.</p><p>‘ಚುನಾವಣೆ ಸಮೀಪಿಸಿದರೆ ಸಾಕು ಸಿಎಎ ವಿಚಾರವನ್ನು ಎತ್ತಿ ರಾಜಕೀಯ ಲಾಭ ಗಳಿಸಿಕೊಳ್ಳಲು ಬಿಜೆಪಿ ಹಾತೊರೆಯುತ್ತದೆ. ಎಲ್ಲಿಯವರೆಗೂ ನಾನು ಜೀವಂತವಾಗಿರುತ್ತೇನೋ ಅಲ್ಲಿಯವರೆಗೆ ರಾಜ್ಯದಲ್ಲಿ ಸಿಎಎ ಜಾರಿ ಮಾಡಲು ಬಿಡುವುದಿಲ್ಲ’ ಎಂದರು.</p><p><strong>ಮಮತಾ ಪಾದಯಾತ್ರೆ</strong> </p><p>ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಮಮತಾ ಅವರು ರಾಜ್ಯದ ಉತ್ತರ ಭಾಗದಲ್ಲಿ ಮಂಗಳವಾರ ಪಾದಯಾತ್ರೆ ನಡೆಸಿದರು.</p><p>ಉತ್ತರ ದಿನಾಜಪುರ ಜಿಲ್ಲೆಯ ಚೋಪ್ಡಾ ಪಟ್ಟಣದಲ್ಲಿ ‘ಜನಸಂಯೋಗ ಯಾತ್ರೆ’ ಕೈಗೊಂಡ ಅವರು ಆ ಬಳಿಕ ಸಮೀಪದ ಇಸ್ಲಾಂಪುರದಲ್ಲಿ ಮತ್ತೊಂದು ಪಾದಯಾತ್ರೆ ನಡೆಸಿದರು.</p><p>ಚೋಪ್ಡಾ ಪಟ್ಟಣದಲ್ಲಿ ಪಾದಯಾತ್ರೆಯ ವೇಳೆ ಮಹಿಳೆಯರು ಮತ್ತು ಮಕ್ಕಳು ಒಳಗೊಂಡಂತೆ ನೂರಾರು ಬೆಂಬಲಿಗರು ‘ದೀದಿ.. ದೀದಿ...’ ಎಂದು ಘೋಷಣೆ ಕೂಗಿ ಮಮತಾ ಅವರನ್ನು ಸ್ವಾಗತಿಸಿದರು. ಟಿಎಂಸಿಯ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.</p><p>ಕಳೆದ ಲೋಕಸಭಾ ಚುನಾವಣೆಯಲ್ಲಿ ಬಂಗಾಳದ ಉತ್ತರ ಭಾಗದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಏಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಆ ಕ್ಷೇತ್ರಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಟಿಎಂಸಿ ರಣತಂತ್ರ ರೂಪಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ನಾನು ಬದುಕಿರುವವರೆಗೂ ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.</p><p>‘ಮುಂದಿನ ಏಳು ದಿನಗಳಲ್ಲಿ ದೇಶದಾದ್ಯಂತ ಸಿಎಎ ಜಾರಿ ಮಾಡಲಾಗುತ್ತದೆ’ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿಕೆ ನೀಡಿದ ಬೆನ್ನಲ್ಲೇ ಮಮತಾ ಈ ಹೇಳಿಕೆ ನೀಡಿದ್ದಾರೆ.</p><p>ಉತ್ತರ ದಿನಾಜಪುರ ಜಿಲ್ಲೆಯ ರಾಯಗಂಜ್ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ‘ಲೋಕಸಭಾ ಚುನಾವಣೆಯಲ್ಲಿ ಮತ ಗಳಿಸುವ ಉದ್ದೇಶದಿಂದ ಸಿಎಎ ವಿಚಾರವನ್ನು ಬಿಜೆಪಿ ನಾಯಕರು ಮತ್ತೆ ಪ್ರಸ್ತಾಪಿಸಿದ್ದಾರೆ’ ಎಂದು ಆರೋಪಿಸಿದರು.</p><p>‘ಚುನಾವಣೆ ಸಮೀಪಿಸಿದರೆ ಸಾಕು ಸಿಎಎ ವಿಚಾರವನ್ನು ಎತ್ತಿ ರಾಜಕೀಯ ಲಾಭ ಗಳಿಸಿಕೊಳ್ಳಲು ಬಿಜೆಪಿ ಹಾತೊರೆಯುತ್ತದೆ. ಎಲ್ಲಿಯವರೆಗೂ ನಾನು ಜೀವಂತವಾಗಿರುತ್ತೇನೋ ಅಲ್ಲಿಯವರೆಗೆ ರಾಜ್ಯದಲ್ಲಿ ಸಿಎಎ ಜಾರಿ ಮಾಡಲು ಬಿಡುವುದಿಲ್ಲ’ ಎಂದರು.</p><p><strong>ಮಮತಾ ಪಾದಯಾತ್ರೆ</strong> </p><p>ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಮಮತಾ ಅವರು ರಾಜ್ಯದ ಉತ್ತರ ಭಾಗದಲ್ಲಿ ಮಂಗಳವಾರ ಪಾದಯಾತ್ರೆ ನಡೆಸಿದರು.</p><p>ಉತ್ತರ ದಿನಾಜಪುರ ಜಿಲ್ಲೆಯ ಚೋಪ್ಡಾ ಪಟ್ಟಣದಲ್ಲಿ ‘ಜನಸಂಯೋಗ ಯಾತ್ರೆ’ ಕೈಗೊಂಡ ಅವರು ಆ ಬಳಿಕ ಸಮೀಪದ ಇಸ್ಲಾಂಪುರದಲ್ಲಿ ಮತ್ತೊಂದು ಪಾದಯಾತ್ರೆ ನಡೆಸಿದರು.</p><p>ಚೋಪ್ಡಾ ಪಟ್ಟಣದಲ್ಲಿ ಪಾದಯಾತ್ರೆಯ ವೇಳೆ ಮಹಿಳೆಯರು ಮತ್ತು ಮಕ್ಕಳು ಒಳಗೊಂಡಂತೆ ನೂರಾರು ಬೆಂಬಲಿಗರು ‘ದೀದಿ.. ದೀದಿ...’ ಎಂದು ಘೋಷಣೆ ಕೂಗಿ ಮಮತಾ ಅವರನ್ನು ಸ್ವಾಗತಿಸಿದರು. ಟಿಎಂಸಿಯ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.</p><p>ಕಳೆದ ಲೋಕಸಭಾ ಚುನಾವಣೆಯಲ್ಲಿ ಬಂಗಾಳದ ಉತ್ತರ ಭಾಗದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಏಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಆ ಕ್ಷೇತ್ರಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಟಿಎಂಸಿ ರಣತಂತ್ರ ರೂಪಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>