<p><strong>ಬೆಳಗಾವಿ:</strong> ‘ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಮಣೆ ಹಾಕುವ ಅಗತ್ಯವಿಲ್ಲ. ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣಕುರುಡುತನ ತೋರುವ ನಾಯಕರೂ ಭಾರಿ ಬೆಲೆ ತೆರಬೇಕಾದೀತು’ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಟ್ವಿಟ್ ಮೂಲಕ ಕಿಡಿ ಕಾರಿದ್ದಾರೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಯಾರ ಹೆಸರನ್ನೂ ಉಲ್ಲೇಖಿಸದೆ ಅವರು ಟ್ವಿಟರ್ನಲ್ಲಿ ದಾಳಿ ಮಾಡಿದ್ದಾರೆ.</p>.<p>‘ವಿರೋಧ ಪಕ್ಷದ ಶಾಸಕರೊಬ್ಬರು ಶಿಷ್ಟಾಚಾರ ಉಲ್ಲಂಘಟನೆ ಮಾಡಿದ್ದಾರೆ ಎಂದು ಟೀಕೆ ಮಾಡುವವರು, ತಮ್ಮದೇ ಪಕ್ಷದ ಸಂಸದರನ್ನು ಅದೇ ಕಾರ್ಯಕ್ರಮದಲ್ಲಿ ಜತೆಗೂಡಿಸಿಕೊಂಡು ಹೋಗದಿರುವ ಹೃದಯ ವೈಶಾಲ್ಯತೆಗೆ ಜನ ಏನಂದಾರು ಎಂಬ ಕನಿಷ್ಠ ಜ್ಞಾನವಿರಬೇಕು’ ಎಂದು ದೂರಿದ್ದಾರೆ.</p>.<p>‘ನಮ್ಮ ಕುಟುಂಬದ ಸದಸ್ಯರು, ನಮ್ಮ ಕಚೇರಿ ಸಿಬ್ಬಂದಿ ಸರ್ಕಾರಿ ಯೋಜನೆಗಳ ಅಡಿಗಲ್ಲು, ಉದ್ಘಾಟನೆ ಮಾಡಬಹುದು. ಆದರೆ, ನಾನು ಹೋದಲ್ಲೆಲ್ಲ ಚುನಾಯಿತ ಪ್ರತಿನಿಧಿಗಳಿಗೂ ಅವಕಾಶ ನೀಡದಿರುವ ನಮ್ಮ ಬಗ್ಗೆ ಜನ ಏನಂದಾರು? ಎಂಬ ಕನಿಷ್ಠ ವಿವೇಚನೆ ನಮಗಿರಬೇಕು’ ಎಂದೂ ಬರೆದಿದ್ದಾರೆ.</p>.<p>‘ಪರಿವಾರ ವಾದವನ್ನು ವಿರೋಧಿಸುವ ಮೌಲ್ಯಾಧಾರಿತ ಪಕ್ಷಕ್ಕೆ ನಾವೇ ಒಂದು ಕಳಂಕವಾಗಬಾರದು. ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಕೂಡ ಮಣೆ ಹಾಕುವ ಅಗತ್ಯವಿಲ್ಲ’ ಎಂದೂ ಬರೆದಿದ್ದಾರೆ.</p>.<p>ಗೋಕಾಕದಲ್ಲಿ ಬುಧವಾರ ಶಾಸಕ ರಮೇಶ ಜಾರಕಿಹೊಳಿ ಅವರು ಘಟ್ಟಿ ಬಸವಣ್ಣ ಏತ ನೀರಾವರಿ ಯೋಜನೆ ಉದ್ಘಾಟನಾ ಸಮಾರಂಭ ಮಾಡಿದ್ದಾರೆ. ಅದಕ್ಕೆ ಈರಣ್ಣ ಕಡಾಡಿ ಅವರನ್ನು ಆಹ್ವಾನಿಸಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಬೆಳಗಾವಿ ತಾಲ್ಲೂಕಿನ ರಾಜಹಂಸಗಡ ಕೋಟೆಯಲ್ಲಿ ನಡೆದ ಶಿವಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆ ಸಮಾರಂಭದಲ್ಲೂ ಅವರು ಇರಲಿಲ್ಲ.</p>.<p>ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಈರಣ್ಣ ಕಡಾಡಿ, ‘₹ 4 ಕೋಟಿ ವೆಚ್ಚದ ರಾಜಹಂಸಗಡ ಕೋಟೆ ಕಾಮಗಾರಿ ಉದ್ಘಾಟನೆಗೆ ಮುಖ್ಯಮಂತ್ರಿ ಅವರನ್ನು ಕರೆಸಿದ್ದಾರೆ. ₹ 2,000 ಕೋಟಿಯ ಯೋಜನೆಗಳ ಚಾಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಕರೆಸಿದ್ದೇವೆ. ಆದರೆ, ₹900 ಕೋಟಿ ವೆಚ್ಚದ ಬೃಹತ್ ಯೋಜನೆಗೆ ಯಾರನ್ನೂ ಕರೆಸಿಲ್ಲ. ತಮ್ಮ ಮನೆಯ ಕಾರ್ಯಕ್ರಮ ಎಂಬಂತೆ ತಾವೇ ಮಾಡಿಕೊಂಡಿದ್ದಾರೆ. ಸೌಜನ್ಯಕ್ಕೂ ನನಗೆ ಆಹ್ವಾನ ನೀಡಿಲ್ಲ. ದೊಡ್ಡ ಯೋಜನೆಗೆ ದೊಡ್ಡ ನಾಯಕರನ್ನು ಕರೆಸಿ ಪಕ್ಷದ ವರ್ಚಸ್ಸು ಬೆಳೆಸಿಕೊಳ್ಳಬಹುದಿತ್ತು. ಅವರ (ರಮೇಶ ಜಾರಕಿಹೊಳಿ) ಈ ನಡೆಯಿಂದ ನನಗೆ ಹಕ್ಯುಚ್ಯುತಿ ಆಗಿದೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಮಣೆ ಹಾಕುವ ಅಗತ್ಯವಿಲ್ಲ. ಪ್ರಜಾ ವಿರೋಧಿ ನೀತಿಗಳ ಬಗ್ಗೆ ಜಾಣಕುರುಡುತನ ತೋರುವ ನಾಯಕರೂ ಭಾರಿ ಬೆಲೆ ತೆರಬೇಕಾದೀತು’ ಎಂದು ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಟ್ವಿಟ್ ಮೂಲಕ ಕಿಡಿ ಕಾರಿದ್ದಾರೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಯಾರ ಹೆಸರನ್ನೂ ಉಲ್ಲೇಖಿಸದೆ ಅವರು ಟ್ವಿಟರ್ನಲ್ಲಿ ದಾಳಿ ಮಾಡಿದ್ದಾರೆ.</p>.<p>‘ವಿರೋಧ ಪಕ್ಷದ ಶಾಸಕರೊಬ್ಬರು ಶಿಷ್ಟಾಚಾರ ಉಲ್ಲಂಘಟನೆ ಮಾಡಿದ್ದಾರೆ ಎಂದು ಟೀಕೆ ಮಾಡುವವರು, ತಮ್ಮದೇ ಪಕ್ಷದ ಸಂಸದರನ್ನು ಅದೇ ಕಾರ್ಯಕ್ರಮದಲ್ಲಿ ಜತೆಗೂಡಿಸಿಕೊಂಡು ಹೋಗದಿರುವ ಹೃದಯ ವೈಶಾಲ್ಯತೆಗೆ ಜನ ಏನಂದಾರು ಎಂಬ ಕನಿಷ್ಠ ಜ್ಞಾನವಿರಬೇಕು’ ಎಂದು ದೂರಿದ್ದಾರೆ.</p>.<p>‘ನಮ್ಮ ಕುಟುಂಬದ ಸದಸ್ಯರು, ನಮ್ಮ ಕಚೇರಿ ಸಿಬ್ಬಂದಿ ಸರ್ಕಾರಿ ಯೋಜನೆಗಳ ಅಡಿಗಲ್ಲು, ಉದ್ಘಾಟನೆ ಮಾಡಬಹುದು. ಆದರೆ, ನಾನು ಹೋದಲ್ಲೆಲ್ಲ ಚುನಾಯಿತ ಪ್ರತಿನಿಧಿಗಳಿಗೂ ಅವಕಾಶ ನೀಡದಿರುವ ನಮ್ಮ ಬಗ್ಗೆ ಜನ ಏನಂದಾರು? ಎಂಬ ಕನಿಷ್ಠ ವಿವೇಚನೆ ನಮಗಿರಬೇಕು’ ಎಂದೂ ಬರೆದಿದ್ದಾರೆ.</p>.<p>‘ಪರಿವಾರ ವಾದವನ್ನು ವಿರೋಧಿಸುವ ಮೌಲ್ಯಾಧಾರಿತ ಪಕ್ಷಕ್ಕೆ ನಾವೇ ಒಂದು ಕಳಂಕವಾಗಬಾರದು. ವ್ಯಕ್ತಿಯೊಬ್ಬರ ತೆವಲುಗಳಿಗೆ ಪಕ್ಷ ಕೂಡ ಮಣೆ ಹಾಕುವ ಅಗತ್ಯವಿಲ್ಲ’ ಎಂದೂ ಬರೆದಿದ್ದಾರೆ.</p>.<p>ಗೋಕಾಕದಲ್ಲಿ ಬುಧವಾರ ಶಾಸಕ ರಮೇಶ ಜಾರಕಿಹೊಳಿ ಅವರು ಘಟ್ಟಿ ಬಸವಣ್ಣ ಏತ ನೀರಾವರಿ ಯೋಜನೆ ಉದ್ಘಾಟನಾ ಸಮಾರಂಭ ಮಾಡಿದ್ದಾರೆ. ಅದಕ್ಕೆ ಈರಣ್ಣ ಕಡಾಡಿ ಅವರನ್ನು ಆಹ್ವಾನಿಸಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಬೆಳಗಾವಿ ತಾಲ್ಲೂಕಿನ ರಾಜಹಂಸಗಡ ಕೋಟೆಯಲ್ಲಿ ನಡೆದ ಶಿವಾಜಿ ಮಹಾರಾಜರ ಪ್ರತಿಮೆ ಉದ್ಘಾಟನೆ ಸಮಾರಂಭದಲ್ಲೂ ಅವರು ಇರಲಿಲ್ಲ.</p>.<p>ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಈರಣ್ಣ ಕಡಾಡಿ, ‘₹ 4 ಕೋಟಿ ವೆಚ್ಚದ ರಾಜಹಂಸಗಡ ಕೋಟೆ ಕಾಮಗಾರಿ ಉದ್ಘಾಟನೆಗೆ ಮುಖ್ಯಮಂತ್ರಿ ಅವರನ್ನು ಕರೆಸಿದ್ದಾರೆ. ₹ 2,000 ಕೋಟಿಯ ಯೋಜನೆಗಳ ಚಾಲನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಕರೆಸಿದ್ದೇವೆ. ಆದರೆ, ₹900 ಕೋಟಿ ವೆಚ್ಚದ ಬೃಹತ್ ಯೋಜನೆಗೆ ಯಾರನ್ನೂ ಕರೆಸಿಲ್ಲ. ತಮ್ಮ ಮನೆಯ ಕಾರ್ಯಕ್ರಮ ಎಂಬಂತೆ ತಾವೇ ಮಾಡಿಕೊಂಡಿದ್ದಾರೆ. ಸೌಜನ್ಯಕ್ಕೂ ನನಗೆ ಆಹ್ವಾನ ನೀಡಿಲ್ಲ. ದೊಡ್ಡ ಯೋಜನೆಗೆ ದೊಡ್ಡ ನಾಯಕರನ್ನು ಕರೆಸಿ ಪಕ್ಷದ ವರ್ಚಸ್ಸು ಬೆಳೆಸಿಕೊಳ್ಳಬಹುದಿತ್ತು. ಅವರ (ರಮೇಶ ಜಾರಕಿಹೊಳಿ) ಈ ನಡೆಯಿಂದ ನನಗೆ ಹಕ್ಯುಚ್ಯುತಿ ಆಗಿದೆ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>