ಹಜ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ ಉಪಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಈ ಹಿಂದೆ ಹಿಜಾಬ್ ವಿವಾದ ತಲೆದೋರಿತ್ತು. ಇದರಿಂದ ಆತಂಕಗೊಂಡಿದ್ದ ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳು ಉನ್ನತ ಶಿಕ್ಷಣದಿಂದ ದೂರ ಸರಿದಿದ್ದರು. ಅವರನ್ನು ಮರಳಿ ಉನ್ನತ ಶಿಕ್ಷಣಕ್ಕೆ ತರುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಕಾಲೇಜು ಸ್ಥಾಪನೆ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದರು.