ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ರಂಗನಾಥ ರೆಡ್ಡಿ, ‘ಪ್ರಕರಣದಲ್ಲಿ ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅಷ್ಟಕ್ಕೂ, ಅರ್ಜಿದಾರರ ವಿರುದ್ಧ ಹೊರಿಸಲಾಗಿರುವ ಆರೋಪಗಳು ಕಡಿಮೆ ಶಿಕ್ಷೆಯ ಪ್ರಮಾಣದವು ಮತ್ತು ಇವರಿಬ್ಬರೂ ಕೃತ್ಯದಲ್ಲಿ ಭಾಗಿಯಾಗಿಲ್ಲ. ಶವವನ್ನು ಸಾಗಿಸಿದ ನಂತರದ ಸನ್ನಿವೇಶಗಳಲ್ಲಿ ಹಣದ ಆಮಿಷಕ್ಕಾಗಿ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾರೆ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.