<p><strong>ಬೆಂಗಳೂರು</strong>: ‘ವಿರೋಧ ಪಕ್ಷಗಳ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ. ಈ ವಿಷಯದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.</p>.<p>ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಮುಖರ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. </p>.<p>‘ಸರ್ಕಾರ ದೂರವಾಣಿ ಕದ್ದಾಲಿಕೆ ಮಾಡುತ್ತಿಲ್ಲ ಎನ್ನುವುದಾದರೆ ಕದ್ದಾಲಿಕೆ ಉಪಕರಣಗಳು ಎಲ್ಲಿವೆ ಎಂಬುದರ ಬಗ್ಗೆ ತನಿಖೆ ಮಾಡಿಸಲಿ. ಅಂತಹ ಉಪಕರಣಗಳನ್ನು ವಶಕ್ಕೆ ತೆಗೆದುಕೊಂಡರೆ ಆಗ ಯಾರು ಕದ್ದಾಲಿಕೆ ಮಾಡಿದ್ದಾರೆ? ಯಾರು ಮಾಡಿಸಿದ್ದಾರೆ ಎಂಬ ಅಂಶ ಬಯಲಿಗೆ ಬರುತ್ತದೆ’ ಎಂದರು.</p>.<p>‘ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರ ಬಳಿ ಇರುವ ಮಾಹಿತಿಯಡಿ ಇದನ್ನು ಹೇಳಿದ್ದಾರೆ. ಯಾರೇ ಆಗಲಿ, ಈ ರೀತಿ ಕದ್ದಾಲಿಕೆ ಮಾಡಿಸುವುದು ಅಪರಾಧ. ಅಂತಹವರನ್ನೆಲ್ಲ ಜೈಲಿಗೆ ಕಳುಹಿಸಬೇಕು. ದೂರವಾಣಿ ಕದ್ದಾಲಿಕೆಯಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು’ ಎಂದು ಅಶೋಕ ಒತ್ತಾಯಿಸಿದರು.</p>.<p>ಸುಮಾರು ₹50 ಲಕ್ಷಕ್ಕೆ ಚೀನಾ ನಿರ್ಮಿತ ದೂರವಾಣಿ ಕದ್ದಾಲಿಕೆ ಉಪಕರಣಗಳು ಸಿಗುತ್ತವೆ. ಈ ರೀತಿ ಚೀನಾದಿಂದ ಎಷ್ಟು ದೂರವಾಣಿ ಕದ್ದಾಲಿಕೆ ಉಪಕರಣಗಳು ಬಂದಿವೆ. ಅವು ಯಾರ ಯಾರ ಮನೆಗಳಲ್ಲಿವೆ ಎಂಬುದನ್ನು ಪತ್ತೆ ಮಾಡಬೇಕು. ವಿದೇಶಿ ಉಪಕರಣಗಳ ಮೂಲಕ ಕದ್ದಾಲಿಕೆ ಮಾಡಿಸಿದರೆ ಇಲ್ಲಿನ ಪೊಲೀಸರಿಂದ ಏನು ಮಾಡುವುದಕ್ಕೂ ಸಾಧ್ಯವಿಲ್ಲ ಎಂದರು.</p>.<p><strong>ಎಲ್ಲ ಸ್ಥಾನಗಳನ್ನು ಗೆಲ್ಲಲು ಪ್ರಯತ್ನ:</strong></p>.<p>ಚುನಾವಣೆ ನಡೆಯುತ್ತಿರುವ ವಿಧಾನ ಪರಿಷತ್ತಿನ ಎಲ್ಲ ಆರು ಸ್ಥಾನಗಳನ್ನು ಗೆಲ್ಲುವ ಸಂಬಂಧ ಮಾಡಬೇಕಾದ ಪ್ರಯತ್ನಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅಶೋಕ ತಿಳಿಸಿದರು.</p>.<p>‘ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆ ಸಂಬಂಧ ಅಭ್ಯರ್ಥಿಗಳ ಕುರಿತು ಕೇಂದ್ರದ ನಾಯಕರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಈ ವಿಚಾರದಲ್ಲಿ ಗೊಂದಲಗಳೇನೂ ಇಲ್ಲ’ ಎಂದರು.</p>.<p>ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಎಸ್.ಸುರೇಶ್ ಕುಮಾರ್, ಮಾಜಿ ಸಚಿವ ಗೋವಿಂದ ಕಾರಜೋಳ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿರೋಧ ಪಕ್ಷಗಳ ನಾಯಕರ ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ. ಈ ವಿಷಯದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.</p>.<p>ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಮುಖರ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. </p>.<p>‘ಸರ್ಕಾರ ದೂರವಾಣಿ ಕದ್ದಾಲಿಕೆ ಮಾಡುತ್ತಿಲ್ಲ ಎನ್ನುವುದಾದರೆ ಕದ್ದಾಲಿಕೆ ಉಪಕರಣಗಳು ಎಲ್ಲಿವೆ ಎಂಬುದರ ಬಗ್ಗೆ ತನಿಖೆ ಮಾಡಿಸಲಿ. ಅಂತಹ ಉಪಕರಣಗಳನ್ನು ವಶಕ್ಕೆ ತೆಗೆದುಕೊಂಡರೆ ಆಗ ಯಾರು ಕದ್ದಾಲಿಕೆ ಮಾಡಿದ್ದಾರೆ? ಯಾರು ಮಾಡಿಸಿದ್ದಾರೆ ಎಂಬ ಅಂಶ ಬಯಲಿಗೆ ಬರುತ್ತದೆ’ ಎಂದರು.</p>.<p>‘ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರ ಬಳಿ ಇರುವ ಮಾಹಿತಿಯಡಿ ಇದನ್ನು ಹೇಳಿದ್ದಾರೆ. ಯಾರೇ ಆಗಲಿ, ಈ ರೀತಿ ಕದ್ದಾಲಿಕೆ ಮಾಡಿಸುವುದು ಅಪರಾಧ. ಅಂತಹವರನ್ನೆಲ್ಲ ಜೈಲಿಗೆ ಕಳುಹಿಸಬೇಕು. ದೂರವಾಣಿ ಕದ್ದಾಲಿಕೆಯಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು’ ಎಂದು ಅಶೋಕ ಒತ್ತಾಯಿಸಿದರು.</p>.<p>ಸುಮಾರು ₹50 ಲಕ್ಷಕ್ಕೆ ಚೀನಾ ನಿರ್ಮಿತ ದೂರವಾಣಿ ಕದ್ದಾಲಿಕೆ ಉಪಕರಣಗಳು ಸಿಗುತ್ತವೆ. ಈ ರೀತಿ ಚೀನಾದಿಂದ ಎಷ್ಟು ದೂರವಾಣಿ ಕದ್ದಾಲಿಕೆ ಉಪಕರಣಗಳು ಬಂದಿವೆ. ಅವು ಯಾರ ಯಾರ ಮನೆಗಳಲ್ಲಿವೆ ಎಂಬುದನ್ನು ಪತ್ತೆ ಮಾಡಬೇಕು. ವಿದೇಶಿ ಉಪಕರಣಗಳ ಮೂಲಕ ಕದ್ದಾಲಿಕೆ ಮಾಡಿಸಿದರೆ ಇಲ್ಲಿನ ಪೊಲೀಸರಿಂದ ಏನು ಮಾಡುವುದಕ್ಕೂ ಸಾಧ್ಯವಿಲ್ಲ ಎಂದರು.</p>.<p><strong>ಎಲ್ಲ ಸ್ಥಾನಗಳನ್ನು ಗೆಲ್ಲಲು ಪ್ರಯತ್ನ:</strong></p>.<p>ಚುನಾವಣೆ ನಡೆಯುತ್ತಿರುವ ವಿಧಾನ ಪರಿಷತ್ತಿನ ಎಲ್ಲ ಆರು ಸ್ಥಾನಗಳನ್ನು ಗೆಲ್ಲುವ ಸಂಬಂಧ ಮಾಡಬೇಕಾದ ಪ್ರಯತ್ನಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅಶೋಕ ತಿಳಿಸಿದರು.</p>.<p>‘ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ಆಯ್ಕೆ ಸಂಬಂಧ ಅಭ್ಯರ್ಥಿಗಳ ಕುರಿತು ಕೇಂದ್ರದ ನಾಯಕರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಈ ವಿಚಾರದಲ್ಲಿ ಗೊಂದಲಗಳೇನೂ ಇಲ್ಲ’ ಎಂದರು.</p>.<p>ಸಭೆಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಎಸ್.ಸುರೇಶ್ ಕುಮಾರ್, ಮಾಜಿ ಸಚಿವ ಗೋವಿಂದ ಕಾರಜೋಳ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>