ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂತನ ಪದಾಧಿಕಾರಿಗಳು ಆಯ್ಕೆಯಾದ 15 ದಿನಗಳಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಏರಲಾಗಿತ್ತು. ‘ಪದಾಧಿಕಾರಿಗಳು ಆಯ್ಕೆಯಾಗಿ ಒಂದು ವರ್ಷದವರೆಗೆ ಅವಿಶ್ವಾಸ ನಿರ್ಣಯ ಮಂಡಿಸುವಂತಿಲ್ಲ ಎಂದು ನಿಯಮಗಳಿಗೆ ತಿದ್ದುಪಡಿ ತರುವುದು ಸೂಕ್ತ ಎಂದು ಹೈಕೋರ್ಟ್ ಹೇಳಿತ್ತು’ ಎಂದರು.