<p><strong>ದಾವಣಗೆರೆ:</strong> ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಗುರಿ ಇದ್ದು, ತಂದೆಯಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ,ವೈ,ವಿಜಯೇಂದ್ರ ಹೇಳಿದರು.</p><p>ರಾಜ್ಯ ಘಟಕ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರನ್ನು ಕಾರ್ಯಕರ್ತರು ಸ್ವಾಗತವನ್ನು ಸ್ವೀಕರಿಸಿ ಮಾತನಾಡಿ, 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸುವುದು ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.<br>6 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ರೈತ, ಬಡವರ ವಿರೋಧಿ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು. ಈ ನಿಟ್ಟಿನಲ್ಲಿ ದೇಶದ ಗಡಿ ಕಾಯುವ ಸೈನಿಕನಂತೆ ಬಿಜೆಪಯ ಕಾರ್ಯಕರ್ತರು ಮನೆ ಸೇರಿಕೊಳ್ಳದೇ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.</p><p>ತಂದೆಯಂತೆ ಕೆಲಸ ಮಾಡಿ ಮುಂದಿನ ದಿನಗಳಲ್ಲಿ ಬಿಜೆಪಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಅಲ್ಲಿಯವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದರು. ಜಿಲ್ಲಾ ಪ್ರವಾಸದ ವೇಳೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ. ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶ ಮಾಡೋಣ ಎಂದು ಹೇಳಿದರು,</p>.<h2>ಅದ್ದೂರಿ ಸ್ವಾಗತ</h2><p>ಬಿ,ವಿ,ವಿಜಯೇಂದ್ರ ಆಗಮಿಸುತ್ತಿದ್ದಂತೆಯೇ ಇಲ್ಲಿನ ಬಾಪೂಜಿ ಸಮುದಾಯ ಭವನದ ಎದುರು ಪಟಾಕಿ ಸಿಡಿಸಿ 60 ಅಡಿ ಉದ್ದದ ಬೃಹತ್ ಹೂವಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು.</p><p>ಬಿಜೆಪಿ ಮುಖಂಡ ಬಿ.ಟಿ.ಸಿದ್ದಪ್ಪ ಹಾಗೂ ಪುತ್ರ ಶ್ಯಾಮ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುಖಂಡರಾದ ಪಿ.ಸಿ,ಶ್ರೀನಿವಾಸ್ ಇತರರು ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಗುರಿ ಇದ್ದು, ತಂದೆಯಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ,ವೈ,ವಿಜಯೇಂದ್ರ ಹೇಳಿದರು.</p><p>ರಾಜ್ಯ ಘಟಕ ಅಧ್ಯಕ್ಷರಾದ ಮೇಲೆ ಮೊದಲ ಬಾರಿಗೆ ಆಗಮಿಸಿದ ಅವರನ್ನು ಕಾರ್ಯಕರ್ತರು ಸ್ವಾಗತವನ್ನು ಸ್ವೀಕರಿಸಿ ಮಾತನಾಡಿ, 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಕೈ ಬಲಪಡಿಸುವುದು ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.<br>6 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ರೈತ, ಬಡವರ ವಿರೋಧಿ ಪಕ್ಷ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದು. ಈ ನಿಟ್ಟಿನಲ್ಲಿ ದೇಶದ ಗಡಿ ಕಾಯುವ ಸೈನಿಕನಂತೆ ಬಿಜೆಪಯ ಕಾರ್ಯಕರ್ತರು ಮನೆ ಸೇರಿಕೊಳ್ಳದೇ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.</p><p>ತಂದೆಯಂತೆ ಕೆಲಸ ಮಾಡಿ ಮುಂದಿನ ದಿನಗಳಲ್ಲಿ ಬಿಜೆಪಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಅಲ್ಲಿಯವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದರು. ಜಿಲ್ಲಾ ಪ್ರವಾಸದ ವೇಳೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ. ಲಕ್ಷಾಂತರ ಜನರನ್ನು ಸೇರಿಸಿ ಸಮಾವೇಶ ಮಾಡೋಣ ಎಂದು ಹೇಳಿದರು,</p>.<h2>ಅದ್ದೂರಿ ಸ್ವಾಗತ</h2><p>ಬಿ,ವಿ,ವಿಜಯೇಂದ್ರ ಆಗಮಿಸುತ್ತಿದ್ದಂತೆಯೇ ಇಲ್ಲಿನ ಬಾಪೂಜಿ ಸಮುದಾಯ ಭವನದ ಎದುರು ಪಟಾಕಿ ಸಿಡಿಸಿ 60 ಅಡಿ ಉದ್ದದ ಬೃಹತ್ ಹೂವಿನ ಹಾರವನ್ನು ಕ್ರೇನ್ ಮೂಲಕ ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು.</p><p>ಬಿಜೆಪಿ ಮುಖಂಡ ಬಿ.ಟಿ.ಸಿದ್ದಪ್ಪ ಹಾಗೂ ಪುತ್ರ ಶ್ಯಾಮ್ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮುಖಂಡರಾದ ಪಿ.ಸಿ,ಶ್ರೀನಿವಾಸ್ ಇತರರು ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>