ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿ.ಟಿ.ದೇವೇಗೌಡರು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಎಫ್ಐಆರ್ ದಾಖಲಾದ ಎಲ್ಲರೂ ರಾಜೀನಾಮೆ ನೀಡಬೇಕು ಎಂದಿದ್ದಾರೆ. ಅವರ ಹೇಳಿಕೆ ಅವರನ್ನು ರಕ್ಷಿಸಿಕೊಳ್ಳುವ ರೀತಿ ಇದೆ. ಮುಡಾ ನಿವೇಶನ ಹಂಚಿಕೆಯ ಎಲ್ಲ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದರೆ ಸತ್ಯಾಂಶ ಹೊರಬರಲಿದೆ’ ಎಂದರು.