<p><strong>ಬೆಂಗಳೂರು:</strong> ‘ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿಗತಿ ಕುರಿತು ಮನವರಿಕೆ ಮಾಡಲು ಚೆನ್ನೈಗೆ ತೆರಳಿ 48 ಗಂಟೆ ಕಾದರೂ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭೇಟಿಗೆ ಅವಕಾಶ ಸಿಗಲಿಲ್ಲ’ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯ ಹೇಳಿದರು.</p>.<p>‘ಬೆಂಗಳೂರಿನ ಕುಡಿಯುವ ನೀರಿನ ಬಿಕ್ಕಟ್ಟು, ಕರ್ನಾಟಕದ ಬರ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಡಲು, ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಪ್ರಾದೇಶಿಕ ಸಂಘರ್ಷವಾಗಿ ನೋಡುವ ಬದಲು, ಮಾನವೀಯ ನೆಲೆಯಲ್ಲಿ ಪರಿಗಣಿಸುವಂತೆ ಒತ್ತಾಯಿಸುವುದು ನನ್ನ ಭೇಟಿಯ ಉದ್ದೇಶವಾಗಿತ್ತು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಡಿಎಂಕೆ ಸಂಸದರು, ತಮಿಳುನಾಡು ನಾಯಕರ ಜತೆ ಚರ್ಚಿಸಿದೆ. ಅವರು ನನ್ನ ಸಲಹೆಗಳನ್ನು ಸ್ವೀಕರಿಸಿದರು. ಎರಡೂ ಸರ್ಕಾರಗಳು ಮುಕ್ತವಾಗಿ ಚರ್ಚಿಸಿದರೆ ಪರಿಹಾರ ದೊರೆಯುತ್ತದೆ ಎಂಬ ನಿಲುವನ್ನು ಅವರೆಲ್ಲರೂ ಹೊಂದಿದ್ದಾರೆ. ಹಾಗಾಗಿ, ಕರ್ನಾಟಕ, ತಮಿಳುನಾಡು ಮುಖ್ಯಮಂತ್ರಿಗಳು ಮಾತುಕತೆ ನಡೆಸಬೇಕು. ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬೇಕು’ ಎಂದರು.</p>.<p>ನ್ಯಾಯಾಲಯದ ಹೊರಗೆ ಈ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಬೇಕು ಎಂಬ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸಲಹೆ ಸ್ವಾಗತಾರ್ಹ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಾವೇರಿ ಕೊಳ್ಳದ ಜಲಾಶಯಗಳ ಸ್ಥಿತಿಗತಿ ಕುರಿತು ಮನವರಿಕೆ ಮಾಡಲು ಚೆನ್ನೈಗೆ ತೆರಳಿ 48 ಗಂಟೆ ಕಾದರೂ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಭೇಟಿಗೆ ಅವಕಾಶ ಸಿಗಲಿಲ್ಲ’ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯ ಹೇಳಿದರು.</p>.<p>‘ಬೆಂಗಳೂರಿನ ಕುಡಿಯುವ ನೀರಿನ ಬಿಕ್ಕಟ್ಟು, ಕರ್ನಾಟಕದ ಬರ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿಕೊಡಲು, ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಪ್ರಾದೇಶಿಕ ಸಂಘರ್ಷವಾಗಿ ನೋಡುವ ಬದಲು, ಮಾನವೀಯ ನೆಲೆಯಲ್ಲಿ ಪರಿಗಣಿಸುವಂತೆ ಒತ್ತಾಯಿಸುವುದು ನನ್ನ ಭೇಟಿಯ ಉದ್ದೇಶವಾಗಿತ್ತು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಡಿಎಂಕೆ ಸಂಸದರು, ತಮಿಳುನಾಡು ನಾಯಕರ ಜತೆ ಚರ್ಚಿಸಿದೆ. ಅವರು ನನ್ನ ಸಲಹೆಗಳನ್ನು ಸ್ವೀಕರಿಸಿದರು. ಎರಡೂ ಸರ್ಕಾರಗಳು ಮುಕ್ತವಾಗಿ ಚರ್ಚಿಸಿದರೆ ಪರಿಹಾರ ದೊರೆಯುತ್ತದೆ ಎಂಬ ನಿಲುವನ್ನು ಅವರೆಲ್ಲರೂ ಹೊಂದಿದ್ದಾರೆ. ಹಾಗಾಗಿ, ಕರ್ನಾಟಕ, ತಮಿಳುನಾಡು ಮುಖ್ಯಮಂತ್ರಿಗಳು ಮಾತುಕತೆ ನಡೆಸಬೇಕು. ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳಬೇಕು’ ಎಂದರು.</p>.<p>ನ್ಯಾಯಾಲಯದ ಹೊರಗೆ ಈ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಬೇಕು ಎಂಬ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಸಲಹೆ ಸ್ವಾಗತಾರ್ಹ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>