<p><strong>ನವದೆಹಲಿ:</strong> ಮುಂದಿನ 15 ದಿನಗಳಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಖಾತೆಗಳ ಕುರಿತು ಅಭಿವೃದ್ಧಿ ಮುನ್ನೋಟ ಹಾಗೂ ನೀಲನಕ್ಷೆ ಸಿದ್ಧಪಡಿಸುತ್ತೇನೆ ಎಂದು ಕೇಂದ್ರದ ನೂತನ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. </p>.<p>ಉಭಯ ಇಲಾಖೆಗಳ ಅಧಿಕಾರಿಗಳೊಂದಿಗೆ ಕರ್ನಾಟಕ ಭವನದಲ್ಲಿ ಸೋಮವಾರ ರಾತ್ರಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನನ್ನ ಮೇಲೆ ವಿಶ್ವಾಸ ಇಟ್ಟು ಮೋದಿ ಅವರು ಒಳ್ಳೆಯ ಖಾತೆಯನ್ನೇ ನೀಡಿದ್ದಾರೆ. ದೇಶದ ಅಭಿವೃದ್ಧಿಯು ಈ ಖಾತೆಯಲ್ಲಿ ಅಡಗಿದೆ ಎಂಬುದು ನನ್ನ ನಂಬಿಕೆ’ ಎಂದರು. </p>.<p>‘ಇಂಥ ದೊಡ್ಡ ಇಲಾಖೆ ನಿರ್ವಹಣೆ ಮಾಡಬೇಕಿದೆ. ವಿಎಸ್ಎಲ್ ಸೇರಿ ಕೈಗಾರಿಕೆಗಳಿಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಇವೆ. ಇದಕ್ಕೆ ಪರಿಹಾರ ಹುಡುಕಬೇಕಿದೆ. ಯುವಕರಿಗೆ ಉದ್ಯೋಗ ನೀಡಲು ಗಮನ ಕೊಡಬೇಕಿದೆ’ ಎಂದರು. </p>.<p>ತಯಾರಿಕಾ ಕ್ಷೇತ್ರದಲ್ಲಿ ಬಹಳ ನಿರೀಕ್ಷೆಗಳು ಇವೆ. ಇಲಾಖೆಯಲ್ಲಿ ಹೊಸ ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಉದ್ಯಮಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಕರ್ನಾಟಕಕ್ಕೆ ಒಳ್ಳೆಯ ದಿನಗಳು ಪ್ರಾರಂಭವಾಗಿವೆ. ಹಾಗಾಗಿ, ಪ್ರಧಾನಿ ನಮಗೆ ಉತ್ತಮ ಖಾತೆ ನೀಡಿದ್ದಾರೆ ಎಂದರು. </p>.<p>ಎಚ್.ಡಿ.ದೇವೇಗೌಡರ ರಾಜಕೀಯ ಮುಗಿದೇ ಹೋಯಿತು ಎಂದವರಿಗೆ ಉತ್ತರ ಸಿಕ್ಕಿದೆ. ನಮ್ಮ ಪಕ್ಷ ಪುಟಿದೆದ್ದು ಬಂದಿದೆ. ಕುಮಾರಸ್ವಾಮಿ ರಾಜಕೀಯ ಮುಗಿಯಿತು ಎಂದು ಅಪಪ್ರಚಾರ ನಡೆಸಿದರು. ಯಾವುದೋ ಒಂದು ಶಕ್ತಿ ನಮ್ಮ ಪಕ್ಷಕ್ಕೆ ಬಂದಿದೆ ಎಂದು ಅವರು ಪ್ರತಿಪಾದಿಸಿದರು. </p>.<p>ಕೆಜಿಎಫ್ ಗಣಿ ಪ್ರದೇಶದಲ್ಲಿ 12,000 ಎಕರೆ ಭೂಮಿಯನ್ನು ಕೈಗಾರಿಕೆ ಅಭಿವೃದ್ಧಿಗೆ ಬಳಸುವ ಬಗ್ಗೆ ಕೋಲಾರ ಸಂಸದ ಮಲ್ಲೇಶ್ ಬಾಬು ಪ್ರಸ್ತಾಪಿಸಿದರು. ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ ಗಣಿ ಭೂಮಿ ವ್ಯರ್ಥವಾಗಿ ಉಳಿದಿದೆ ಎಂದು ಸಚಿವರ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂದಿನ 15 ದಿನಗಳಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಖಾತೆಗಳ ಕುರಿತು ಅಭಿವೃದ್ಧಿ ಮುನ್ನೋಟ ಹಾಗೂ ನೀಲನಕ್ಷೆ ಸಿದ್ಧಪಡಿಸುತ್ತೇನೆ ಎಂದು ಕೇಂದ್ರದ ನೂತನ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. </p>.<p>ಉಭಯ ಇಲಾಖೆಗಳ ಅಧಿಕಾರಿಗಳೊಂದಿಗೆ ಕರ್ನಾಟಕ ಭವನದಲ್ಲಿ ಸೋಮವಾರ ರಾತ್ರಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನನ್ನ ಮೇಲೆ ವಿಶ್ವಾಸ ಇಟ್ಟು ಮೋದಿ ಅವರು ಒಳ್ಳೆಯ ಖಾತೆಯನ್ನೇ ನೀಡಿದ್ದಾರೆ. ದೇಶದ ಅಭಿವೃದ್ಧಿಯು ಈ ಖಾತೆಯಲ್ಲಿ ಅಡಗಿದೆ ಎಂಬುದು ನನ್ನ ನಂಬಿಕೆ’ ಎಂದರು. </p>.<p>‘ಇಂಥ ದೊಡ್ಡ ಇಲಾಖೆ ನಿರ್ವಹಣೆ ಮಾಡಬೇಕಿದೆ. ವಿಎಸ್ಎಲ್ ಸೇರಿ ಕೈಗಾರಿಕೆಗಳಿಗೆ ಸಂಬಂಧಿಸಿದ ಹಲವು ಸಮಸ್ಯೆಗಳು ಇವೆ. ಇದಕ್ಕೆ ಪರಿಹಾರ ಹುಡುಕಬೇಕಿದೆ. ಯುವಕರಿಗೆ ಉದ್ಯೋಗ ನೀಡಲು ಗಮನ ಕೊಡಬೇಕಿದೆ’ ಎಂದರು. </p>.<p>ತಯಾರಿಕಾ ಕ್ಷೇತ್ರದಲ್ಲಿ ಬಹಳ ನಿರೀಕ್ಷೆಗಳು ಇವೆ. ಇಲಾಖೆಯಲ್ಲಿ ಹೊಸ ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಉದ್ಯಮಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಕರ್ನಾಟಕಕ್ಕೆ ಒಳ್ಳೆಯ ದಿನಗಳು ಪ್ರಾರಂಭವಾಗಿವೆ. ಹಾಗಾಗಿ, ಪ್ರಧಾನಿ ನಮಗೆ ಉತ್ತಮ ಖಾತೆ ನೀಡಿದ್ದಾರೆ ಎಂದರು. </p>.<p>ಎಚ್.ಡಿ.ದೇವೇಗೌಡರ ರಾಜಕೀಯ ಮುಗಿದೇ ಹೋಯಿತು ಎಂದವರಿಗೆ ಉತ್ತರ ಸಿಕ್ಕಿದೆ. ನಮ್ಮ ಪಕ್ಷ ಪುಟಿದೆದ್ದು ಬಂದಿದೆ. ಕುಮಾರಸ್ವಾಮಿ ರಾಜಕೀಯ ಮುಗಿಯಿತು ಎಂದು ಅಪಪ್ರಚಾರ ನಡೆಸಿದರು. ಯಾವುದೋ ಒಂದು ಶಕ್ತಿ ನಮ್ಮ ಪಕ್ಷಕ್ಕೆ ಬಂದಿದೆ ಎಂದು ಅವರು ಪ್ರತಿಪಾದಿಸಿದರು. </p>.<p>ಕೆಜಿಎಫ್ ಗಣಿ ಪ್ರದೇಶದಲ್ಲಿ 12,000 ಎಕರೆ ಭೂಮಿಯನ್ನು ಕೈಗಾರಿಕೆ ಅಭಿವೃದ್ಧಿಗೆ ಬಳಸುವ ಬಗ್ಗೆ ಕೋಲಾರ ಸಂಸದ ಮಲ್ಲೇಶ್ ಬಾಬು ಪ್ರಸ್ತಾಪಿಸಿದರು. ಯಾವುದೇ ಉದ್ದೇಶಕ್ಕೆ ಬಳಕೆಯಾಗದೆ ಗಣಿ ಭೂಮಿ ವ್ಯರ್ಥವಾಗಿ ಉಳಿದಿದೆ ಎಂದು ಸಚಿವರ ಗಮನ ಸೆಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>