<p><strong>ಬೆಂಗಳೂರು</strong>: ‘ರಾಜ್ಯ ಪಠ್ಯಕ್ರಮದ ಶಾಲೆಗಳ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ಮುಂದುವರಿಯುತ್ತೇವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ಕುಮಾರ್ ಸಿಂಗ್ ತಿಳಿಸಿದರು.</p>.<p>ಸುಪ್ರೀಂ ಕೋರ್ಟ್ ಸೋಮವಾರ ನೀಡಿದ ತೀರ್ಪು ಕುರಿತಂತೆ ಪ್ರತಿಕ್ರಿಯಿಸಿದ ಅವರು, ‘ಈಗಾಗಲೇ ಪರೀಕ್ಷೆ ಮುಗಿದು, ಸೋಮವಾರ ಫಲಿತಾಂಶವನ್ನು ಕೂಡ ಪ್ರಕಟಿಸಲಾಗಿದೆ. 2023-24ನೇ ಸಾಲಿನ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಮಂಗಳವಾರದಿಂದ ಬೇಸಿಗೆ ರಜೆ ನೀಡಲಾಗಿದೆ’ ಎಂದರು.</p>.<p>‘ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಕಾರಣಕ್ಕೆ ಮತ್ತೆ ಶಾಲೆಗಳನ್ನು ತೆರೆಯಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇವಿಯಟ್ ಸಲ್ಲಿಸಿಲ್ಲ. ಆದ್ದರಿಂದ, ನಾವು ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಅವರಿಂದ ಸಲಹೆ ಪಡೆಯುತ್ತೇವೆ’ ಎಂದೂ ತಿಳಿಸಿದರು.</p>.<p><strong>ಗೊಂದಲ ನಿವಾರಿಸಿ</strong>: ‘ರಾಜ್ಯ ಹೈಕೋರ್ಟ್ನ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆರ್ಟಿಇ ಕಾಯ್ದೆ ಉಲ್ಲಂಘಿಸಿ ನಡೆಸಿದ ಪರೀಕ್ಷೆ ಅಸಿಂಧುವಾಗಿದೆ. ಹೀಗಾಗಿ, 5,8 ಮತ್ತು 9ನೇ ತರಗತಿ ಫಲಿತಾಂಶ ಪ್ರಕಟಿಸುವಂತೆ ಇಲ್ಲ. ಒಂದು ವೇಳೆ ಪ್ರಕಟಿಸಿದ್ದರೆ ಮಾನ್ಯತೆ ನೀಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಮತ್ತು ಪೋಷಕರಿಗೆ ಉಂಟಾಗಿರುವ ಗೊಂದಲ ನಿವಾರಿಸಲು ಇಲಾಖೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಅಷ್ಟೆ ಅಲ್ಲ, ಇನ್ನಾದರೂ ಇಲಾಖೆಯ ಅಧಿಕಾರಿಗಳು ಶಿಕ್ಷಣ ಹಕ್ಕು ಕಾಯ್ದೆ ನಿಯಮಗಳನ್ನು ಪಾಲಿಸಬೇಕು’ ಎಂದು ರುಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ರಾಜ್ಯ ಪಠ್ಯಕ್ರಮದ ಶಾಲೆಗಳ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ಮುಂದುವರಿಯುತ್ತೇವೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ಕುಮಾರ್ ಸಿಂಗ್ ತಿಳಿಸಿದರು.</p>.<p>ಸುಪ್ರೀಂ ಕೋರ್ಟ್ ಸೋಮವಾರ ನೀಡಿದ ತೀರ್ಪು ಕುರಿತಂತೆ ಪ್ರತಿಕ್ರಿಯಿಸಿದ ಅವರು, ‘ಈಗಾಗಲೇ ಪರೀಕ್ಷೆ ಮುಗಿದು, ಸೋಮವಾರ ಫಲಿತಾಂಶವನ್ನು ಕೂಡ ಪ್ರಕಟಿಸಲಾಗಿದೆ. 2023-24ನೇ ಸಾಲಿನ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಮಂಗಳವಾರದಿಂದ ಬೇಸಿಗೆ ರಜೆ ನೀಡಲಾಗಿದೆ’ ಎಂದರು.</p>.<p>‘ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಕಾರಣಕ್ಕೆ ಮತ್ತೆ ಶಾಲೆಗಳನ್ನು ತೆರೆಯಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇವಿಯಟ್ ಸಲ್ಲಿಸಿಲ್ಲ. ಆದ್ದರಿಂದ, ನಾವು ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಅವರಿಂದ ಸಲಹೆ ಪಡೆಯುತ್ತೇವೆ’ ಎಂದೂ ತಿಳಿಸಿದರು.</p>.<p><strong>ಗೊಂದಲ ನಿವಾರಿಸಿ</strong>: ‘ರಾಜ್ಯ ಹೈಕೋರ್ಟ್ನ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಆರ್ಟಿಇ ಕಾಯ್ದೆ ಉಲ್ಲಂಘಿಸಿ ನಡೆಸಿದ ಪರೀಕ್ಷೆ ಅಸಿಂಧುವಾಗಿದೆ. ಹೀಗಾಗಿ, 5,8 ಮತ್ತು 9ನೇ ತರಗತಿ ಫಲಿತಾಂಶ ಪ್ರಕಟಿಸುವಂತೆ ಇಲ್ಲ. ಒಂದು ವೇಳೆ ಪ್ರಕಟಿಸಿದ್ದರೆ ಮಾನ್ಯತೆ ನೀಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಮತ್ತು ಪೋಷಕರಿಗೆ ಉಂಟಾಗಿರುವ ಗೊಂದಲ ನಿವಾರಿಸಲು ಇಲಾಖೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಅಷ್ಟೆ ಅಲ್ಲ, ಇನ್ನಾದರೂ ಇಲಾಖೆಯ ಅಧಿಕಾರಿಗಳು ಶಿಕ್ಷಣ ಹಕ್ಕು ಕಾಯ್ದೆ ನಿಯಮಗಳನ್ನು ಪಾಲಿಸಬೇಕು’ ಎಂದು ರುಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>