<p>ಬೆಂಗಳೂರು: ಕಾಶ್ಮೀರ ಮೂಲದ ಸಮರ ಕಲೆ (ಮಾರ್ಷಲ್ ಆರ್ಟ್ಸ್) ‘ಸ್ಕಾಯ್’ ಅನ್ನು ಪಠ್ಯಕ್ರಮದ ಭಾಗವಾಗಿ ಅಳವಡಿಸಿಕೊಳ್ಳಲು ಅಪೋಲೊ ನ್ಯಾಷನಲ್ ಪಬ್ಲಿಕ್ ಶಾಲೆ ಮುಂದಾಗಿದೆ.</p>.<p>ಶಾಲೆಯಲ್ಲಿ ಈ ಕಾರ್ಯಕ್ರಮದ ಉದ್ಘಾಟನೆ ಇದೇ 25ರಂದು ನಡೆಯಲಿದೆ. ಭಾರತೀಯ ಸ್ಕಾಯ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಮೊಹಮದ್ ಅಲಿ, ಅಪೋಲೊ ನ್ಯಾಷನಲ್ ಪಬ್ಲಿಕ್ ಶಾಲೆಯ ಉಪಾಧ್ಯಕ್ಷರಾದ ಐಶ್ವರ್ಯಾ ಡಿಕೆಎಸ್ ಹೆಗಡೆ, ಅಂತರರಾಷ್ಟ್ರೀಯ ಸ್ವರ್ಣ ಪದಕ ವಿಜೇತೆ ಸಾನಿಯಾ ಸುಭಾಷ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.</p>.<p>ದೈಹಿಕ ಕ್ಷಮತೆ, ಮಾನಸಿಕ ಏಕಾಗ್ರತೆ ಹಾಗೂ ಆಧ್ಯಾತ್ಮಿಕ ಶಿಸ್ತು ಹೊಂದಿರುವ ಈ ಕಲೆಯನ್ನು ನುರಿತ ಸ್ಕಾಯ್ ಪಟುಗಳು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಿದ್ದಾರೆ. ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸುವ ಮೂಲಕ, ಈ ಕಲೆಯ ಮೇಲಿರುವ ಬದ್ಧತೆ ಹಾಗೂ ಕಾಳಜಿಯನ್ನು ಶಾಲಾ ಆಡಳಿ ಪ್ರದರ್ಶಿಸಿದೆ’ ಎಂದು ಪ್ರಾಂಶುಪಾಲರಾದ ಬಿ.ಎ. ವೇದಾವತಿ ಹೇಳಿದ್ದಾರೆ.</p>.<p>‘ಸ್ಕಾಯ್ ಸಮರ ಕಲೆಯ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಹೆಮ್ಮೆ, ಶಿಸ್ತು ಹಾಗೂ ಸ್ವಯಂ ಜಾಗೃತಿಯನ್ನು ಮೂಡಿಸುವುದು ಮೂಲ ಉದ್ದೇಶ’ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಾಶ್ಮೀರ ಮೂಲದ ಸಮರ ಕಲೆ (ಮಾರ್ಷಲ್ ಆರ್ಟ್ಸ್) ‘ಸ್ಕಾಯ್’ ಅನ್ನು ಪಠ್ಯಕ್ರಮದ ಭಾಗವಾಗಿ ಅಳವಡಿಸಿಕೊಳ್ಳಲು ಅಪೋಲೊ ನ್ಯಾಷನಲ್ ಪಬ್ಲಿಕ್ ಶಾಲೆ ಮುಂದಾಗಿದೆ.</p>.<p>ಶಾಲೆಯಲ್ಲಿ ಈ ಕಾರ್ಯಕ್ರಮದ ಉದ್ಘಾಟನೆ ಇದೇ 25ರಂದು ನಡೆಯಲಿದೆ. ಭಾರತೀಯ ಸ್ಕಾಯ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಮೊಹಮದ್ ಅಲಿ, ಅಪೋಲೊ ನ್ಯಾಷನಲ್ ಪಬ್ಲಿಕ್ ಶಾಲೆಯ ಉಪಾಧ್ಯಕ್ಷರಾದ ಐಶ್ವರ್ಯಾ ಡಿಕೆಎಸ್ ಹೆಗಡೆ, ಅಂತರರಾಷ್ಟ್ರೀಯ ಸ್ವರ್ಣ ಪದಕ ವಿಜೇತೆ ಸಾನಿಯಾ ಸುಭಾಷ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.</p>.<p>ದೈಹಿಕ ಕ್ಷಮತೆ, ಮಾನಸಿಕ ಏಕಾಗ್ರತೆ ಹಾಗೂ ಆಧ್ಯಾತ್ಮಿಕ ಶಿಸ್ತು ಹೊಂದಿರುವ ಈ ಕಲೆಯನ್ನು ನುರಿತ ಸ್ಕಾಯ್ ಪಟುಗಳು ಕಾರ್ಯಕ್ರಮದಲ್ಲಿ ಪ್ರದರ್ಶಿಸಲಿದ್ದಾರೆ. ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸುವ ಮೂಲಕ, ಈ ಕಲೆಯ ಮೇಲಿರುವ ಬದ್ಧತೆ ಹಾಗೂ ಕಾಳಜಿಯನ್ನು ಶಾಲಾ ಆಡಳಿ ಪ್ರದರ್ಶಿಸಿದೆ’ ಎಂದು ಪ್ರಾಂಶುಪಾಲರಾದ ಬಿ.ಎ. ವೇದಾವತಿ ಹೇಳಿದ್ದಾರೆ.</p>.<p>‘ಸ್ಕಾಯ್ ಸಮರ ಕಲೆಯ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಹೆಮ್ಮೆ, ಶಿಸ್ತು ಹಾಗೂ ಸ್ವಯಂ ಜಾಗೃತಿಯನ್ನು ಮೂಡಿಸುವುದು ಮೂಲ ಉದ್ದೇಶ’ ಎಂದೂ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>