<p><strong>ಮಂಡ್ಯ</strong>: ‘ರಾಜ್ಯದಲ್ಲಿ 48 ಲಕ್ಷ ಪಹಣಿಗಳು ಇನ್ನೂ ಸತ್ತವರ ಹೆಸರಿನಲ್ಲಿವೆ. ಕಂದಾಯ ದಾಖಲೆಗಳ ನಿರ್ವಹಣೆ ಅಂದ್ರೆ ಇದೇನಾ? ಪೌತಿ ಖಾತೆಯನ್ನು ಮಾಡಲು ಅಧಿಕಾರಿಗಳು ಏಕೆ ವಿಳಂಬ ಮಾಡುತ್ತಿದ್ದೀರಿ? ಈ 48 ಲಕ್ಷ ಜಮೀನುಗಳಿಗೆ ವಾರಸುದಾರರು ಯಾರು?’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. </p><p>ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸತ್ತವರನ್ನು ಜಮೀನಿನ ಮಾಲೀಕರೆಂದು ಪರಿಗಣಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.</p><p>‘ಮಂಡ್ಯ ಜಿಲ್ಲೆಯಲ್ಲಿ 2.90 ಲಕ್ಷ ಜಮೀನುಗಳು ಇನ್ನೂ ಸತ್ತವರ ಹೆಸರಿನಲ್ಲೇ ಇವೆ. ಕಂದಾಯ ನಿರೀಕ್ಷಕರು, ಶಿರಸ್ತೇದಾರ್, ತಹಶೀಲ್ದಾರ್ ಈ ಮೂವರು ಸ್ಥಳ ಮಹಜರು ನಡೆಸಿ, ವಂಶವೃಕ್ಷ ಆಧರಿಸಿ ಪೌತಿ ಖಾತೆ ಮಾಡಿಕೊಡಿ. ಬದುಕಿರುವವರ ಹೆಸರಿನಲ್ಲಿ ಆರ್ಟಿಸಿ ಬರಲಿ. ವಿವಾದವಿದ್ದರೆ ‘ಜಂಟಿ ಖಾತೆ’ಯನ್ನಾದರೂ ಮಾಡಿಕೊಡಿ. ಆಗ ಜಮೀನಿಗೆ ವಾರಸುದಾರರು ಯಾರು ಎಂಬುದು ಲೆಕ್ಕ ಸಿಗುತ್ತದೆ’ ಎಂದರು. </p><p>‘15 ವರ್ಷಗಳಿಂದ ಕೆರೆ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದರೂ ಇಂದಿಗೂ ಪೂರ್ಣಗೊಂಡಿಲ್ಲ. ಅಳತೆ ಮಾಡಿಕೊಟ್ಟ ನಂತರ ಗ್ರಾಮ ಪಂಚಾಯಿತಿಗಳು ಕೆರೆಯ ಮಾಲೀಕತ್ವ ವಹಿಸಿಕೊಳ್ಳಬೇಕು. ಇಲ್ಲದಿದ್ದರೆ ಮತ್ತೆ ಒತ್ತುವರಿಯಾಗುತ್ತದೆ. ಹೀಗಾದರೆ, ಇತರೆ ಸರ್ಕಾರಿ ಜಮೀನು ಒತ್ತುವರಿಯಾಗಿರುವುದನ್ನು ತೆರವುಗೊಳಿಸುವುದು ಯಾವಾಗ?’ ಎಂದು ಸಚಿವರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ರಾಜ್ಯದಲ್ಲಿ 48 ಲಕ್ಷ ಪಹಣಿಗಳು ಇನ್ನೂ ಸತ್ತವರ ಹೆಸರಿನಲ್ಲಿವೆ. ಕಂದಾಯ ದಾಖಲೆಗಳ ನಿರ್ವಹಣೆ ಅಂದ್ರೆ ಇದೇನಾ? ಪೌತಿ ಖಾತೆಯನ್ನು ಮಾಡಲು ಅಧಿಕಾರಿಗಳು ಏಕೆ ವಿಳಂಬ ಮಾಡುತ್ತಿದ್ದೀರಿ? ಈ 48 ಲಕ್ಷ ಜಮೀನುಗಳಿಗೆ ವಾರಸುದಾರರು ಯಾರು?’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. </p><p>ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ಕಂದಾಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸತ್ತವರನ್ನು ಜಮೀನಿನ ಮಾಲೀಕರೆಂದು ಪರಿಗಣಿಸಲು ಸಾಧ್ಯವೇ?’ ಎಂದು ಪ್ರಶ್ನಿಸಿದರು.</p><p>‘ಮಂಡ್ಯ ಜಿಲ್ಲೆಯಲ್ಲಿ 2.90 ಲಕ್ಷ ಜಮೀನುಗಳು ಇನ್ನೂ ಸತ್ತವರ ಹೆಸರಿನಲ್ಲೇ ಇವೆ. ಕಂದಾಯ ನಿರೀಕ್ಷಕರು, ಶಿರಸ್ತೇದಾರ್, ತಹಶೀಲ್ದಾರ್ ಈ ಮೂವರು ಸ್ಥಳ ಮಹಜರು ನಡೆಸಿ, ವಂಶವೃಕ್ಷ ಆಧರಿಸಿ ಪೌತಿ ಖಾತೆ ಮಾಡಿಕೊಡಿ. ಬದುಕಿರುವವರ ಹೆಸರಿನಲ್ಲಿ ಆರ್ಟಿಸಿ ಬರಲಿ. ವಿವಾದವಿದ್ದರೆ ‘ಜಂಟಿ ಖಾತೆ’ಯನ್ನಾದರೂ ಮಾಡಿಕೊಡಿ. ಆಗ ಜಮೀನಿಗೆ ವಾರಸುದಾರರು ಯಾರು ಎಂಬುದು ಲೆಕ್ಕ ಸಿಗುತ್ತದೆ’ ಎಂದರು. </p><p>‘15 ವರ್ಷಗಳಿಂದ ಕೆರೆ ಒತ್ತುವರಿ ತೆರವು ಕಾರ್ಯ ನಡೆಯುತ್ತಿದ್ದರೂ ಇಂದಿಗೂ ಪೂರ್ಣಗೊಂಡಿಲ್ಲ. ಅಳತೆ ಮಾಡಿಕೊಟ್ಟ ನಂತರ ಗ್ರಾಮ ಪಂಚಾಯಿತಿಗಳು ಕೆರೆಯ ಮಾಲೀಕತ್ವ ವಹಿಸಿಕೊಳ್ಳಬೇಕು. ಇಲ್ಲದಿದ್ದರೆ ಮತ್ತೆ ಒತ್ತುವರಿಯಾಗುತ್ತದೆ. ಹೀಗಾದರೆ, ಇತರೆ ಸರ್ಕಾರಿ ಜಮೀನು ಒತ್ತುವರಿಯಾಗಿರುವುದನ್ನು ತೆರವುಗೊಳಿಸುವುದು ಯಾವಾಗ?’ ಎಂದು ಸಚಿವರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>