ಹೆದ್ದಾರಿಯಲ್ಲಿ ಗಂಟೆಗೆ 100 ಕಿ.ಮೀ. ವೇಗಮಿತಿ ನಿಯಮ ಅಳವಡಿಸಲಾಗಿದೆ. ಇದಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಾಲನೆ ಮಾಡಿದರೆ ಈ ದಂಡ ನಿಯಮ ಅನ್ವಯಸಲಿದೆ. ಈಗಾಗಲೇ ರಾಮನಗರ ಮತ್ತು ಚನ್ನಪಟ್ಟಣ ಉಪ ವಿಭಾಗದ ವ್ಯಾಪ್ತಿಯ ಸಂಚಾರ ಠಾಣೆ ಪೊಲೀಸರು ಸೋಮವಾರ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆದ್ದಾರಿ ಎರಡು ಕಡೆ ಸ್ಪೀಡ್ ರಡಾರ್ ಬಳಕೆ ಮಾಡಿಕೊಂಡು ವಾಹನಗಳ ಮೇಲೆ ನಿಗಾ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.