‘ಎಂ. ಚಂದ್ರಶೇಖರ್ ಒಬ್ಬ ಭ್ರಷ್ಟ ಅಧಿಕಾರಿ’ ಎಂದು ಕುಮಾರಸ್ವಾಮಿ ಆರೋಪಿಸಿದ್ದರು. ಚಂದ್ರಶೇಖರ್ ಸಹೋದ್ಯೋಗಿಗಳಿಗೆ ಬರೆದಿದ್ದ ಪತ್ರದಲ್ಲಿ ಜಾರ್ಜ್ ಬರ್ನಾರ್ಡ್ ಶಾ ಮಾತನ್ನು ಉಲ್ಲೇಖಿಸಿ, ‘ಹಂದಿಗಳೊಂದಿಗೆ ಎಂದಿಗೂ ಗುದ್ದಾಡಬೇಡಿ. ಗುದ್ದಾಡಿದರೆ ಹೊಲಸು ನಿಮಗೂ ಮೆತ್ತಿಕೊಳ್ಳುತ್ತದೆ, ಹಂದಿಗೂ ಮೆತ್ತಿಕೊಳ್ಳುತ್ತದೆ. ಆದರದು ಹಂದಿಗೆ ಇಷ್ಟವಾಗುತ್ತದೆ’ ಎಂದಿದ್ದರು. ಈ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಕೂಡ ಬರೆದಿರುವುದಾಗಿ ಕುಮಾರಸ್ವಾಮಿ ಹೇಳಿದ್ದರು.