<p><strong>ಬೆಂಗಳೂರು:</strong> ‘ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಶೇ 40ರಷ್ಟು ಕಮಿಷನ್ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಸಮಿತಿಗೆ ದಾಖಲೆ ಸಲ್ಲಿಸಲಾಗಿದೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ತಿಳಿಸಿದರು.</p><p>‘ಏನೇನು ದಾಖಲೆ ಇವೆಯೋ ಅವೆಲ್ಲವನ್ನೂ ಕೊಟ್ಟಿದ್ದೇನೆ. ಇನ್ನೂ ಕೆಲವು ದಾಖಲೆಗಳಿವೆ. ಅವುಗಳನ್ನೂ ಮುಂದಿನ ದಿನಗಳಲ್ಲಿ ಸಮಿತಿಗೆ ಸಲ್ಲಿಸಲಾಗುತ್ತದೆ’ ಎಂದು ಸುದ್ದಿಗಾರರಿಗೆ ಗುರುವಾರ ಮಾಹಿತಿ ನೀಡಿದರು.</p><p>‘ಎಲ್ಲ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆದಿದೆ. ಈಗಿನ ಸರ್ಕಾರದಲ್ಲಿ ಅಧಿಕಾರಿಗಳ ರಾಜ್ಯಭಾರವಿದೆ. ಹಿಂದಿನ ಸರ್ಕಾರದಲ್ಲಿ ರಾಜಕಾರಣಿಗಳ ರಾಜ್ಯಭಾರವಿತ್ತು. ಈ ಸರ್ಕಾರದಲ್ಲಿ ಈವರೆಗೆ ರಾಜಕಾರಣಿ ವೈಯಕ್ತಿಕವಾಗಿ ಭ್ರಷ್ಟಾಚಾರದಲ್ಲಿ ತೊಡಗಿಲ್ಲ’ ಎಂದು ಹೇಳಿದರು.</p><p>‘ಅಧಿಕಾರಿಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವಂತೆ ಮುಖ್ಯಮಂತ್ರಿಯವರಿಗೂ ಪತ್ರ ಬರೆದಿದ್ದೆ. ಅಧಿಕಾರಿಗಳದ್ದೇ ರಾಜ್ಯಭಾರವಾಗಿದೆ’ ಎಂದು ದೂರಿದರು. ಜಲಸಂಪನ್ಮೂಲ, ಲೋಕೋಪಯೋಗಿ, ಆರೋಗ್ಯ ಇಲಾಖೆ, ಬಿಬಿಎಂಪಿ ಸೇರಿ ಹಲವು ಇಲಾಖೆಗಳಲ್ಲಿನ ಭ್ರಷ್ಟಾಚಾರದ ದಾಖಲೆಗಳನ್ನು ಸಲ್ಲಿಸಲಾಗಿದೆ. ಆಡಿಯೊ, ವಿಡಿಯೊ ಜೊತೆಗೆ 6 ಸಾವಿರ ಪುಟಗಳ ದಾಖಲೆ ಸಮಿತಿಗೆ ನೀಡಲಾಗಿದೆ ಎನ್ನಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹಿಂದಿನ ಬಿಜೆಪಿ ಸರ್ಕಾರದಲ್ಲಿನ ಶೇ 40ರಷ್ಟು ಕಮಿಷನ್ ಹಾಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಸಮಿತಿಗೆ ದಾಖಲೆ ಸಲ್ಲಿಸಲಾಗಿದೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ತಿಳಿಸಿದರು.</p><p>‘ಏನೇನು ದಾಖಲೆ ಇವೆಯೋ ಅವೆಲ್ಲವನ್ನೂ ಕೊಟ್ಟಿದ್ದೇನೆ. ಇನ್ನೂ ಕೆಲವು ದಾಖಲೆಗಳಿವೆ. ಅವುಗಳನ್ನೂ ಮುಂದಿನ ದಿನಗಳಲ್ಲಿ ಸಮಿತಿಗೆ ಸಲ್ಲಿಸಲಾಗುತ್ತದೆ’ ಎಂದು ಸುದ್ದಿಗಾರರಿಗೆ ಗುರುವಾರ ಮಾಹಿತಿ ನೀಡಿದರು.</p><p>‘ಎಲ್ಲ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆದಿದೆ. ಈಗಿನ ಸರ್ಕಾರದಲ್ಲಿ ಅಧಿಕಾರಿಗಳ ರಾಜ್ಯಭಾರವಿದೆ. ಹಿಂದಿನ ಸರ್ಕಾರದಲ್ಲಿ ರಾಜಕಾರಣಿಗಳ ರಾಜ್ಯಭಾರವಿತ್ತು. ಈ ಸರ್ಕಾರದಲ್ಲಿ ಈವರೆಗೆ ರಾಜಕಾರಣಿ ವೈಯಕ್ತಿಕವಾಗಿ ಭ್ರಷ್ಟಾಚಾರದಲ್ಲಿ ತೊಡಗಿಲ್ಲ’ ಎಂದು ಹೇಳಿದರು.</p><p>‘ಅಧಿಕಾರಿಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವಂತೆ ಮುಖ್ಯಮಂತ್ರಿಯವರಿಗೂ ಪತ್ರ ಬರೆದಿದ್ದೆ. ಅಧಿಕಾರಿಗಳದ್ದೇ ರಾಜ್ಯಭಾರವಾಗಿದೆ’ ಎಂದು ದೂರಿದರು. ಜಲಸಂಪನ್ಮೂಲ, ಲೋಕೋಪಯೋಗಿ, ಆರೋಗ್ಯ ಇಲಾಖೆ, ಬಿಬಿಎಂಪಿ ಸೇರಿ ಹಲವು ಇಲಾಖೆಗಳಲ್ಲಿನ ಭ್ರಷ್ಟಾಚಾರದ ದಾಖಲೆಗಳನ್ನು ಸಲ್ಲಿಸಲಾಗಿದೆ. ಆಡಿಯೊ, ವಿಡಿಯೊ ಜೊತೆಗೆ 6 ಸಾವಿರ ಪುಟಗಳ ದಾಖಲೆ ಸಮಿತಿಗೆ ನೀಡಲಾಗಿದೆ ಎನ್ನಲಾಗಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>